ವಾಣಿಜ್ಯ

ಡಿಸೆಂಬರ್‌ 4ಕ್ಕೆ ಬಿಡುಗಡೆಯಾಗುತ್ತಿದೆ ಒನ್‌ಪ್ಲಸ್‌ 12

ಮೊಬೈಲ್‌ ಪ್ರಿಯರು ಬಹುದಿನಗಳಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಒನ್‌ಪ್ಲಸ್ 12 ಸ್ಮಾರ್ಟ್‌ ಫೋನ್‌ ಬಿಡುಗಡೆಗೆ ದಿನಾಂಕ ನಿಗಧಿಯಾಗಿದೆ. ಇದೇ ಡಿಸೆಂಬರ್‌ 4 ರಂದು ಕಂಪನಿಯು ತನ್ನ 10 ನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಅದೇ ದಿನದಂದು ಒನ್‌ಪ್ಲಸ್ 12 ಸ್ಮಾರ್ಟ್‌ ಫೋನ್‌ ಅನ್ನೂ ಕೂಡ ಬಿಡುಗಡೆ ಮಾಡಲು ಕಂಪನಿ ಸಿದ್ಧತೆ ಮಾಡಿಕೊಂಡಿದೆ.

ಬಿಡುಗಡೆಗೂ ಮುನ್ನವೇ ಒನ್‌ಪ್ಲಸ್‌ 12 ನ ಕೆಲವು ಫೀಚರ್ಸ್ ಗಳು ಮೊಬೈಲ್‌ ಪ್ರಿಯರನ್ನು ಸೆಳೆಯುತ್ತಿವೆ. ಅಧಿಕೃತವಾಗಿ ಈ ಫೋನಿನ ಫೀಚರ್ಸ್‌ ನ ಬಗೆಗಿನ ಮಾಹಿತಿ ತಿಳಿದುಬಂದಿಲ್ಲವಾದರೂ ಕೆಲವು ಟಿಪ್‌ಸ್ಟರ್ ಗಳು ಈ ಫೋನಿನ ರಿವ್ಯೂ ನೀಡಿದ್ದಾರೆ.

ರಿವ್ಯೂ ಪ್ರಕಾರ ಈ ಮೊಬೈಲ್‌ ಪೇಲ್‌ ಗ್ರೀನ್‌, ರಾಕ್‌ ಬ್ಲ್ಯಾಕ್‌ ಮತ್ತು ವೈಟ್‌, ಮೂರು ಬಣ್ಣಗಳಲ್ಲಿ ಲಭ್ಯವಿರಲಿದ್ದು, ನಯವಾದ ವಿನ್ಯಾಸದೊಂದಿಗೆ ಟ್ರಿಪಲ್‌ ಕ್ಯಾಮೆರಾ ಸೆಟಪ್‌ ಅನ್ನು ಹೋಂದಿರಲಿದೆ, ಪೆರಿಸ್ಕೋಪ್‌ ಜೂಮ್‌ ಲೆನ್ಸ್‌ ಹೊಂದಿರುವ ಈ ಮೋಬೈಲ್‌ ನಲ್ಲಿ ಟೆಲಿಫೋಟೊ ಲೆನ್ಸ್‌ ಅಳವಡಿಸಲಾಗಿದೆ. ಇದರಿಂದ ಅತ್ಯುತ್ತಮವಾದ ಫೋಟೋಗಳನ್ನು ಸೆರೆಹಿಡಿಯಲು ಅನುಕೂಲವಾಗುತ್ತದೆ.

ಆರಂಭದಲ್ಲಿ ಈ ಒನ್‌ಪ್ಲಸ್ 12 ಸ್ಮಾರ್ಟ್‌ ಫೋನ್‌ ಚೀನಾದಲ್ಲಿ ಬಿಡುಗಡೆಯಾಗಲಿದೆ. ನಂತರ ಜನವರಿಯ ಬಳಿಕ ಗ್ಲೋಬಲ್‌ ಮಾರ್ಕೆಟ್‌ ಗೆ ಲಗ್ಗೆ ಇಡಲಿದೆ.

ಕಳೆದ ವರ್ಷ ಭಾರತದಲ್ಲಿ ಒನ್‌ಪ್ಲಸ್ 11 ಸ್ಮಾರ್ಟ್‌ ಫೋನ್‌ ಅನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಕಂಪನಿಯು ಒನ್‌ಪ್ಲಸ್ 12 ಬಿಡುಗಡೆಗೆ ಸಜ್ಜಾಗಿದ್ದು, ಭಾರತದಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದು ಇನ್ನೂ ಕೂಡ ತಿಳಿದುಬಂದಿಲ್ಲ.

lokesh

Share
Published by
lokesh

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

15 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago