ವಾಣಿಜ್ಯ

ಡಿಸೆಂಬರ್‌ 4ಕ್ಕೆ ಬಿಡುಗಡೆಯಾಗುತ್ತಿದೆ ಒನ್‌ಪ್ಲಸ್‌ 12

ಮೊಬೈಲ್‌ ಪ್ರಿಯರು ಬಹುದಿನಗಳಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಒನ್‌ಪ್ಲಸ್ 12 ಸ್ಮಾರ್ಟ್‌ ಫೋನ್‌ ಬಿಡುಗಡೆಗೆ ದಿನಾಂಕ ನಿಗಧಿಯಾಗಿದೆ. ಇದೇ ಡಿಸೆಂಬರ್‌ 4 ರಂದು ಕಂಪನಿಯು ತನ್ನ 10 ನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಅದೇ ದಿನದಂದು ಒನ್‌ಪ್ಲಸ್ 12 ಸ್ಮಾರ್ಟ್‌ ಫೋನ್‌ ಅನ್ನೂ ಕೂಡ ಬಿಡುಗಡೆ ಮಾಡಲು ಕಂಪನಿ ಸಿದ್ಧತೆ ಮಾಡಿಕೊಂಡಿದೆ.

ಬಿಡುಗಡೆಗೂ ಮುನ್ನವೇ ಒನ್‌ಪ್ಲಸ್‌ 12 ನ ಕೆಲವು ಫೀಚರ್ಸ್ ಗಳು ಮೊಬೈಲ್‌ ಪ್ರಿಯರನ್ನು ಸೆಳೆಯುತ್ತಿವೆ. ಅಧಿಕೃತವಾಗಿ ಈ ಫೋನಿನ ಫೀಚರ್ಸ್‌ ನ ಬಗೆಗಿನ ಮಾಹಿತಿ ತಿಳಿದುಬಂದಿಲ್ಲವಾದರೂ ಕೆಲವು ಟಿಪ್‌ಸ್ಟರ್ ಗಳು ಈ ಫೋನಿನ ರಿವ್ಯೂ ನೀಡಿದ್ದಾರೆ.

ರಿವ್ಯೂ ಪ್ರಕಾರ ಈ ಮೊಬೈಲ್‌ ಪೇಲ್‌ ಗ್ರೀನ್‌, ರಾಕ್‌ ಬ್ಲ್ಯಾಕ್‌ ಮತ್ತು ವೈಟ್‌, ಮೂರು ಬಣ್ಣಗಳಲ್ಲಿ ಲಭ್ಯವಿರಲಿದ್ದು, ನಯವಾದ ವಿನ್ಯಾಸದೊಂದಿಗೆ ಟ್ರಿಪಲ್‌ ಕ್ಯಾಮೆರಾ ಸೆಟಪ್‌ ಅನ್ನು ಹೋಂದಿರಲಿದೆ, ಪೆರಿಸ್ಕೋಪ್‌ ಜೂಮ್‌ ಲೆನ್ಸ್‌ ಹೊಂದಿರುವ ಈ ಮೋಬೈಲ್‌ ನಲ್ಲಿ ಟೆಲಿಫೋಟೊ ಲೆನ್ಸ್‌ ಅಳವಡಿಸಲಾಗಿದೆ. ಇದರಿಂದ ಅತ್ಯುತ್ತಮವಾದ ಫೋಟೋಗಳನ್ನು ಸೆರೆಹಿಡಿಯಲು ಅನುಕೂಲವಾಗುತ್ತದೆ.

ಆರಂಭದಲ್ಲಿ ಈ ಒನ್‌ಪ್ಲಸ್ 12 ಸ್ಮಾರ್ಟ್‌ ಫೋನ್‌ ಚೀನಾದಲ್ಲಿ ಬಿಡುಗಡೆಯಾಗಲಿದೆ. ನಂತರ ಜನವರಿಯ ಬಳಿಕ ಗ್ಲೋಬಲ್‌ ಮಾರ್ಕೆಟ್‌ ಗೆ ಲಗ್ಗೆ ಇಡಲಿದೆ.

ಕಳೆದ ವರ್ಷ ಭಾರತದಲ್ಲಿ ಒನ್‌ಪ್ಲಸ್ 11 ಸ್ಮಾರ್ಟ್‌ ಫೋನ್‌ ಅನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಕಂಪನಿಯು ಒನ್‌ಪ್ಲಸ್ 12 ಬಿಡುಗಡೆಗೆ ಸಜ್ಜಾಗಿದ್ದು, ಭಾರತದಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದು ಇನ್ನೂ ಕೂಡ ತಿಳಿದುಬಂದಿಲ್ಲ.

lokesh

Share
Published by
lokesh

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

6 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

7 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago