ವಾಣಿಜ್ಯ

ಡಿಸೆಂಬರ್‌ 4ಕ್ಕೆ ಬಿಡುಗಡೆಯಾಗುತ್ತಿದೆ ಒನ್‌ಪ್ಲಸ್‌ 12

ಮೊಬೈಲ್‌ ಪ್ರಿಯರು ಬಹುದಿನಗಳಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಒನ್‌ಪ್ಲಸ್ 12 ಸ್ಮಾರ್ಟ್‌ ಫೋನ್‌ ಬಿಡುಗಡೆಗೆ ದಿನಾಂಕ ನಿಗಧಿಯಾಗಿದೆ. ಇದೇ ಡಿಸೆಂಬರ್‌ 4 ರಂದು ಕಂಪನಿಯು ತನ್ನ 10 ನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಅದೇ ದಿನದಂದು ಒನ್‌ಪ್ಲಸ್ 12 ಸ್ಮಾರ್ಟ್‌ ಫೋನ್‌ ಅನ್ನೂ ಕೂಡ ಬಿಡುಗಡೆ ಮಾಡಲು ಕಂಪನಿ ಸಿದ್ಧತೆ ಮಾಡಿಕೊಂಡಿದೆ.

ಬಿಡುಗಡೆಗೂ ಮುನ್ನವೇ ಒನ್‌ಪ್ಲಸ್‌ 12 ನ ಕೆಲವು ಫೀಚರ್ಸ್ ಗಳು ಮೊಬೈಲ್‌ ಪ್ರಿಯರನ್ನು ಸೆಳೆಯುತ್ತಿವೆ. ಅಧಿಕೃತವಾಗಿ ಈ ಫೋನಿನ ಫೀಚರ್ಸ್‌ ನ ಬಗೆಗಿನ ಮಾಹಿತಿ ತಿಳಿದುಬಂದಿಲ್ಲವಾದರೂ ಕೆಲವು ಟಿಪ್‌ಸ್ಟರ್ ಗಳು ಈ ಫೋನಿನ ರಿವ್ಯೂ ನೀಡಿದ್ದಾರೆ.

ರಿವ್ಯೂ ಪ್ರಕಾರ ಈ ಮೊಬೈಲ್‌ ಪೇಲ್‌ ಗ್ರೀನ್‌, ರಾಕ್‌ ಬ್ಲ್ಯಾಕ್‌ ಮತ್ತು ವೈಟ್‌, ಮೂರು ಬಣ್ಣಗಳಲ್ಲಿ ಲಭ್ಯವಿರಲಿದ್ದು, ನಯವಾದ ವಿನ್ಯಾಸದೊಂದಿಗೆ ಟ್ರಿಪಲ್‌ ಕ್ಯಾಮೆರಾ ಸೆಟಪ್‌ ಅನ್ನು ಹೋಂದಿರಲಿದೆ, ಪೆರಿಸ್ಕೋಪ್‌ ಜೂಮ್‌ ಲೆನ್ಸ್‌ ಹೊಂದಿರುವ ಈ ಮೋಬೈಲ್‌ ನಲ್ಲಿ ಟೆಲಿಫೋಟೊ ಲೆನ್ಸ್‌ ಅಳವಡಿಸಲಾಗಿದೆ. ಇದರಿಂದ ಅತ್ಯುತ್ತಮವಾದ ಫೋಟೋಗಳನ್ನು ಸೆರೆಹಿಡಿಯಲು ಅನುಕೂಲವಾಗುತ್ತದೆ.

ಆರಂಭದಲ್ಲಿ ಈ ಒನ್‌ಪ್ಲಸ್ 12 ಸ್ಮಾರ್ಟ್‌ ಫೋನ್‌ ಚೀನಾದಲ್ಲಿ ಬಿಡುಗಡೆಯಾಗಲಿದೆ. ನಂತರ ಜನವರಿಯ ಬಳಿಕ ಗ್ಲೋಬಲ್‌ ಮಾರ್ಕೆಟ್‌ ಗೆ ಲಗ್ಗೆ ಇಡಲಿದೆ.

ಕಳೆದ ವರ್ಷ ಭಾರತದಲ್ಲಿ ಒನ್‌ಪ್ಲಸ್ 11 ಸ್ಮಾರ್ಟ್‌ ಫೋನ್‌ ಅನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಕಂಪನಿಯು ಒನ್‌ಪ್ಲಸ್ 12 ಬಿಡುಗಡೆಗೆ ಸಜ್ಜಾಗಿದ್ದು, ಭಾರತದಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದು ಇನ್ನೂ ಕೂಡ ತಿಳಿದುಬಂದಿಲ್ಲ.

lokesh

Share
Published by
lokesh

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

3 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

4 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

11 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

11 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

16 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

16 hours ago