ವಾಣಿಜ್ಯ

ಡಿಸೆಂಬರ್‌ 4ಕ್ಕೆ ಬಿಡುಗಡೆಯಾಗುತ್ತಿದೆ ಒನ್‌ಪ್ಲಸ್‌ 12

ಮೊಬೈಲ್‌ ಪ್ರಿಯರು ಬಹುದಿನಗಳಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಒನ್‌ಪ್ಲಸ್ 12 ಸ್ಮಾರ್ಟ್‌ ಫೋನ್‌ ಬಿಡುಗಡೆಗೆ ದಿನಾಂಕ ನಿಗಧಿಯಾಗಿದೆ. ಇದೇ ಡಿಸೆಂಬರ್‌ 4 ರಂದು ಕಂಪನಿಯು ತನ್ನ 10 ನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಅದೇ ದಿನದಂದು ಒನ್‌ಪ್ಲಸ್ 12 ಸ್ಮಾರ್ಟ್‌ ಫೋನ್‌ ಅನ್ನೂ ಕೂಡ ಬಿಡುಗಡೆ ಮಾಡಲು ಕಂಪನಿ ಸಿದ್ಧತೆ ಮಾಡಿಕೊಂಡಿದೆ.

ಬಿಡುಗಡೆಗೂ ಮುನ್ನವೇ ಒನ್‌ಪ್ಲಸ್‌ 12 ನ ಕೆಲವು ಫೀಚರ್ಸ್ ಗಳು ಮೊಬೈಲ್‌ ಪ್ರಿಯರನ್ನು ಸೆಳೆಯುತ್ತಿವೆ. ಅಧಿಕೃತವಾಗಿ ಈ ಫೋನಿನ ಫೀಚರ್ಸ್‌ ನ ಬಗೆಗಿನ ಮಾಹಿತಿ ತಿಳಿದುಬಂದಿಲ್ಲವಾದರೂ ಕೆಲವು ಟಿಪ್‌ಸ್ಟರ್ ಗಳು ಈ ಫೋನಿನ ರಿವ್ಯೂ ನೀಡಿದ್ದಾರೆ.

ರಿವ್ಯೂ ಪ್ರಕಾರ ಈ ಮೊಬೈಲ್‌ ಪೇಲ್‌ ಗ್ರೀನ್‌, ರಾಕ್‌ ಬ್ಲ್ಯಾಕ್‌ ಮತ್ತು ವೈಟ್‌, ಮೂರು ಬಣ್ಣಗಳಲ್ಲಿ ಲಭ್ಯವಿರಲಿದ್ದು, ನಯವಾದ ವಿನ್ಯಾಸದೊಂದಿಗೆ ಟ್ರಿಪಲ್‌ ಕ್ಯಾಮೆರಾ ಸೆಟಪ್‌ ಅನ್ನು ಹೋಂದಿರಲಿದೆ, ಪೆರಿಸ್ಕೋಪ್‌ ಜೂಮ್‌ ಲೆನ್ಸ್‌ ಹೊಂದಿರುವ ಈ ಮೋಬೈಲ್‌ ನಲ್ಲಿ ಟೆಲಿಫೋಟೊ ಲೆನ್ಸ್‌ ಅಳವಡಿಸಲಾಗಿದೆ. ಇದರಿಂದ ಅತ್ಯುತ್ತಮವಾದ ಫೋಟೋಗಳನ್ನು ಸೆರೆಹಿಡಿಯಲು ಅನುಕೂಲವಾಗುತ್ತದೆ.

ಆರಂಭದಲ್ಲಿ ಈ ಒನ್‌ಪ್ಲಸ್ 12 ಸ್ಮಾರ್ಟ್‌ ಫೋನ್‌ ಚೀನಾದಲ್ಲಿ ಬಿಡುಗಡೆಯಾಗಲಿದೆ. ನಂತರ ಜನವರಿಯ ಬಳಿಕ ಗ್ಲೋಬಲ್‌ ಮಾರ್ಕೆಟ್‌ ಗೆ ಲಗ್ಗೆ ಇಡಲಿದೆ.

ಕಳೆದ ವರ್ಷ ಭಾರತದಲ್ಲಿ ಒನ್‌ಪ್ಲಸ್ 11 ಸ್ಮಾರ್ಟ್‌ ಫೋನ್‌ ಅನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಕಂಪನಿಯು ಒನ್‌ಪ್ಲಸ್ 12 ಬಿಡುಗಡೆಗೆ ಸಜ್ಜಾಗಿದ್ದು, ಭಾರತದಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದು ಇನ್ನೂ ಕೂಡ ತಿಳಿದುಬಂದಿಲ್ಲ.

lokesh

Share
Published by
lokesh

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

17 mins ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

17 mins ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

1 hour ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

1 hour ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

2 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

3 hours ago