ವಾಣಿಜ್ಯ

ಮುಂದಿನ ತಿಂಗಳು ನಡೆಯಬೇಕಿದ್ದ ಬ್ಯಾಂಕ್‌ ನೌಕರರ ಮುಷ್ಕರ ಮುಂದೂಡಿಕೆ

 

ನವದೆಹಲಿ : ವಿವಿಧ ಬೇಡಿಕೆಗಳನ್ನು ಈಡೇರುವಂತೆ ಒತ್ತಾಯಿಸಿ ಮುಂದಿನ ತಿಂಗಳು ( ಡಿಸೆಂಬರ್‌ 24 ) ಹಾಗೂ ಜನವರಿ 2 ರಿಂದ 6 ರವರರೆಗೆ ನಡೆಸಲು ತೀರ್ಮಾನಿಸಿದ್ದ ಅಖಿಲ ಭಾರತ ಬ್ಯಾಂಕ್‌ ನೌಕರರ ಮುಷ್ಕರವನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ಸಂಘವು ತಿಳಿಸಿದೆ.

ನಮ್ಮ ಬೇಡಿಕೆಗಳಿಗೆ ಭಾರತೀಯ ಬ್ಯಾಂಕ್‌ ಸಂಘಟನೆಯು ಸ್ಪಂದಿಸಿದೆ. ಹಾಗಾಗಿ ಸದ್ಯಕ್ಕೆ ಈ ಮುಷ್ಕರ ನಡೆಸುವುದಿಲ್ಲ ಎಂದು ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘವು ಮಾಹಿತಿ ನೀಡಿದೆ.

ಜನವರಿ 18 ರೊಳಗೆ ನೌಕರರ ಬೇಡಿಕೆಗಳನ್ನು ಈಡೇರಿಸದೇ ಹೋದಲ್ಲಿ ಜನವರಿ 19 ಹಾಗೂ 20 ರಂದು ಅಖಿಲ ಭಾರತ ಮಟ್ಟದಲ್ಲಿ ಮುಷ್ಕರ ನಡೆಸಲಾಗುತ್ತದೆ ಎಂದು ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘವು ಎಚ್ಚರಿಕೆ ನೀಡಿದೆ.

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ, ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ, ( ಎಸ್‌ಬಿಐ ) ಕೆನರಾ ಬ್ಯಾಂಕ್‌, ಬ್ಯಾಂಕ್‌ ಆಫ್‌ ಇಂಡಿಯಾ, ಬ್ಯಾಂಕ್‌ ಆಫ್‌ ಬರೋಡಾ, ಪಂಜಾಬ್‌ ಮತ್ತು ಸಿಂಧ್‌ ಬ್ಯಾಂಕ್‌, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌, ( ಪಿಎನ್‌ ಬಿ) ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಹಾಗೂ ಬ್ಯಾಂಕ್‌ ಆಫ್‌ ಮಹಾರಾಷ್ಟ್ರ ಸೇರದಂತೆ ಇನ್ನೂ ಹಲವಾರು ಬ್ಯಾಂಕ್‌ ನ ನೌಕರರು ಜನವರಿ 18 ರಂದು ನಡೆಸಲು ತೀರ್ಮಾನಿಸಿರುವ ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ.

ಬ್ಯಾಂಕ್‌ ಗಳಲ್ಲಿ ಖಾಯಂ ಉದ್ಯೋಗಗಳ ಬದಲಿಗೆ ಹೊರಗುತ್ತಿಗೆ ಪದ್ದತಿಯನ್ನು ಅನುಸರಿಸಲಾಗುತ್ತಿದೆ. ಸರಿಯಾಗಿ ನೇಮಕಾತಿಗಳು ಆಗುತ್ತಿಲ್ಲ. ಅಷ್ಟೇ ಅಲ್ಲದೇ ಬ್ಯಾಂಕ್‌ ಗಳಲ್ಲಿ ಹುದ್ದೆಗಳನ್ನು ಕಡಿತಗೊಳಿಸಲಾಗಿದೆ. ಇದರಿಂದ ನೌಕರರ ಮೇಲೆ ಒತ್ತಡ ಹೆಚ್ಚಾಗಿದೆ ಎಂದು ಆರೋಪಿಸಿ ಬ್ಯಾಂಕ್‌ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ ಎಂದು ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟಾಚಲಂ ತಿಳಿಸಿದ್ದಾರೆ.

lokesh

Share
Published by
lokesh

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

13 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago