ನವದೆಹಲಿ : ವಿವಿಧ ಬೇಡಿಕೆಗಳನ್ನು ಈಡೇರುವಂತೆ ಒತ್ತಾಯಿಸಿ ಮುಂದಿನ ತಿಂಗಳು ( ಡಿಸೆಂಬರ್ 24 ) ಹಾಗೂ ಜನವರಿ 2 ರಿಂದ 6 ರವರರೆಗೆ ನಡೆಸಲು ತೀರ್ಮಾನಿಸಿದ್ದ ಅಖಿಲ ಭಾರತ ಬ್ಯಾಂಕ್ ನೌಕರರ ಮುಷ್ಕರವನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ಸಂಘವು ತಿಳಿಸಿದೆ.
ನಮ್ಮ ಬೇಡಿಕೆಗಳಿಗೆ ಭಾರತೀಯ ಬ್ಯಾಂಕ್ ಸಂಘಟನೆಯು ಸ್ಪಂದಿಸಿದೆ. ಹಾಗಾಗಿ ಸದ್ಯಕ್ಕೆ ಈ ಮುಷ್ಕರ ನಡೆಸುವುದಿಲ್ಲ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ಮಾಹಿತಿ ನೀಡಿದೆ.
ಜನವರಿ 18 ರೊಳಗೆ ನೌಕರರ ಬೇಡಿಕೆಗಳನ್ನು ಈಡೇರಿಸದೇ ಹೋದಲ್ಲಿ ಜನವರಿ 19 ಹಾಗೂ 20 ರಂದು ಅಖಿಲ ಭಾರತ ಮಟ್ಟದಲ್ಲಿ ಮುಷ್ಕರ ನಡೆಸಲಾಗುತ್ತದೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ಎಚ್ಚರಿಕೆ ನೀಡಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ( ಎಸ್ಬಿಐ ) ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾ, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ( ಪಿಎನ್ ಬಿ) ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಬ್ಯಾಂಕ್ ಆಫ್ ಮಹಾರಾಷ್ಟ್ರ ಸೇರದಂತೆ ಇನ್ನೂ ಹಲವಾರು ಬ್ಯಾಂಕ್ ನ ನೌಕರರು ಜನವರಿ 18 ರಂದು ನಡೆಸಲು ತೀರ್ಮಾನಿಸಿರುವ ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ.
ಬ್ಯಾಂಕ್ ಗಳಲ್ಲಿ ಖಾಯಂ ಉದ್ಯೋಗಗಳ ಬದಲಿಗೆ ಹೊರಗುತ್ತಿಗೆ ಪದ್ದತಿಯನ್ನು ಅನುಸರಿಸಲಾಗುತ್ತಿದೆ. ಸರಿಯಾಗಿ ನೇಮಕಾತಿಗಳು ಆಗುತ್ತಿಲ್ಲ. ಅಷ್ಟೇ ಅಲ್ಲದೇ ಬ್ಯಾಂಕ್ ಗಳಲ್ಲಿ ಹುದ್ದೆಗಳನ್ನು ಕಡಿತಗೊಳಿಸಲಾಗಿದೆ. ಇದರಿಂದ ನೌಕರರ ಮೇಲೆ ಒತ್ತಡ ಹೆಚ್ಚಾಗಿದೆ ಎಂದು ಆರೋಪಿಸಿ ಬ್ಯಾಂಕ್ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟಾಚಲಂ ತಿಳಿಸಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…
ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…
ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…