ವಾಣಿಜ್ಯ

ಮುಂದಿನ ತಿಂಗಳು ನಡೆಯಬೇಕಿದ್ದ ಬ್ಯಾಂಕ್‌ ನೌಕರರ ಮುಷ್ಕರ ಮುಂದೂಡಿಕೆ

 

ನವದೆಹಲಿ : ವಿವಿಧ ಬೇಡಿಕೆಗಳನ್ನು ಈಡೇರುವಂತೆ ಒತ್ತಾಯಿಸಿ ಮುಂದಿನ ತಿಂಗಳು ( ಡಿಸೆಂಬರ್‌ 24 ) ಹಾಗೂ ಜನವರಿ 2 ರಿಂದ 6 ರವರರೆಗೆ ನಡೆಸಲು ತೀರ್ಮಾನಿಸಿದ್ದ ಅಖಿಲ ಭಾರತ ಬ್ಯಾಂಕ್‌ ನೌಕರರ ಮುಷ್ಕರವನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ಸಂಘವು ತಿಳಿಸಿದೆ.

ನಮ್ಮ ಬೇಡಿಕೆಗಳಿಗೆ ಭಾರತೀಯ ಬ್ಯಾಂಕ್‌ ಸಂಘಟನೆಯು ಸ್ಪಂದಿಸಿದೆ. ಹಾಗಾಗಿ ಸದ್ಯಕ್ಕೆ ಈ ಮುಷ್ಕರ ನಡೆಸುವುದಿಲ್ಲ ಎಂದು ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘವು ಮಾಹಿತಿ ನೀಡಿದೆ.

ಜನವರಿ 18 ರೊಳಗೆ ನೌಕರರ ಬೇಡಿಕೆಗಳನ್ನು ಈಡೇರಿಸದೇ ಹೋದಲ್ಲಿ ಜನವರಿ 19 ಹಾಗೂ 20 ರಂದು ಅಖಿಲ ಭಾರತ ಮಟ್ಟದಲ್ಲಿ ಮುಷ್ಕರ ನಡೆಸಲಾಗುತ್ತದೆ ಎಂದು ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘವು ಎಚ್ಚರಿಕೆ ನೀಡಿದೆ.

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ, ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ, ( ಎಸ್‌ಬಿಐ ) ಕೆನರಾ ಬ್ಯಾಂಕ್‌, ಬ್ಯಾಂಕ್‌ ಆಫ್‌ ಇಂಡಿಯಾ, ಬ್ಯಾಂಕ್‌ ಆಫ್‌ ಬರೋಡಾ, ಪಂಜಾಬ್‌ ಮತ್ತು ಸಿಂಧ್‌ ಬ್ಯಾಂಕ್‌, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌, ( ಪಿಎನ್‌ ಬಿ) ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಹಾಗೂ ಬ್ಯಾಂಕ್‌ ಆಫ್‌ ಮಹಾರಾಷ್ಟ್ರ ಸೇರದಂತೆ ಇನ್ನೂ ಹಲವಾರು ಬ್ಯಾಂಕ್‌ ನ ನೌಕರರು ಜನವರಿ 18 ರಂದು ನಡೆಸಲು ತೀರ್ಮಾನಿಸಿರುವ ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ.

ಬ್ಯಾಂಕ್‌ ಗಳಲ್ಲಿ ಖಾಯಂ ಉದ್ಯೋಗಗಳ ಬದಲಿಗೆ ಹೊರಗುತ್ತಿಗೆ ಪದ್ದತಿಯನ್ನು ಅನುಸರಿಸಲಾಗುತ್ತಿದೆ. ಸರಿಯಾಗಿ ನೇಮಕಾತಿಗಳು ಆಗುತ್ತಿಲ್ಲ. ಅಷ್ಟೇ ಅಲ್ಲದೇ ಬ್ಯಾಂಕ್‌ ಗಳಲ್ಲಿ ಹುದ್ದೆಗಳನ್ನು ಕಡಿತಗೊಳಿಸಲಾಗಿದೆ. ಇದರಿಂದ ನೌಕರರ ಮೇಲೆ ಒತ್ತಡ ಹೆಚ್ಚಾಗಿದೆ ಎಂದು ಆರೋಪಿಸಿ ಬ್ಯಾಂಕ್‌ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ ಎಂದು ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟಾಚಲಂ ತಿಳಿಸಿದ್ದಾರೆ.

lokesh

Share
Published by
lokesh

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

17 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

17 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

17 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

17 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

17 hours ago