ವಾಣಿಜ್ಯ

ಮುಂದಿನ ತಿಂಗಳು ನಡೆಯಬೇಕಿದ್ದ ಬ್ಯಾಂಕ್‌ ನೌಕರರ ಮುಷ್ಕರ ಮುಂದೂಡಿಕೆ

 

ನವದೆಹಲಿ : ವಿವಿಧ ಬೇಡಿಕೆಗಳನ್ನು ಈಡೇರುವಂತೆ ಒತ್ತಾಯಿಸಿ ಮುಂದಿನ ತಿಂಗಳು ( ಡಿಸೆಂಬರ್‌ 24 ) ಹಾಗೂ ಜನವರಿ 2 ರಿಂದ 6 ರವರರೆಗೆ ನಡೆಸಲು ತೀರ್ಮಾನಿಸಿದ್ದ ಅಖಿಲ ಭಾರತ ಬ್ಯಾಂಕ್‌ ನೌಕರರ ಮುಷ್ಕರವನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ಸಂಘವು ತಿಳಿಸಿದೆ.

ನಮ್ಮ ಬೇಡಿಕೆಗಳಿಗೆ ಭಾರತೀಯ ಬ್ಯಾಂಕ್‌ ಸಂಘಟನೆಯು ಸ್ಪಂದಿಸಿದೆ. ಹಾಗಾಗಿ ಸದ್ಯಕ್ಕೆ ಈ ಮುಷ್ಕರ ನಡೆಸುವುದಿಲ್ಲ ಎಂದು ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘವು ಮಾಹಿತಿ ನೀಡಿದೆ.

ಜನವರಿ 18 ರೊಳಗೆ ನೌಕರರ ಬೇಡಿಕೆಗಳನ್ನು ಈಡೇರಿಸದೇ ಹೋದಲ್ಲಿ ಜನವರಿ 19 ಹಾಗೂ 20 ರಂದು ಅಖಿಲ ಭಾರತ ಮಟ್ಟದಲ್ಲಿ ಮುಷ್ಕರ ನಡೆಸಲಾಗುತ್ತದೆ ಎಂದು ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘವು ಎಚ್ಚರಿಕೆ ನೀಡಿದೆ.

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ, ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ, ( ಎಸ್‌ಬಿಐ ) ಕೆನರಾ ಬ್ಯಾಂಕ್‌, ಬ್ಯಾಂಕ್‌ ಆಫ್‌ ಇಂಡಿಯಾ, ಬ್ಯಾಂಕ್‌ ಆಫ್‌ ಬರೋಡಾ, ಪಂಜಾಬ್‌ ಮತ್ತು ಸಿಂಧ್‌ ಬ್ಯಾಂಕ್‌, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌, ( ಪಿಎನ್‌ ಬಿ) ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಹಾಗೂ ಬ್ಯಾಂಕ್‌ ಆಫ್‌ ಮಹಾರಾಷ್ಟ್ರ ಸೇರದಂತೆ ಇನ್ನೂ ಹಲವಾರು ಬ್ಯಾಂಕ್‌ ನ ನೌಕರರು ಜನವರಿ 18 ರಂದು ನಡೆಸಲು ತೀರ್ಮಾನಿಸಿರುವ ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ.

ಬ್ಯಾಂಕ್‌ ಗಳಲ್ಲಿ ಖಾಯಂ ಉದ್ಯೋಗಗಳ ಬದಲಿಗೆ ಹೊರಗುತ್ತಿಗೆ ಪದ್ದತಿಯನ್ನು ಅನುಸರಿಸಲಾಗುತ್ತಿದೆ. ಸರಿಯಾಗಿ ನೇಮಕಾತಿಗಳು ಆಗುತ್ತಿಲ್ಲ. ಅಷ್ಟೇ ಅಲ್ಲದೇ ಬ್ಯಾಂಕ್‌ ಗಳಲ್ಲಿ ಹುದ್ದೆಗಳನ್ನು ಕಡಿತಗೊಳಿಸಲಾಗಿದೆ. ಇದರಿಂದ ನೌಕರರ ಮೇಲೆ ಒತ್ತಡ ಹೆಚ್ಚಾಗಿದೆ ಎಂದು ಆರೋಪಿಸಿ ಬ್ಯಾಂಕ್‌ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ ಎಂದು ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟಾಚಲಂ ತಿಳಿಸಿದ್ದಾರೆ.

lokesh

Share
Published by
lokesh

Recent Posts

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

58 mins ago

ಓದುಗರ ಪತ್ರ: ಸಾರಿಗೆ ನಿಗಮದ ಬಸ್‌ಗಳಲ್ಲಿ ಮೊಬೈಲ್ ಹಾವಳಿ ತಡೆಗಟ್ಟಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…

1 hour ago

ಓದುಗರ ಪತ್ರ: ಶಾಲಾ ವಾಹನ ಮಾಸಿಕ ಶುಲ್ಕ ಏರಿಕೆ ತಡೆಗೆ ಕ್ರಮ ಅಗತ್ಯ

ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…

1 hour ago

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

4 hours ago

ಅವಳಿ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…

4 hours ago

ಮೈಸೂರು ‘ಯೋಗ ಜಿಲ್ಲೆ’ ಘೋಷಣೆಗೆ ತಯಾರಿ

ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ  ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…

4 hours ago