ವಾಣಿಜ್ಯ

ರೆಪೋ ದರ ಮತ್ತೆ ಹೆಚ್ಚಳ, ತುಟ್ಟಿಯಾಗಲಿದೆ ಗೃಹ ಸಾಲ

ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ರೆಪೋ ದರವನ್ನು ಮತ್ತೆ 35 ಮೂಲಾಂಕಗಳಷ್ಟು ಏರಿಕೆ ಮಾಡಿದ್ದು ಶೇಕಡ 6.25ಕ್ಕೆ ತಲುಪಿದೆ. ಇದರೊಂದಿಗೆ ಗೃಹ ಸಾಲ, ವೈಯಕ್ತಿಕ ಸಾಲ ಮತ್ತು ವಾಹನ ಸಾಲ ಮತ್ತೆ ಏರಿಕೆಯಾಗಲಿದೆ. ಈ ಹಿಂದೆ ನಾಲ್ಕು ಬಾರಿ ಆರ್ಬಿಐ ರೆಪೋ ದರ ಏರಿಸಿರುವ ಆರ್‌ಬಿ ಐ ಈಗ ಸತತ ಐದನೇ ಬಾರಿಗೆ ಬಡ್ಡಿ ದರ ಏರಿಸಿದೆ.

ದೇಶದಲ್ಲಿ ಹಣದುಬ್ಬರವನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಆರ್ಬಿಐ ರೆಪೋ ದರವನ್ನು ಏರಿಕೆ ಮಾಡಿದೆ. 2022ರ ಏಪ್ರಿಲ್ ತನಕ ರೆಪೋ ದರದಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಂಡಿದ್ದ ಆರ್ಬಿಐ ಮೇ ತಿಂಗಳಿನಲ್ಲಿ ರೆಪೋ ದರವನ್ನು ಶೇ.೦.40ರಷ್ಟು ಏರಿಕೆ ಮಾಡಿತ್ತು. ಜೂನ್ ತಿಂಗಳಿನಲ್ಲಿಶೇ. 50 ಮೂಲಾಂಕ ಏರಿಕೆ ಮಾಡಿದ್ದು, ಶೇಕಡ 4.90ಕ್ಕೆ ತಲುಪಿತ್ತು. ಆಗಸ್ಟ್ನಲ್ಲಿ ಮತ್ತೆ 50 ಮೂಲಾಂಕದಷ್ಟು ಏರಿಕೆ ಮಾಡಲಾಗಿತ್ತು. ಬಳಿಕ ಸೆಪ್ಟೆಂಬರ್ನಲ್ಲಿ ರೆಪೋ ದರವನ್ನು 50 ಮೂಲಾಂಕ ಹೆಚ್ಚಳ ಮಾಡಲಾಗಿತ್ತು.

ರೆಪೋ ದರ ಎಂದರೇನು?
ಆರ್ಬಿಐ ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಕೊಡುವ ಸಾಲದ ಮೇಲಿನ ಬಡ್ಡಿ ದರವೇ ರೆಪೋ ರೇಟ್. ವಾಣಿಜ್ಯ ಬ್ಯಾಂಕುಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್ಬಿಐನಿಂದ ಹಣ ಪಡೆಯುತ್ತವೆ. ಈ ಹಣಕ್ಕೆ ಬಡ್ಡಿ ನೀಡುವ ದರ ಇದಾಗಿದೆ.
ಡಿಸೆಂಬರ್ 5ರಿಂದ 7ರವರೆಗೆ ಹಣಕಾಸು ನೀತಿ ನಿರೂಪಣಾ ಸಮಿತಿಯ (ಎಂಪಿಸಿ) ಸಭೆ ನಡೆದಿದ್ದು ಈ ಸಭೆಯ ಅಂತ್ಯದಲ್ಲಿ ಆರ್ಬಿಐ ರೆಪೋ ದರ ಪರಿಷ್ಕರಣೆ ಮಾಡಿದೆ.

ಹೆಚ್ಚಲಿದೆ ಇಎಂಐ ಹೊರೆ

ಆರ್ಬಿಐ ರೆಪೋ ದರಗಳನ್ನು ಏರಿಕೆ ಮಾಡಿರುವುದರಿಂದ ಗೃಹ ಸಾಲ, ಕಾರಿನ ಸಾಲ ಸೆರಿದಂತೆ ಇತರ ಸಾಲಗಳ ಇಎಂಐ ಏರಿಕೆಯಾಗುವ ಎಲ್ಲಾ ಸಾಧ್ಯತೆ ಇದೆ. ಆರ್ಬಿಐ ದರ ಏರಿಕೆ ಮಾಡಿದ ಬೆನ್ನಲ್ಲೇ ಬ್ಯಾಂಕುಗಳೂ ಸಾಲದ ಮೇಲಿನ ಬಡ್ಡಿಯನ್ನು ಹೆಚ್ಚಿಸುತ್ತವೆ. ಇದರಿಂದ ಸಾಲಗಳ ಮಾಸಿಕ ಕಂತು ಹೆಚ್ಚಲಿದೆ.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

7 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

20 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

20 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

20 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

20 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

21 hours ago