ವಾಣಿಜ್ಯ

ವಿಶ್ವದ ಮೊದಲ ಎಐ ಲ್ಯಾಪ್ ಟಾಪ್‌ ಪರಿಚಯಿಸಲಿದೆ ಸ್ಯಾಮ್‌ಸಂಗ್

ಎಲೆಕ್ಟ್ರಾನಿಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪನಿಯು ವಿಶ್ವದಲ್ಲಿಯೇ ಮೊದಲ ಬಾರಿಗೆ ಕೃತಕ ಬುದ್ದಿಮತ್ತೆ ಲ್ಯಾಪ್‌ಟಾಪ್‌ ಅನ್ನು ಪರಿಚಯಿಸಲಿದೆ.

ಈ ಕೃತಕ ಬುದ್ದಿಮತ್ತೆ ಲ್ಯಾಪ್‌ಟಾಪ್‌ ಶೀಘ್ರದಲ್ಲಿಯೇ ಗ್ಯಾಲಕ್ಸಿ ಬುಕ್‌ 4 ಹೆಸರಿನಲ್ಲಿ ಮಾರುಕಟ್ಟೆಗೆ ಲಗ್ಗೆ ಇಡಲಿದೆ.

ಸ್ಯಾಮ್‌ಸಂಗ್‌ ಕಂಪನಿಯು ಗ್ಯಾಲಕ್ಸಿ ಬುಕ್‌ 4 ಲ್ಯಾಪ್‌ಟಾಪ್ ಅನ್ನು ಇದೇ ಡಿಸೆಂಬರ್‌ 15 ರಂದು ವಿಶ್ವ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ. ಆದರೆ ಭಾರತೀಯ ಮಾರುಕಟ್ಟೆಯಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದರ ಕುರಿತಾದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಈ ಗ್ಯಾಲಕ್ಸಿ ಬುಕ್‌ 4 ಲ್ಯಾಪ್‌ಟಾಪ್‌ ಇಂಟೆಲ್‌ ಕೋರ್‌ ಅಲ್ಟ್ರಾ 7155H ಚಿಪ್‌ಸೆಟ್ ಪ್ರೊಸೆಸರ್‌ ಹೊಂದಿದೆ. ಇದು ಅತ್ಯಂತ ವೇಗದ ಕಾರ್ಯಕ್ಷಮತೆಯೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಈ ಲ್ಯಾಪ್‌ಟಾಪ್‌ ನಲ್ಲಿ ಇಂಟರ್ನೆಟ್‌ ಸಂಪರ್ಕ ಇಲ್ಲದೇ ಅನೇಕ ಕೆಲಸಗಳನ್ನು ಮಾಡಬಹುದಾಗಿದೆ.

ಇದು ಸ್ಯಾಮ್‌ಸಂಗ್‌ ಗೊಸ್‌ ಎಂಬ ಕೃತಕ ಬುದ್ದಿಮತ್ತೆಯಿಂದ ಕಾರ್ಯನಿರ್ವಹಿಸಲಿದೆ. ಇದರಲ್ಲಿನ ಸಿಪಿಯುನಲ್ಲಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲಾಗಿದೆ. ಇದರ ಸಹಾಯದಿಂದ ಎಐ ವೇಗವಾಗಿ ಕೆಲಸ ನಿರ್ವಹಿಸುತ್ತದೆ.

ಈ ಗ್ಯಾಲಕ್ಸಿ ಬುಕ್‌ 4 ಲ್ಯಾಪ್‌ಟಾಪ್‌ 32 GB ರ್ಯಾಮ್‌ ಹಾಗೂ 1T B ವರೆಗೆ ಆನ್‌ ಬೋರ್ಡ್‌ ಸಂಗ್ರಹಣೆಯನ್ನು ಹೊಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

15 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

20 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

20 hours ago