ವಾಣಿಜ್ಯ

ವಿಶ್ವದ ಮೊದಲ ಎಐ ಲ್ಯಾಪ್ ಟಾಪ್‌ ಪರಿಚಯಿಸಲಿದೆ ಸ್ಯಾಮ್‌ಸಂಗ್

ಎಲೆಕ್ಟ್ರಾನಿಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪನಿಯು ವಿಶ್ವದಲ್ಲಿಯೇ ಮೊದಲ ಬಾರಿಗೆ ಕೃತಕ ಬುದ್ದಿಮತ್ತೆ ಲ್ಯಾಪ್‌ಟಾಪ್‌ ಅನ್ನು ಪರಿಚಯಿಸಲಿದೆ.

ಈ ಕೃತಕ ಬುದ್ದಿಮತ್ತೆ ಲ್ಯಾಪ್‌ಟಾಪ್‌ ಶೀಘ್ರದಲ್ಲಿಯೇ ಗ್ಯಾಲಕ್ಸಿ ಬುಕ್‌ 4 ಹೆಸರಿನಲ್ಲಿ ಮಾರುಕಟ್ಟೆಗೆ ಲಗ್ಗೆ ಇಡಲಿದೆ.

ಸ್ಯಾಮ್‌ಸಂಗ್‌ ಕಂಪನಿಯು ಗ್ಯಾಲಕ್ಸಿ ಬುಕ್‌ 4 ಲ್ಯಾಪ್‌ಟಾಪ್ ಅನ್ನು ಇದೇ ಡಿಸೆಂಬರ್‌ 15 ರಂದು ವಿಶ್ವ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ. ಆದರೆ ಭಾರತೀಯ ಮಾರುಕಟ್ಟೆಯಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದರ ಕುರಿತಾದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಈ ಗ್ಯಾಲಕ್ಸಿ ಬುಕ್‌ 4 ಲ್ಯಾಪ್‌ಟಾಪ್‌ ಇಂಟೆಲ್‌ ಕೋರ್‌ ಅಲ್ಟ್ರಾ 7155H ಚಿಪ್‌ಸೆಟ್ ಪ್ರೊಸೆಸರ್‌ ಹೊಂದಿದೆ. ಇದು ಅತ್ಯಂತ ವೇಗದ ಕಾರ್ಯಕ್ಷಮತೆಯೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಈ ಲ್ಯಾಪ್‌ಟಾಪ್‌ ನಲ್ಲಿ ಇಂಟರ್ನೆಟ್‌ ಸಂಪರ್ಕ ಇಲ್ಲದೇ ಅನೇಕ ಕೆಲಸಗಳನ್ನು ಮಾಡಬಹುದಾಗಿದೆ.

ಇದು ಸ್ಯಾಮ್‌ಸಂಗ್‌ ಗೊಸ್‌ ಎಂಬ ಕೃತಕ ಬುದ್ದಿಮತ್ತೆಯಿಂದ ಕಾರ್ಯನಿರ್ವಹಿಸಲಿದೆ. ಇದರಲ್ಲಿನ ಸಿಪಿಯುನಲ್ಲಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲಾಗಿದೆ. ಇದರ ಸಹಾಯದಿಂದ ಎಐ ವೇಗವಾಗಿ ಕೆಲಸ ನಿರ್ವಹಿಸುತ್ತದೆ.

ಈ ಗ್ಯಾಲಕ್ಸಿ ಬುಕ್‌ 4 ಲ್ಯಾಪ್‌ಟಾಪ್‌ 32 GB ರ್ಯಾಮ್‌ ಹಾಗೂ 1T B ವರೆಗೆ ಆನ್‌ ಬೋರ್ಡ್‌ ಸಂಗ್ರಹಣೆಯನ್ನು ಹೊಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

lokesh

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

8 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

8 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

10 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

10 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

11 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

12 hours ago