ವಾಣಿಜ್ಯ

ಶ್ರಮಶಕ್ತಿ ಯೋಜನೆಯಲ್ಲಿ ಸಾಲ ಪಡೆಯಲು ಏನೆಲ್ಲಾ ಅರ್ಹತೆ ಇರಬೇಕು?

ರಾಜ್ಯ ಕಾಂಗ್ರೆಸ್‌ ಸರ್ಕಾರ ಈಗಾಗಲೇ ನಾಲ್ಕು ಯೋಜನೆಗಳನ್ನು ಜಾರಿಗೆ ತಂದು ಯಶಸ್ವಿಯಾಗಿದ್ದು, ಇನ್ನೂ ಸಹ ಯುವನಿಧಿ ಯೋಜನೆಯನ್ನು ಜಾರಿಗೆ ತರುವುದು ಬಾಕಿ ಇದೆ. ಹೀಗಿರುವಾಗ ಸಿದ್ದರಾಮಯ್ಯ ನಾಯಕತ್ವದ ಮತ್ತೊಂದು ಯೋಜನೆ ಶ್ರಮಶಕ್ತಿಯಡಿಯಲ್ಲಿ ಸಾಲ ಪಡೆದುಕೊಂಡು ತಮ್ಮದೇ ಸ್ವಂತ ವ್ಯವಹಾರ ಸ್ಥಾಪಿಸಬಹುದಾಗಿದೆ.

ಅಲ್ಪಸಂಖ್ಯಾತರ ಸಮುದಾಯದ ಅನುಕೂಲಕ್ಕಾಗಿ ಘೋಷಿಸಿದ್ದ ಶ್ರಮಶಕ್ತಿ ಯೋಜನೆಯಡಿಯಲ್ಲಿ ಸರ್ಕಾರವು ಅಲ್ಪಸಂಖ್ಯಾತ ವರ್ಗದ ಜನರಿಗೆ ತಮ್ಮ ವ್ಯವಹಾರಗಳನ್ನು ಆರಂಭಿಸಲು ಕಡಿಮೆ ಬಡ್ಡಿ ದರದಲ್ಲಿ ಹಣದ ಸೌಲಭ್ಯ ಹಾಗೂ ಕೌಶಲ್ಯ ತರಬೇತಿಯನ್ನು ನೀಡುತ್ತಿದೆ. ಹಾಗಿದ್ದರೆ ಈ ಯೋಜನೆ ಫಲಾನುಭವಿಯಾಗಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಇದರಲ್ಲಿ ಎಷ್ಟು ಹಣ ಎಷ್ಟು ಬಡ್ಡಿ ದರದಲ್ಲಿ ಸಿಗಲಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಎಷ್ಟು ಹಣ? ಬಡ್ಡಿ ಎಷ್ಟು?

ಈ ಯೋಜನೆಯಡಿಯಲ್ಲಿ ಸರ್ಕಾರ ಅರ್ಹ ಅಲ್ಪಸಂಖ್ಯಾತ ಸದಸ್ಯನಿಗೆ 50000 ರೂಪಾಯಿಗಳನ್ನು ಸಾಲವನ್ನಾಗಿ ನೀಡಲಿದೆ. ಈ ಮೊತ್ತವನ್ನು 36 ತಿಂಗಳಿನೊಳಗೆ ಮರುಪಾವತಿ ಮಾಡಬೇಕಿದೆ. 4% ಬಡ್ಡಿ ದರದಲ್ಲಿ ಈ ಸಾಲವನ್ನು ನೀಡಲಾಗುವುದು.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:

* ಅರ್ಜಿದಾರ ಕರ್ನಾಟಕದಲ್ಲಿ ಶಾಶ್ವತವಾಗಿ ನೆಲೆಸಿರಬೇಕು
* ಅರ್ಜಿದಾರನ ವಯೋಮಿತಿ 18 ರಿಂದ 55 ವರ್ಷಗಳಾಗಿರಬೇಕು
* ಅರ್ಜಿದಾರನ ವಾರ್ಷಿಕ ಆದಾಯ 3.50 ಲಕ್ಷ ರೂಪಾಯಿಗಳನ್ನು ಮೀರಬಾರದು.
* ಅಭ್ಯರ್ಥಿಯು ಬೌದ್ಧ, ಮುಸ್ಲಿಂ, ಕ್ರಿಸ್ಟಿಯನ್, ಜೈನ್‌, ಸಿಖ್‌ ಹಾಗೂ ಪಾರ್ಸಿ ರೀತಿಯ ಅಲ್ಪಸಂಖ್ಯಾತರ ಗುಂಪಿಗೆ ಸೇರಿದ ಸದಸ್ಯನಾಗಿರಬೇಕು.
* ಅಭ್ಯರ್ಥಿಯ ಕುಟುಂಬ ಸದಸ್ಯರು ಕೇಂದ್ರ, ರಾಜ್ಯ ಹಾಗೂ ಸರ್ಕಾರದ ವಲಯದಲ್ಲಿ ಕೆಲಸ ನಿರ್ವಹಿಸುತ್ತಿದ್ದರೆ ಅಂತಹ ಅಭ್ಯರ್ಥಿ ಈ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು ಅನರ್ಹನಾಗಿರುತ್ತಾನೆ.
* ಅರ್ಜಿದಾರ ಕೆಎಂಡಿಸಿ ಸಾಲಗಳನ್ನು ಮರುಪಾವತಿ ಮಾಡಿರಬೇಕು. ಒಂದುವೇಳೆ ಸಾಲ ಮರುಪಾವತಿ ಮಾಡಿರದಿದ್ದರೆ ಅಂತಹ ಅರ್ಜಿದಾರ ಅನರ್ಹನಾಗುತ್ತಾನೆ.
* ಅಭ್ಯರ್ಥಿಯ ಕುಟುಂಬದ ಯಾವುದೇ ಇತರೆ ಸದಸ್ಯರು ಕಳೆದ ಐದು ವರ್ಷಗಳಲ್ಲಿ ಕೆಎಂಡಿಸಿಎಲ್‌ ಕಾರ್ಯಕ್ರಮದಿಂದ ಪ್ರಯೋಜನ ಪಡೆದುಕೊಂಡಿರಬಾರದು.

ಅರ್ಜಿದಾರ ಸಲ್ಲಿಸಬೇಕಾದ ದಾಖಲೆಗಳು: ಪಾಸ್‌ಪೋರ್ಟ್‌ ಸೈಜಿನ ಫೋಟೊ, ಆಧಾರ್‌ ಕಾರ್ಡ್‌, ಆದಾಯ ಪ್ರಮಾಣ ಪತ್ರ, ಯೋಜನಾ ವರದಿ, ಶ್ಯೂರಿಟಿ ಸ್ವಯಂ ಘೋಷಣೆ ನಮೂನೆ, ಸ್ವಯಂ ಘೋಷಣೆ ನಮೂನೆ, ಬ್ಯಾಂಕ್‌ ಖಾತೆ ವಿವರಗಳು, ಕರ್ನಾಟಕದ ನಿವಾಸ ಪುರಾವೆ, ಆನ್‌ಲೈನ್‌ ಅರ್ಜಿ ನಮೂನೆ, ಜಾತಿ ಪ್ರಮಾಣಪತ್ರಮ ಮತ್ತು ಅಲ್ಪಸಂಖ್ಯಾತರ ಪ್ರಮಾಣ ಪತ್ರ.

andolana

Share
Published by
andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago