ವಾಣಿಜ್ಯ

ಯಥಾಸ್ಥಿತಿ ಕಾಯ್ದುಕೊಂಡ ರೆಪೋ ದರ

ನವದೆಹಲಿ : ಆರ್‌ಬಿಐ ನಿರೀಕ್ಷೆಯಂತೆ ರೆಪೋ ದರ ಯಥಾಸ್ಥಿತಿ ಕಾಯ್ದುಕೊಳ್ಳು ನಿರ್ಧರಿಸಿದೆ ಎಂದು ಆರ್‌ಬಿಐ (ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ) ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅವರು ತಿಳಿಸಿದ್ದಾರೆ.

ಮೂರು ದಿನಗಳ ಎಂಪಿಸಿ ಸಭೆ ಬಳಿಕ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಕ್ತಿಕಾಂತ್‌ ದಾಸ್‌ ಅವರು ಮಧ್ಯಮ ಆರ್ಥಿಕ ಸ್ಥಿರತೆ ಹಾಗೂ ಆರ್ಥಿಕ ಬೆಳವಣಿಗೆಯ ಬಗ್ಗೆ ನಿಗಾ ಇರಿಸಲಾಗಿದೆ. ಹಣದುಬ್ಬರವನ್ನೂ ಕೂಡ ಪರಿಶೀಲಿಸಲಾಗುತ್ತಿದೆ. ಈ ಬಗ್ಗೆ ತುರ್ತು ಸಂದರ್ಭದಲ್ಲಿ ವಿಶೇಷ ಸಭೆ ಕರೆದು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. ಈಗ ಆರ್‌ಬಿಐ (ಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ) ನಿರೀಕ್ಷೆಯಂತೆ ರೆಪೋ ದರದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳಲು ನಿರ್ದರಿಸಲಾಗಿದೆ. ಹಾಗಾಗಿ ಬಡ್ಡಿ ದರವನ್ನು ಶೇ.6.5 ರಲ್ಲಿ ಮುಂದುವರಿಸುತ್ತಿರುವುದಾಗಿ ತಿಳಿಸಿದ್ದಾರೆ.

ಈ ಮೂಲಕ ಸತತ ಐದನೇ ಬಾರಿಗೆ ರೆಪೋ ದರ ಶೇ. 6.5 ರ ದರದ ಮಟ್ಟದಲ್ಲಿಯೇ ಇದೆ.

ಪ್ರತಿ ಎರಡು ತಿಂಗಳಿಗೊಮ್ಮೆ ನಡೆಯುವ ಎಂಪಿಸಿ ಸಭೆಯಲ್ಲಿ ರೆಪೋ ದರ ಮಾತ್ರವಲ್ಲದೇ ಸ್ಟಾಂಡಿಂಗ್‌ ಡೆಪಾಸಿಟ್‌ ಫೆಸಿಲಿಟಿ ಹಾಗೂ ಮಾರ್ಜಿನಲ್‌ ಸ್ಟ್ಯಾಂಡಿಂಗ್‌ ಫೆಸಿಲಿಟಿ ದರವನ್ನು ಕ್ರಮವಾಗಿ ಶೇ. 6.25 ಮತ್ತು ಶೇ. 6.7 ರಲ್ಲಿ ಮುಂದುವರಿಸಲು ನಿರ್ಧರಿಸಲಾಗಿದೆ. ಹಣದುಬ್ಬರಕ್ಕೆ ಕಡಿವಾಣ ಹಾಕುವ ಸಲುವಾಗಿ ಪ್ರಮುಖ ಅಸ್ತ್ರವೆನ್ನಲಾದ ವಿತ್‌ ಡ್ರಾವಲ್‌ ಆಫ್‌ ಅಕಮಡೇಶನ್‌ ನ ಕ್ರಮವನ್ನು ಮುದುವರೆಸಲು ನಿರ್ಧರಿಸಲಾಗಿದೆ.

lokesh

Share
Published by
lokesh
Tags: RBIrepo-rate

Recent Posts

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

59 mins ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

3 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

6 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

6 hours ago

ಜಿಬಿಎ ಚುನಾವಣೆಗೆ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ರಿಲೀಫ್‌ ನೀಡಿದೆ. ಜಿಬಿಎ ಚುನಾವಣೆಗೆ…

8 hours ago

ರಾಜ್ಯದಲ್ಲಿ ಒಂದು ವಾರ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.20ರಿಂದ 26ರವರೆಗೆ ರಾಜ್ಯದ…

8 hours ago