ವಾಣಿಜ್ಯ

ಯಥಾಸ್ಥಿತಿ ಕಾಯ್ದುಕೊಂಡ ರೆಪೋ ದರ

ನವದೆಹಲಿ : ಆರ್‌ಬಿಐ ನಿರೀಕ್ಷೆಯಂತೆ ರೆಪೋ ದರ ಯಥಾಸ್ಥಿತಿ ಕಾಯ್ದುಕೊಳ್ಳು ನಿರ್ಧರಿಸಿದೆ ಎಂದು ಆರ್‌ಬಿಐ (ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ) ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅವರು ತಿಳಿಸಿದ್ದಾರೆ.

ಮೂರು ದಿನಗಳ ಎಂಪಿಸಿ ಸಭೆ ಬಳಿಕ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಕ್ತಿಕಾಂತ್‌ ದಾಸ್‌ ಅವರು ಮಧ್ಯಮ ಆರ್ಥಿಕ ಸ್ಥಿರತೆ ಹಾಗೂ ಆರ್ಥಿಕ ಬೆಳವಣಿಗೆಯ ಬಗ್ಗೆ ನಿಗಾ ಇರಿಸಲಾಗಿದೆ. ಹಣದುಬ್ಬರವನ್ನೂ ಕೂಡ ಪರಿಶೀಲಿಸಲಾಗುತ್ತಿದೆ. ಈ ಬಗ್ಗೆ ತುರ್ತು ಸಂದರ್ಭದಲ್ಲಿ ವಿಶೇಷ ಸಭೆ ಕರೆದು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. ಈಗ ಆರ್‌ಬಿಐ (ಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ) ನಿರೀಕ್ಷೆಯಂತೆ ರೆಪೋ ದರದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳಲು ನಿರ್ದರಿಸಲಾಗಿದೆ. ಹಾಗಾಗಿ ಬಡ್ಡಿ ದರವನ್ನು ಶೇ.6.5 ರಲ್ಲಿ ಮುಂದುವರಿಸುತ್ತಿರುವುದಾಗಿ ತಿಳಿಸಿದ್ದಾರೆ.

ಈ ಮೂಲಕ ಸತತ ಐದನೇ ಬಾರಿಗೆ ರೆಪೋ ದರ ಶೇ. 6.5 ರ ದರದ ಮಟ್ಟದಲ್ಲಿಯೇ ಇದೆ.

ಪ್ರತಿ ಎರಡು ತಿಂಗಳಿಗೊಮ್ಮೆ ನಡೆಯುವ ಎಂಪಿಸಿ ಸಭೆಯಲ್ಲಿ ರೆಪೋ ದರ ಮಾತ್ರವಲ್ಲದೇ ಸ್ಟಾಂಡಿಂಗ್‌ ಡೆಪಾಸಿಟ್‌ ಫೆಸಿಲಿಟಿ ಹಾಗೂ ಮಾರ್ಜಿನಲ್‌ ಸ್ಟ್ಯಾಂಡಿಂಗ್‌ ಫೆಸಿಲಿಟಿ ದರವನ್ನು ಕ್ರಮವಾಗಿ ಶೇ. 6.25 ಮತ್ತು ಶೇ. 6.7 ರಲ್ಲಿ ಮುಂದುವರಿಸಲು ನಿರ್ಧರಿಸಲಾಗಿದೆ. ಹಣದುಬ್ಬರಕ್ಕೆ ಕಡಿವಾಣ ಹಾಕುವ ಸಲುವಾಗಿ ಪ್ರಮುಖ ಅಸ್ತ್ರವೆನ್ನಲಾದ ವಿತ್‌ ಡ್ರಾವಲ್‌ ಆಫ್‌ ಅಕಮಡೇಶನ್‌ ನ ಕ್ರಮವನ್ನು ಮುದುವರೆಸಲು ನಿರ್ಧರಿಸಲಾಗಿದೆ.

lokesh

Share
Published by
lokesh
Tags: RBIrepo-rate

Recent Posts

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

2 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

2 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

3 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

3 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

4 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

6 hours ago