ವಾಣಿಜ್ಯ

ದೇಶದ ಜಿಡಿಪಿ ಬೆಳವಣಿಗೆಯಲ್ಲಿ ಅಚ್ಚರಿ ಜಿಗಿತ : ಶೇ.8.2ಕ್ಕೆ ಏರಿಕೆ

ಹೊಸದಿಲ್ಲಿ : ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು ಆಶ್ಚರ್ಯಕರವಾದ ಬೆಳವಣಿಗೆ ಸಾಧಿಸಿದ್ದು, ಈ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ GDP ಶೇಕಡಾ 8.2 ರಷ್ಟು ಹೆಚ್ಚಿದೆ ಎಂದು ಶುಕ್ರವಾರ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಅಂಕಿಅಂಶಗಳು ತಿಳಿಸಿವೆ.

ಇದು ಒಂದು ವರ್ಷದ ಹಿಂದಿನ ಇದೇ ಅವಧಿಯಲ್ಲಿ ಶೇಕಡಾ 5.6 ರಿಂದ ಶೇ. 8.2ಕ್ಕೆ ಪ್ರಬಲ ಜಿಗಿತವಾಗಿದೆ ಮತ್ತು ಗರಿಷ್ಟ ಬೆಳವಣಿಗೆಯಾಗಿದೆ.

ರಾಷ್ಟ್ರೀಯ ಅಂಕಿಅಂಶ ಕಚೇರಿ(NSO) ಬಿಡುಗಡೆ ಮಾಡಿರುವ ದತ್ತಾಂಶದಲ್ಲಿ ತೋರಿಸಿರುವ ಆರ್ಥಿಕ ಬೆಳವಣಿಗೆಯು ಅರ್ಥಶಾಸ್ತ್ರಜ್ಞರು ಮಾಡಿದ ಅಂದಾಜುಗಳನ್ನು ಮೀರಿಸಿದೆ.

ಮೊದಲ ತ್ರೈಮಾಸಿಕದಲ್ಲಿ(ಏಪ್ರಿಲ್-ಜೂನ್) ನೈಜ GDPಯಲ್ಲಿ ಶೇ. 7.8 ರಷ್ಟು ಹೆಚ್ಚಳವಾಗಿತ್ತು. ಈಗ ಎರಡನೇ ತ್ರೈಮಾಸಿಕದಲ್ಲಿ GDP ಶೇಕಡಾ 8.2 ರಷ್ಟು ಹೆಚ್ಚಿದೆ ಎಂದು ರಾಷ್ಟ್ರೀಯ ಅಂಕಿಅಂಶ ಕಚೇರಿಯ(NSO) ಇತ್ತೀಚಿನ ದತ್ತಾಂಶ ಬಹಿರಂಗಪಡಿಸಿದೆ.

ಇದಕ್ಕೂ ಮೊದಲು 2024ರ ಜನವರಿ – ಮಾರ್ಚ್ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಶೇ. 8.4ರಷ್ಟು ಗರಿಷ್ಠ ಬೆಳವಣಿಗೆ ಕಂಡಿತ್ತು. ಇದೀಗ ಮತ್ತೆ ಶೇ. 7.8ರಷ್ಟು ಬೆಳವಣಿಗೆಯೊಂದಿಗೆ ಭಾರತವು ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆ ಎಂಬ ತನ್ನ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

8 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

8 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

8 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

8 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

8 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

11 hours ago