ಹೊಸದಿಲ್ಲಿ : ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು ಆಶ್ಚರ್ಯಕರವಾದ ಬೆಳವಣಿಗೆ ಸಾಧಿಸಿದ್ದು, ಈ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ GDP ಶೇಕಡಾ 8.2 ರಷ್ಟು ಹೆಚ್ಚಿದೆ ಎಂದು ಶುಕ್ರವಾರ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಅಂಕಿಅಂಶಗಳು ತಿಳಿಸಿವೆ.
ಇದು ಒಂದು ವರ್ಷದ ಹಿಂದಿನ ಇದೇ ಅವಧಿಯಲ್ಲಿ ಶೇಕಡಾ 5.6 ರಿಂದ ಶೇ. 8.2ಕ್ಕೆ ಪ್ರಬಲ ಜಿಗಿತವಾಗಿದೆ ಮತ್ತು ಗರಿಷ್ಟ ಬೆಳವಣಿಗೆಯಾಗಿದೆ.
ರಾಷ್ಟ್ರೀಯ ಅಂಕಿಅಂಶ ಕಚೇರಿ(NSO) ಬಿಡುಗಡೆ ಮಾಡಿರುವ ದತ್ತಾಂಶದಲ್ಲಿ ತೋರಿಸಿರುವ ಆರ್ಥಿಕ ಬೆಳವಣಿಗೆಯು ಅರ್ಥಶಾಸ್ತ್ರಜ್ಞರು ಮಾಡಿದ ಅಂದಾಜುಗಳನ್ನು ಮೀರಿಸಿದೆ.
ಮೊದಲ ತ್ರೈಮಾಸಿಕದಲ್ಲಿ(ಏಪ್ರಿಲ್-ಜೂನ್) ನೈಜ GDPಯಲ್ಲಿ ಶೇ. 7.8 ರಷ್ಟು ಹೆಚ್ಚಳವಾಗಿತ್ತು. ಈಗ ಎರಡನೇ ತ್ರೈಮಾಸಿಕದಲ್ಲಿ GDP ಶೇಕಡಾ 8.2 ರಷ್ಟು ಹೆಚ್ಚಿದೆ ಎಂದು ರಾಷ್ಟ್ರೀಯ ಅಂಕಿಅಂಶ ಕಚೇರಿಯ(NSO) ಇತ್ತೀಚಿನ ದತ್ತಾಂಶ ಬಹಿರಂಗಪಡಿಸಿದೆ.
ಇದಕ್ಕೂ ಮೊದಲು 2024ರ ಜನವರಿ – ಮಾರ್ಚ್ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಶೇ. 8.4ರಷ್ಟು ಗರಿಷ್ಠ ಬೆಳವಣಿಗೆ ಕಂಡಿತ್ತು. ಇದೀಗ ಮತ್ತೆ ಶೇ. 7.8ರಷ್ಟು ಬೆಳವಣಿಗೆಯೊಂದಿಗೆ ಭಾರತವು ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆ ಎಂಬ ತನ್ನ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…