ವಾಣಿಜ್ಯ

ಪ್ರಯಾಣಿಕ ವಾಹನಗಳ ಮೇಲೆ ದರ ಹೆಚ್ಚಿಸಿದ ಟಾಟಾ ಮೋಟಾರ್ಸ್‌

ನವದೆಹಲಿ: ಪ್ರಯಾಣಿಕ ವಾಹನಗಳ ದರ ಹೆಚ್ಚಳ ಮಾಡಲಾಗಿದ್ದು, ನವೆಂಬರ್ 7ರಿಂದ ಜಾರಿಗೆ ಬರಲಿದೆ ಎಂದು ಟಾಟಾ ಮೋಟಾರ್ಸ್  ಶನಿವಾರ ತಿಳಿಸಿದೆ. ಸರಾಸರಿ ಶೇಕಡಾ 0.9ರಷ್ಟು ದರ ಏರಿಕೆ ಮಾಡಲಾಗಿದೆ. ವಾಹನದ ವೇರಿಯೆಂಟ್, ಮಾದರಿಗಳ ಆಧಾರದಲ್ಲಿ ದರ ವ್ಯತ್ಯಾಸವಾಗಲಿದೆ ಎಂದು ಕಂಪನಿ ತಿಳಿಸಿದೆ.

ಇತ್ತೀಚಿನ ದಿನಗಳಲ್ಲಿ ವೆಚ್ಚದಲ್ಲಿ ಗಮನಾರ್ಹ ಹೆಚ್ಚಳವಾಗಿದೆ. ಒಟ್ಟಾರೆ ಇನ್‌ಪುಟ್ ವೆಚ್ಚದಲ್ಲಿನ ಅತಿಯಾದ ಹೆಚ್ಚಳವನ್ನು ಸರಿದೂಗಿಸಲು ಕನಿಷ್ಠ ಬೆಲೆ ಏರಿಕೆಯ ಮೂಲಕ ಪ್ರಯತ್ನಿಸುತ್ತಿದ್ದೇವೆ ಎಂದು ಕಂಪನಿ ಹೇಳಿದೆ. ಟಿಯಾಗೊ, ಪಂಚ್, ನೆಕ್ಸಾನ್, ಹ್ಯಾರಿಯರ್, ಸಫಾರಿ ಸೇರಿದಂತೆ ವಿವಿಧ ಬ್ರ್ಯಾಂಡ್​​ನ ಕಾರು / ವಾಹನಗಳನ್ನು ಕಂಪನಿ ಮಾರಾಟ ಮಾಡುತ್ತಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರು ಮಾರಾಟವು ನಿರಂತರವಾಗಿ ಹೆಚ್ಚುತ್ತಿದ್ದು, ಟಾಟಾ ಮೋಟಾರ್ಸ್ ಈ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ. ಸೆಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಅಗ್ರ ಸ್ಥಾನ ಕಾಯ್ದುಕೊಂಡಿತ್ತು. ಟಾಟಾದ ಟಿಗೋರ್ ಇವಿ ಮತ್ತು ನೆಕ್ಸಾನ್ ಇವಿ ಕಾರುಗಳು ಅಗ್ರಸ್ಥಾನದಲ್ಲಿದ್ದು, ಎರಡು ಮಾದರಿಗಳು ಸೆಪ್ಟೆಂಬರ್ ಅವಧಿಯಲ್ಲಿ ಒಟ್ಟು 2,831 ಯುನಿಟ್ ಮಾರಾಟಗೊಂಡಿದ್ದವು. ಈ ಕಾರುಗಳ ಮಾರಾಟವು ಕಳೆದ ವರ್ಷದ ಸೆಪ್ಟೆಂಬರ್ ಅವಧಿಗಿಂತ ಶೇ. 271ರಷ್ಟು ಹೆಚ್ಚಳವಾಗಿತ್ತು. ನೆಕ್ಸಾನ್ ಇವಿಯಲ್ಲಿ ಮ್ಯಾಕ್ಸ್ ಎಡಿಷನ್ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು.

ಇತ್ತೀಚೆಗೆ ಪ್ರಕಟಗೊಂಡಿದ್ದ ವಿಶ್ವದ ಅತ್ಯಂತ ಮೌಲ್ಯಯುತ 100 ಬ್ರ್ಯಾಂಡ್​ಗಳ ಪಟ್ಟಿಯಲ್ಲಿ ಕೂಡ ಟಾಟಾ ಗ್ರೂಪ್ ಸ್ಥಾನ ಗಳಿಸಿತ್ತು. ಪಟ್ಟಿಯಲ್ಲಿ ಕಂಪನಿಯು 77ನೇ ಸ್ಥಾನದಲ್ಲಿ ಗುರುತಿಸಿಕೊಂಡಿತ್ತು. ಆಟೊಮೊಬೈಲ್ ಉದ್ಯಮದಲ್ಲಿ ವಿಶೇಷ ಪ್ರಗತಿ ಸಾಧಿಸುವ ಮೂಲಕ ಟಾಟಾ ಗ್ರೂಪ್ ಇತ್ತೀಚೆಗೆ ಭಾರತದಲ್ಲಿ ಭಾರಿ ಪ್ರಸಿದ್ಧಿ ಪಡೆದಿದೆ. ವಿವಿಧ ಮಾದರಿಯ ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿಯೂ ಕಂಪನಿ ಮುಂಚೂಣಿಯಲ್ಲಿದೆ. ಟಾಟಾ ಗ್ರೂಪ್​ನ ಬ್ರ್ಯಾಂಡ್ ಆಗಿರುವ ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ.

andolana

Recent Posts

ಆಕಸ್ಮಿಕ ಬೆಂಕಿ : ಒಕ್ಕಲೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

41 mins ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

49 mins ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

57 mins ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

1 hour ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

1 hour ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

1 hour ago