ವಾಣಿಜ್ಯ

ಪ್ರಯಾಣಿಕ ವಾಹನಗಳ ಮೇಲೆ ದರ ಹೆಚ್ಚಿಸಿದ ಟಾಟಾ ಮೋಟಾರ್ಸ್‌

ನವದೆಹಲಿ: ಪ್ರಯಾಣಿಕ ವಾಹನಗಳ ದರ ಹೆಚ್ಚಳ ಮಾಡಲಾಗಿದ್ದು, ನವೆಂಬರ್ 7ರಿಂದ ಜಾರಿಗೆ ಬರಲಿದೆ ಎಂದು ಟಾಟಾ ಮೋಟಾರ್ಸ್  ಶನಿವಾರ ತಿಳಿಸಿದೆ. ಸರಾಸರಿ ಶೇಕಡಾ 0.9ರಷ್ಟು ದರ ಏರಿಕೆ ಮಾಡಲಾಗಿದೆ. ವಾಹನದ ವೇರಿಯೆಂಟ್, ಮಾದರಿಗಳ ಆಧಾರದಲ್ಲಿ ದರ ವ್ಯತ್ಯಾಸವಾಗಲಿದೆ ಎಂದು ಕಂಪನಿ ತಿಳಿಸಿದೆ.

ಇತ್ತೀಚಿನ ದಿನಗಳಲ್ಲಿ ವೆಚ್ಚದಲ್ಲಿ ಗಮನಾರ್ಹ ಹೆಚ್ಚಳವಾಗಿದೆ. ಒಟ್ಟಾರೆ ಇನ್‌ಪುಟ್ ವೆಚ್ಚದಲ್ಲಿನ ಅತಿಯಾದ ಹೆಚ್ಚಳವನ್ನು ಸರಿದೂಗಿಸಲು ಕನಿಷ್ಠ ಬೆಲೆ ಏರಿಕೆಯ ಮೂಲಕ ಪ್ರಯತ್ನಿಸುತ್ತಿದ್ದೇವೆ ಎಂದು ಕಂಪನಿ ಹೇಳಿದೆ. ಟಿಯಾಗೊ, ಪಂಚ್, ನೆಕ್ಸಾನ್, ಹ್ಯಾರಿಯರ್, ಸಫಾರಿ ಸೇರಿದಂತೆ ವಿವಿಧ ಬ್ರ್ಯಾಂಡ್​​ನ ಕಾರು / ವಾಹನಗಳನ್ನು ಕಂಪನಿ ಮಾರಾಟ ಮಾಡುತ್ತಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರು ಮಾರಾಟವು ನಿರಂತರವಾಗಿ ಹೆಚ್ಚುತ್ತಿದ್ದು, ಟಾಟಾ ಮೋಟಾರ್ಸ್ ಈ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ. ಸೆಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಅಗ್ರ ಸ್ಥಾನ ಕಾಯ್ದುಕೊಂಡಿತ್ತು. ಟಾಟಾದ ಟಿಗೋರ್ ಇವಿ ಮತ್ತು ನೆಕ್ಸಾನ್ ಇವಿ ಕಾರುಗಳು ಅಗ್ರಸ್ಥಾನದಲ್ಲಿದ್ದು, ಎರಡು ಮಾದರಿಗಳು ಸೆಪ್ಟೆಂಬರ್ ಅವಧಿಯಲ್ಲಿ ಒಟ್ಟು 2,831 ಯುನಿಟ್ ಮಾರಾಟಗೊಂಡಿದ್ದವು. ಈ ಕಾರುಗಳ ಮಾರಾಟವು ಕಳೆದ ವರ್ಷದ ಸೆಪ್ಟೆಂಬರ್ ಅವಧಿಗಿಂತ ಶೇ. 271ರಷ್ಟು ಹೆಚ್ಚಳವಾಗಿತ್ತು. ನೆಕ್ಸಾನ್ ಇವಿಯಲ್ಲಿ ಮ್ಯಾಕ್ಸ್ ಎಡಿಷನ್ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು.

ಇತ್ತೀಚೆಗೆ ಪ್ರಕಟಗೊಂಡಿದ್ದ ವಿಶ್ವದ ಅತ್ಯಂತ ಮೌಲ್ಯಯುತ 100 ಬ್ರ್ಯಾಂಡ್​ಗಳ ಪಟ್ಟಿಯಲ್ಲಿ ಕೂಡ ಟಾಟಾ ಗ್ರೂಪ್ ಸ್ಥಾನ ಗಳಿಸಿತ್ತು. ಪಟ್ಟಿಯಲ್ಲಿ ಕಂಪನಿಯು 77ನೇ ಸ್ಥಾನದಲ್ಲಿ ಗುರುತಿಸಿಕೊಂಡಿತ್ತು. ಆಟೊಮೊಬೈಲ್ ಉದ್ಯಮದಲ್ಲಿ ವಿಶೇಷ ಪ್ರಗತಿ ಸಾಧಿಸುವ ಮೂಲಕ ಟಾಟಾ ಗ್ರೂಪ್ ಇತ್ತೀಚೆಗೆ ಭಾರತದಲ್ಲಿ ಭಾರಿ ಪ್ರಸಿದ್ಧಿ ಪಡೆದಿದೆ. ವಿವಿಧ ಮಾದರಿಯ ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿಯೂ ಕಂಪನಿ ಮುಂಚೂಣಿಯಲ್ಲಿದೆ. ಟಾಟಾ ಗ್ರೂಪ್​ನ ಬ್ರ್ಯಾಂಡ್ ಆಗಿರುವ ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ.

andolana

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago