ವಾಣಿಜ್ಯ

ಪ್ರಯಾಣಿಕ ವಾಹನಗಳ ಮೇಲೆ ದರ ಹೆಚ್ಚಿಸಿದ ಟಾಟಾ ಮೋಟಾರ್ಸ್‌

ನವದೆಹಲಿ: ಪ್ರಯಾಣಿಕ ವಾಹನಗಳ ದರ ಹೆಚ್ಚಳ ಮಾಡಲಾಗಿದ್ದು, ನವೆಂಬರ್ 7ರಿಂದ ಜಾರಿಗೆ ಬರಲಿದೆ ಎಂದು ಟಾಟಾ ಮೋಟಾರ್ಸ್  ಶನಿವಾರ ತಿಳಿಸಿದೆ. ಸರಾಸರಿ ಶೇಕಡಾ 0.9ರಷ್ಟು ದರ ಏರಿಕೆ ಮಾಡಲಾಗಿದೆ. ವಾಹನದ ವೇರಿಯೆಂಟ್, ಮಾದರಿಗಳ ಆಧಾರದಲ್ಲಿ ದರ ವ್ಯತ್ಯಾಸವಾಗಲಿದೆ ಎಂದು ಕಂಪನಿ ತಿಳಿಸಿದೆ.

ಇತ್ತೀಚಿನ ದಿನಗಳಲ್ಲಿ ವೆಚ್ಚದಲ್ಲಿ ಗಮನಾರ್ಹ ಹೆಚ್ಚಳವಾಗಿದೆ. ಒಟ್ಟಾರೆ ಇನ್‌ಪುಟ್ ವೆಚ್ಚದಲ್ಲಿನ ಅತಿಯಾದ ಹೆಚ್ಚಳವನ್ನು ಸರಿದೂಗಿಸಲು ಕನಿಷ್ಠ ಬೆಲೆ ಏರಿಕೆಯ ಮೂಲಕ ಪ್ರಯತ್ನಿಸುತ್ತಿದ್ದೇವೆ ಎಂದು ಕಂಪನಿ ಹೇಳಿದೆ. ಟಿಯಾಗೊ, ಪಂಚ್, ನೆಕ್ಸಾನ್, ಹ್ಯಾರಿಯರ್, ಸಫಾರಿ ಸೇರಿದಂತೆ ವಿವಿಧ ಬ್ರ್ಯಾಂಡ್​​ನ ಕಾರು / ವಾಹನಗಳನ್ನು ಕಂಪನಿ ಮಾರಾಟ ಮಾಡುತ್ತಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರು ಮಾರಾಟವು ನಿರಂತರವಾಗಿ ಹೆಚ್ಚುತ್ತಿದ್ದು, ಟಾಟಾ ಮೋಟಾರ್ಸ್ ಈ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ. ಸೆಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಅಗ್ರ ಸ್ಥಾನ ಕಾಯ್ದುಕೊಂಡಿತ್ತು. ಟಾಟಾದ ಟಿಗೋರ್ ಇವಿ ಮತ್ತು ನೆಕ್ಸಾನ್ ಇವಿ ಕಾರುಗಳು ಅಗ್ರಸ್ಥಾನದಲ್ಲಿದ್ದು, ಎರಡು ಮಾದರಿಗಳು ಸೆಪ್ಟೆಂಬರ್ ಅವಧಿಯಲ್ಲಿ ಒಟ್ಟು 2,831 ಯುನಿಟ್ ಮಾರಾಟಗೊಂಡಿದ್ದವು. ಈ ಕಾರುಗಳ ಮಾರಾಟವು ಕಳೆದ ವರ್ಷದ ಸೆಪ್ಟೆಂಬರ್ ಅವಧಿಗಿಂತ ಶೇ. 271ರಷ್ಟು ಹೆಚ್ಚಳವಾಗಿತ್ತು. ನೆಕ್ಸಾನ್ ಇವಿಯಲ್ಲಿ ಮ್ಯಾಕ್ಸ್ ಎಡಿಷನ್ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು.

ಇತ್ತೀಚೆಗೆ ಪ್ರಕಟಗೊಂಡಿದ್ದ ವಿಶ್ವದ ಅತ್ಯಂತ ಮೌಲ್ಯಯುತ 100 ಬ್ರ್ಯಾಂಡ್​ಗಳ ಪಟ್ಟಿಯಲ್ಲಿ ಕೂಡ ಟಾಟಾ ಗ್ರೂಪ್ ಸ್ಥಾನ ಗಳಿಸಿತ್ತು. ಪಟ್ಟಿಯಲ್ಲಿ ಕಂಪನಿಯು 77ನೇ ಸ್ಥಾನದಲ್ಲಿ ಗುರುತಿಸಿಕೊಂಡಿತ್ತು. ಆಟೊಮೊಬೈಲ್ ಉದ್ಯಮದಲ್ಲಿ ವಿಶೇಷ ಪ್ರಗತಿ ಸಾಧಿಸುವ ಮೂಲಕ ಟಾಟಾ ಗ್ರೂಪ್ ಇತ್ತೀಚೆಗೆ ಭಾರತದಲ್ಲಿ ಭಾರಿ ಪ್ರಸಿದ್ಧಿ ಪಡೆದಿದೆ. ವಿವಿಧ ಮಾದರಿಯ ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿಯೂ ಕಂಪನಿ ಮುಂಚೂಣಿಯಲ್ಲಿದೆ. ಟಾಟಾ ಗ್ರೂಪ್​ನ ಬ್ರ್ಯಾಂಡ್ ಆಗಿರುವ ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ.

andolana

Recent Posts

ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ : ಸಿಎಂ ಆರೋಪ

ಮೈಸೂರು : ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಎರಡು…

9 mins ago

ಪಿಎಂ-ಸಿಎಂ ಗುಟ್ಟು ರಟ್ಟು ; ಸಂಭಾಷಣೆ ರಹಸ್ಯ ಬಿಚ್ಚಿಟ್ಟ ಸಿಎಂ

ಮೈಸೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಿವಿಯಲ್ಲಿ…

26 mins ago

ಇನ್ನು ಮುಂದೆ ಸೌಜನ್ಯದಿಂದ ವರ್ತಿಸುವುದಿಲ್ಲ ; ಇರಾನ್‌ಗೆ ಟ್ರಂಪ್‌ನ ಕಠಿಣ ಎಚ್ಚರಿಕೆ

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಮತ್ತೊಮ್ಮೆ ಕಠಿಣ ಎಚ್ಚರಿಕೆ ನೀಡಿದ್ದು, “ನಾವು ಹೇಳುವ ಒಪ್ಪಂದವನ್ನು…

51 mins ago

ಬಿಟ್‌ಕಾಯಿಲ್‌ ಪ್ರಕರಣ; ನಲಪಾಡ್‌ ಹ್ಯಾರಿಸ್‌ ಮನೆ ಸೇರಿ 17 ಕಡೆ ಇ.ಡಿ ದಾಳಿ

ಬೆಂಗಳೂರು : ಕಾಂಗ್ರೆಸ್ ಶಾಸಕ ಎನ್.​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ…

1 hour ago

ಪ್ರಸ್ತುತ ದಲಿತ ರಾಜಕಾರಣದಲ್ಲಿ ಮಹದೇವಪ್ಪ ಎಂಬ ವಿದ್ಯಮಾನ

ರಮೇಶ್‌ ಎಚ್.ಕೆ. ಶಿವಮೊಗ್ಗ ಕರ್ನಾಟಕದಲ್ಲಿ ದಲಿತ ವರ್ಗಗಳ ರಾಜಕಾರಣ ಎಂದಾಕ್ಷಣ ಕೆ. ಹೆಚ್. ರಂಗನಾಥ್, ಬಿ. ರಾಚಯ್ಯ, ಎನ್. ರಾಚಯ್ಯ,…

2 hours ago

ಬೆಂ-ಮೈ ಹೆದ್ದಾರಿಯಲ್ಲಿ ಕಾರು-ಬಸ್ ಡಿಕ್ಕಿ ; ತಪ್ಪಿದ ಭಾರೀ ಅನಾಹುತ, ಪ್ರಯಾಣಿಕರು ಪಾರು

ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್…

2 hours ago