ಮುಂಬೈ: ಕಳೆದ ಹಲವು ದಿನಗಳಿಂದ ತೀವ್ರ ಕುಸಿತ ಕಾಣುತ್ತಿದ್ದ ರೂಪಾಯಿ ಮೌಲ್ಯ ಗುರುವಾರ ಬೆಳಿಗ್ಗೆ ಉತ್ತಮ ಚೇತರಿಕೆ ಕಂಡಿದ್ದು ಭರವಸೆ ಮೂಡಿಸಿದೆ. ಬೆಳಿಗ್ಗೆ 10 ಗಂಟೆ ವೇಳೆಗೆ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕನ್ ಡಾಲರ್) ಎದುರು ರೂಪಾಯಿ 67 ಪೈಸೆ ವೃದ್ಧಿಯಾಗಿ 82.14ರಲ್ಲಿ ವಹಿವಾಟು ನಡೆಸಿತು. ಮಂಗಳವಾರದ ವಹಿವಾಟಿನ ಕೊನೆಯಲ್ಲಿ ರೂಪಾಯಿ ಮೌಲ್ಯ 7 ಪೈಸೆ ವೃದ್ಧಿಯಾಗಿ 82.81 ಆಗಿತ್ತು. ಬುಧವಾರ ಬಲಿಪಾಡ್ಯಮಿ ನಿಮಿತ್ತ ವಿದೇಶಿ ವಿನಿಮಯ ಮಾರುಕಟ್ಟೆ ಕಾರ್ಯಚರಣೆ ಮಾಡಿರಲಿಲ್ಲ.
ಡಾಲರ್ ಸೂಚ್ಯಂಕ 110ಕ್ಕಿಂತ ಕೆಳಮಟ್ಟಕ್ಕೆ ಕುಸಿದಾಗ ರೂಪಾಯಿ ಬಲಗೊಳ್ಳಲಾರಂಭಿಸಿತು ಎಂದು ಫಾರೆಕ್ಸ್ ಟ್ರೆಷರಿ ಅಡೈಸರ್ಸ್ ಮುಖ್ಯಸ್ಥ ಅನಿಲ್ ಕುಮಾರ್ ಬನ್ಸಾಲಿ ತಿಳಿಸಿದರು.
‘ಅಮೆರಿಕದಲ್ಲಿ ಹಣದುಬ್ಬರ ಮತ್ತಷ್ಟು ಏರಿಕೆಯಾಗಿರುವುದು, ರೆಪೊ ದರ ಹೆಚ್ಚಳದಲ್ಲಿ ವಿಳಂಬ ನೀತಿ ಅನುಸರಿಸಿರುವುದು ಡಾಲರ್ ಸೂಚ್ಯಂಕ ಕುಸಿತಕ್ಕೆ ಕಾರಣವಿರಬಹುದು’ ಎಂದು ಬನ್ಸಾಲಿ ಹೇಳಿದ್ದಾರೆ. ಡಾಲರ್ ಸೂಚ್ಯಂಕವು ವಿಶ್ವದ ಇತರ ಪ್ರಮುಖ ಆರು ಕರೆನ್ಸಿಗಳ ವಿರುದ್ಧ ಡಾಲರ್ ಮೌಲ್ಯವನ್ನು ಅಳೆಹಯುವ ಮಾಪನವಾಗಿದೆ. ಸೂಚ್ಯಂಕವು ಸದ್ಯ ಶೇಕಡಾ 0.06 ವೃದ್ಧಿಯಾಗಿ 109.76ರಲ್ಲಿ ವಹಿವಾಟು ನಡೆಸುತ್ತಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ಗೆ 90 ಡಾಲರ್ ಇದ್ದುದು ಇದೀಗ 94 ಡಾಲರ್ಗೆ ಏರಿಕೆಯಾಗಿದೆ. ಇದೂ ಸಹ ಅತಿ ಹೆಚ್ಚು ತೈಲ ಆಮದು ಮಾಡಿಕೊಳ್ಳುವ ಭಾರತದ ರೂಪಾಯಿ ಬಲಗೊಳ್ಳಲು ಕಾರಣವೆನ್ನಲಾಗಿದೆ. ತೈಲ ಕಂಪನಿಗಳು ಮತ್ತು ಆಮದುದಾರರು ಈ ಅವಕಾಶವನ್ನು ಬಳಸಿಕೊಂಡು ಡಾಲರ್ ಅನ್ನು ಕಡಿಮೆ ದರಕ್ಕೆ ಖರೀದಿ ಮಾಡಬಹುದು ಎಂದು ಅವರು ಬನ್ಸಾಲಿ ಹೇಳಿದ್ದಾರೆ.
ಬ್ರೆಂಟ್ ಕಚ್ಚಾ ತೈಲದ ದರ ಕೂಡ ಪ್ರತಿ ಬ್ಯಾರೆಲ್ಗೆ ಶೇಕಡಾ 0.26ರಷ್ಟು ಹೆಚ್ಚಾಗಿ 95.94 ಡಾಲರ್ ಆಗಿದೆ.
ಕೆಲವು ದಿನಗಳ ಹಿಂದಷ್ಟೇ ಪಾತಾಳದತ್ತ ಕುಸಿಯುತ್ತಿದ್ದ ರೂಪಾಯಿ ಮೌಲ್ಯ ಒಂದು ಹಂತದಲ್ಲಿ 83.06ರ ವರೆಗೂ ಕುಸಿತ ಕಂಡಿತ್ತು. ಸಾರ್ವಕಾಲಿಕ ಗರಿಷ್ಠ ಕುಸಿತ ದಾಖಲಿಸಿದ್ದ ರೂಪಾಯಿ ಮುಂದಿನ ಕೆಲವು ದಿನಗಳಲ್ಲಿ 83.50ರ ವರೆಗೂ ಕುಸಿಯುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ವಿಶ್ಲೇಷಕರು ಅಂದಾಜಿಸಿದ್ದರು. ಆದರೆ, ಇತ್ತೀಚಿನ ಟ್ರೆಂಡ್ನಲ್ಲಿ ತುಸು ಬಲವರ್ಧನೆಯಾಗುವ ಮೂಲಕ ರೂಪಾಯಿ ಮೌಲ್ಯವು ಇನ್ನಷ್ಟು ಚೇತರಿಕೆ ಕಾಣುವ ಭರವಸೆ ಮೂಡಿಸಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ…
ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…
ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು…
ಬೆಂಗಳೂರು: ತೆಲಂಗಾಣ ರಾಜ್ಯದ ಡಿಸಿಎಂ ಭಟ್ಟಿ ವಿಕ್ರಮಾರ್ಕ ಮಲ್ಲು ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ…
ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15…
ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…