ವಾಣಿಜ್ಯ

ಡಾಲರ್‌ ಎದುರು ಉತ್ತಮ ಚೇತರಿಕೆ ಕಂಡ ರೂಪಾಯಿ ಮೌಲ್ಯ

ಮುಂಬೈ: ಕಳೆದ ಹಲವು ದಿನಗಳಿಂದ ತೀವ್ರ ಕುಸಿತ ಕಾಣುತ್ತಿದ್ದ ರೂಪಾಯಿ ಮೌಲ್ಯ ಗುರುವಾರ ಬೆಳಿಗ್ಗೆ ಉತ್ತಮ ಚೇತರಿಕೆ ಕಂಡಿದ್ದು ಭರವಸೆ ಮೂಡಿಸಿದೆ. ಬೆಳಿಗ್ಗೆ 10 ಗಂಟೆ ವೇಳೆಗೆ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕನ್ ಡಾಲರ್) ಎದುರು ರೂಪಾಯಿ 67 ಪೈಸೆ ವೃದ್ಧಿಯಾಗಿ 82.14ರಲ್ಲಿ ವಹಿವಾಟು ನಡೆಸಿತು. ಮಂಗಳವಾರದ ವಹಿವಾಟಿನ ಕೊನೆಯಲ್ಲಿ ರೂಪಾಯಿ ಮೌಲ್ಯ 7 ಪೈಸೆ ವೃದ್ಧಿಯಾಗಿ 82.81 ಆಗಿತ್ತು. ಬುಧವಾರ ಬಲಿಪಾಡ್ಯಮಿ ನಿಮಿತ್ತ ವಿದೇಶಿ ವಿನಿಮಯ ಮಾರುಕಟ್ಟೆ ಕಾರ್ಯಚರಣೆ ಮಾಡಿರಲಿಲ್ಲ.

ಡಾಲರ್ ಸೂಚ್ಯಂಕ 110ಕ್ಕಿಂತ ಕೆಳಮಟ್ಟಕ್ಕೆ ಕುಸಿದಾಗ ರೂಪಾಯಿ ಬಲಗೊಳ್ಳಲಾರಂಭಿಸಿತು ಎಂದು ಫಾರೆಕ್ಸ್ ಟ್ರೆಷರಿ ಅಡೈಸರ್ಸ್ ಮುಖ್ಯಸ್ಥ ಅನಿಲ್ ಕುಮಾರ್ ಬನ್ಸಾಲಿ ತಿಳಿಸಿದರು.

‘ಅಮೆರಿಕದಲ್ಲಿ ಹಣದುಬ್ಬರ ಮತ್ತಷ್ಟು ಏರಿಕೆಯಾಗಿರುವುದು, ರೆಪೊ ದರ ಹೆಚ್ಚಳದಲ್ಲಿ ವಿಳಂಬ ನೀತಿ ಅನುಸರಿಸಿರುವುದು ಡಾಲರ್ ಸೂಚ್ಯಂಕ ಕುಸಿತಕ್ಕೆ ಕಾರಣವಿರಬಹುದು’ ಎಂದು ಬನ್ಸಾಲಿ ಹೇಳಿದ್ದಾರೆ. ಡಾಲರ್ ಸೂಚ್ಯಂಕವು ವಿಶ್ವದ ಇತರ ಪ್ರಮುಖ ಆರು ಕರೆನ್ಸಿಗಳ ವಿರುದ್ಧ ಡಾಲರ್ ಮೌಲ್ಯವನ್ನು ಅಳೆಹಯುವ ಮಾಪನವಾಗಿದೆ. ಸೂಚ್ಯಂಕವು ಸದ್ಯ ಶೇಕಡಾ 0.06 ವೃದ್ಧಿಯಾಗಿ 109.76ರಲ್ಲಿ ವಹಿವಾಟು ನಡೆಸುತ್ತಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್​ಗೆ 90 ಡಾಲರ್ ಇದ್ದುದು ಇದೀಗ 94 ಡಾಲರ್​ಗೆ ಏರಿಕೆಯಾಗಿದೆ. ಇದೂ ಸಹ ಅತಿ ಹೆಚ್ಚು ತೈಲ ಆಮದು ಮಾಡಿಕೊಳ್ಳುವ ಭಾರತದ ರೂಪಾಯಿ ಬಲಗೊಳ್ಳಲು ಕಾರಣವೆನ್ನಲಾಗಿದೆ. ತೈಲ ಕಂಪನಿಗಳು ಮತ್ತು ಆಮದುದಾರರು ಈ ಅವಕಾಶವನ್ನು ಬಳಸಿಕೊಂಡು ಡಾಲರ್ ಅನ್ನು ಕಡಿಮೆ ದರಕ್ಕೆ ಖರೀದಿ ಮಾಡಬಹುದು ಎಂದು ಅವರು ಬನ್ಸಾಲಿ ಹೇಳಿದ್ದಾರೆ.

ಬ್ರೆಂಟ್ ಕಚ್ಚಾ ತೈಲದ ದರ ಕೂಡ ಪ್ರತಿ ಬ್ಯಾರೆಲ್​ಗೆ ಶೇಕಡಾ 0.26ರಷ್ಟು ಹೆಚ್ಚಾಗಿ 95.94 ಡಾಲರ್ ಆಗಿದೆ.

ಕೆಲವು ದಿನಗಳ ಹಿಂದಷ್ಟೇ ಪಾತಾಳದತ್ತ ಕುಸಿಯುತ್ತಿದ್ದ ರೂಪಾಯಿ ಮೌಲ್ಯ ಒಂದು ಹಂತದಲ್ಲಿ 83.06ರ ವರೆಗೂ ಕುಸಿತ ಕಂಡಿತ್ತು. ಸಾರ್ವಕಾಲಿಕ ಗರಿಷ್ಠ ಕುಸಿತ ದಾಖಲಿಸಿದ್ದ ರೂಪಾಯಿ ಮುಂದಿನ ಕೆಲವು ದಿನಗಳಲ್ಲಿ 83.50ರ ವರೆಗೂ ಕುಸಿಯುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ವಿಶ್ಲೇಷಕರು ಅಂದಾಜಿಸಿದ್ದರು. ಆದರೆ, ಇತ್ತೀಚಿನ ಟ್ರೆಂಡ್​​ನಲ್ಲಿ ತುಸು ಬಲವರ್ಧನೆಯಾಗುವ ಮೂಲಕ ರೂಪಾಯಿ ಮೌಲ್ಯವು ಇನ್ನಷ್ಟು ಚೇತರಿಕೆ ಕಾಣುವ ಭರವಸೆ ಮೂಡಿಸಿದೆ.

andolana

Share
Published by
andolana

Recent Posts

ಜೋಹಾನ್ಸ್‌ಬರ್ಗ್‌ನಲ್ಲಿ ಗುಂಡಿನ ದಾಳಿ : 10 ಮಂದಿ ಸಾವು, 10 ಜನರಿಗೆ ಗಾಯ

ಜೋಹಾನ್ಸ್‌ಬರ್ಗ್ : ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಪಶ್ಚಿಮದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ಸಾಮೂಹಿಕ ಗುಂಡಿನ…

1 min ago

ಎಚ್.ಡಿ.ಕೋಟೆ | ಪಟ್ಟಣಕ್ಕೆ ಬಂದ ಚಿರತೆ : ಮೇಕೆ ಬಲಿ ; ಜನರಲ್ಲಿ ಆತಂಕ

ಎಚ್.ಡಿ.ಕೋಟೆ : ಹುಲಿ ದಾಳಿಯಿಂದ ತತ್ತರಿಸಿರುವ ತಾಲ್ಲೂಕಿನ ಜನತೆಗೆ ಇದೀಗ ಚಿರತೆ ದಾಳಿಯು ನಿದ್ದೆಗೆಡಿಸಿದೆ. ಪಟ್ಟಣದ ವಾರ್ಡ್‌ ನಂಬರ್‌ 21ರ…

14 mins ago

ಗಂಗವಾಡಿ ಬಳಿ ಚಿರತೆ ದಾಳಿ : ಮೂರು ಕರು ಸಾವು

ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…

1 hour ago

ರೈಲು ಪ್ರಯಾಣ ದರ ಹೆಚ್ಚಳ : 500 ಕಿ.ಮೀ.ಗೆ 10ರೂ ಏರಿಕೆ

ಹೊಸದಿಲ್ಲಿ : ದೇಶಾದ್ಯಂತ ಡಿಸೆಂಬರ್ 26 ರಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆಯು ಪ್ರಯಾಣ ದರ ಏರಿಕೆ ಮಾಡಿದೆ. ಪರಿಷ್ಕೃತ ದರಗಳಂತೆ,…

1 hour ago

‌ಗುಂಡ್ಲುಪೇಟೆ | ಬಾಳೆ ತೋಟದಲ್ಲಿ ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ…

1 hour ago

ವನ್ಯಜೀವಿ ಛಾಯಾಗ್ರಹಕರಾಗುವ ಮೊದಲು ಕಾಡಿನ ಭಾಷೆ ಅರಿಯಿರಿ : ಕೃಪಾಕರ್‌ ಸೇನಾನಿ

ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್…

1 hour ago