ವಾಣಿಜ್ಯ

ಡಾಲರ್‌ ಎದುರು ಉತ್ತಮ ಚೇತರಿಕೆ ಕಂಡ ರೂಪಾಯಿ ಮೌಲ್ಯ

ಮುಂಬೈ: ಕಳೆದ ಹಲವು ದಿನಗಳಿಂದ ತೀವ್ರ ಕುಸಿತ ಕಾಣುತ್ತಿದ್ದ ರೂಪಾಯಿ ಮೌಲ್ಯ ಗುರುವಾರ ಬೆಳಿಗ್ಗೆ ಉತ್ತಮ ಚೇತರಿಕೆ ಕಂಡಿದ್ದು ಭರವಸೆ ಮೂಡಿಸಿದೆ. ಬೆಳಿಗ್ಗೆ 10 ಗಂಟೆ ವೇಳೆಗೆ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕನ್ ಡಾಲರ್) ಎದುರು ರೂಪಾಯಿ 67 ಪೈಸೆ ವೃದ್ಧಿಯಾಗಿ 82.14ರಲ್ಲಿ ವಹಿವಾಟು ನಡೆಸಿತು. ಮಂಗಳವಾರದ ವಹಿವಾಟಿನ ಕೊನೆಯಲ್ಲಿ ರೂಪಾಯಿ ಮೌಲ್ಯ 7 ಪೈಸೆ ವೃದ್ಧಿಯಾಗಿ 82.81 ಆಗಿತ್ತು. ಬುಧವಾರ ಬಲಿಪಾಡ್ಯಮಿ ನಿಮಿತ್ತ ವಿದೇಶಿ ವಿನಿಮಯ ಮಾರುಕಟ್ಟೆ ಕಾರ್ಯಚರಣೆ ಮಾಡಿರಲಿಲ್ಲ.

ಡಾಲರ್ ಸೂಚ್ಯಂಕ 110ಕ್ಕಿಂತ ಕೆಳಮಟ್ಟಕ್ಕೆ ಕುಸಿದಾಗ ರೂಪಾಯಿ ಬಲಗೊಳ್ಳಲಾರಂಭಿಸಿತು ಎಂದು ಫಾರೆಕ್ಸ್ ಟ್ರೆಷರಿ ಅಡೈಸರ್ಸ್ ಮುಖ್ಯಸ್ಥ ಅನಿಲ್ ಕುಮಾರ್ ಬನ್ಸಾಲಿ ತಿಳಿಸಿದರು.

‘ಅಮೆರಿಕದಲ್ಲಿ ಹಣದುಬ್ಬರ ಮತ್ತಷ್ಟು ಏರಿಕೆಯಾಗಿರುವುದು, ರೆಪೊ ದರ ಹೆಚ್ಚಳದಲ್ಲಿ ವಿಳಂಬ ನೀತಿ ಅನುಸರಿಸಿರುವುದು ಡಾಲರ್ ಸೂಚ್ಯಂಕ ಕುಸಿತಕ್ಕೆ ಕಾರಣವಿರಬಹುದು’ ಎಂದು ಬನ್ಸಾಲಿ ಹೇಳಿದ್ದಾರೆ. ಡಾಲರ್ ಸೂಚ್ಯಂಕವು ವಿಶ್ವದ ಇತರ ಪ್ರಮುಖ ಆರು ಕರೆನ್ಸಿಗಳ ವಿರುದ್ಧ ಡಾಲರ್ ಮೌಲ್ಯವನ್ನು ಅಳೆಹಯುವ ಮಾಪನವಾಗಿದೆ. ಸೂಚ್ಯಂಕವು ಸದ್ಯ ಶೇಕಡಾ 0.06 ವೃದ್ಧಿಯಾಗಿ 109.76ರಲ್ಲಿ ವಹಿವಾಟು ನಡೆಸುತ್ತಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್​ಗೆ 90 ಡಾಲರ್ ಇದ್ದುದು ಇದೀಗ 94 ಡಾಲರ್​ಗೆ ಏರಿಕೆಯಾಗಿದೆ. ಇದೂ ಸಹ ಅತಿ ಹೆಚ್ಚು ತೈಲ ಆಮದು ಮಾಡಿಕೊಳ್ಳುವ ಭಾರತದ ರೂಪಾಯಿ ಬಲಗೊಳ್ಳಲು ಕಾರಣವೆನ್ನಲಾಗಿದೆ. ತೈಲ ಕಂಪನಿಗಳು ಮತ್ತು ಆಮದುದಾರರು ಈ ಅವಕಾಶವನ್ನು ಬಳಸಿಕೊಂಡು ಡಾಲರ್ ಅನ್ನು ಕಡಿಮೆ ದರಕ್ಕೆ ಖರೀದಿ ಮಾಡಬಹುದು ಎಂದು ಅವರು ಬನ್ಸಾಲಿ ಹೇಳಿದ್ದಾರೆ.

ಬ್ರೆಂಟ್ ಕಚ್ಚಾ ತೈಲದ ದರ ಕೂಡ ಪ್ರತಿ ಬ್ಯಾರೆಲ್​ಗೆ ಶೇಕಡಾ 0.26ರಷ್ಟು ಹೆಚ್ಚಾಗಿ 95.94 ಡಾಲರ್ ಆಗಿದೆ.

ಕೆಲವು ದಿನಗಳ ಹಿಂದಷ್ಟೇ ಪಾತಾಳದತ್ತ ಕುಸಿಯುತ್ತಿದ್ದ ರೂಪಾಯಿ ಮೌಲ್ಯ ಒಂದು ಹಂತದಲ್ಲಿ 83.06ರ ವರೆಗೂ ಕುಸಿತ ಕಂಡಿತ್ತು. ಸಾರ್ವಕಾಲಿಕ ಗರಿಷ್ಠ ಕುಸಿತ ದಾಖಲಿಸಿದ್ದ ರೂಪಾಯಿ ಮುಂದಿನ ಕೆಲವು ದಿನಗಳಲ್ಲಿ 83.50ರ ವರೆಗೂ ಕುಸಿಯುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ವಿಶ್ಲೇಷಕರು ಅಂದಾಜಿಸಿದ್ದರು. ಆದರೆ, ಇತ್ತೀಚಿನ ಟ್ರೆಂಡ್​​ನಲ್ಲಿ ತುಸು ಬಲವರ್ಧನೆಯಾಗುವ ಮೂಲಕ ರೂಪಾಯಿ ಮೌಲ್ಯವು ಇನ್ನಷ್ಟು ಚೇತರಿಕೆ ಕಾಣುವ ಭರವಸೆ ಮೂಡಿಸಿದೆ.

andolana

Share
Published by
andolana

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

6 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

7 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago