ವಾಣಿಜ್ಯ

ಡಾಲರ್‌ ಎದುರು ಉತ್ತಮ ಚೇತರಿಕೆ ಕಂಡ ರೂಪಾಯಿ ಮೌಲ್ಯ

ಮುಂಬೈ: ಕಳೆದ ಹಲವು ದಿನಗಳಿಂದ ತೀವ್ರ ಕುಸಿತ ಕಾಣುತ್ತಿದ್ದ ರೂಪಾಯಿ ಮೌಲ್ಯ ಗುರುವಾರ ಬೆಳಿಗ್ಗೆ ಉತ್ತಮ ಚೇತರಿಕೆ ಕಂಡಿದ್ದು ಭರವಸೆ ಮೂಡಿಸಿದೆ. ಬೆಳಿಗ್ಗೆ 10 ಗಂಟೆ ವೇಳೆಗೆ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕನ್ ಡಾಲರ್) ಎದುರು ರೂಪಾಯಿ 67 ಪೈಸೆ ವೃದ್ಧಿಯಾಗಿ 82.14ರಲ್ಲಿ ವಹಿವಾಟು ನಡೆಸಿತು. ಮಂಗಳವಾರದ ವಹಿವಾಟಿನ ಕೊನೆಯಲ್ಲಿ ರೂಪಾಯಿ ಮೌಲ್ಯ 7 ಪೈಸೆ ವೃದ್ಧಿಯಾಗಿ 82.81 ಆಗಿತ್ತು. ಬುಧವಾರ ಬಲಿಪಾಡ್ಯಮಿ ನಿಮಿತ್ತ ವಿದೇಶಿ ವಿನಿಮಯ ಮಾರುಕಟ್ಟೆ ಕಾರ್ಯಚರಣೆ ಮಾಡಿರಲಿಲ್ಲ.

ಡಾಲರ್ ಸೂಚ್ಯಂಕ 110ಕ್ಕಿಂತ ಕೆಳಮಟ್ಟಕ್ಕೆ ಕುಸಿದಾಗ ರೂಪಾಯಿ ಬಲಗೊಳ್ಳಲಾರಂಭಿಸಿತು ಎಂದು ಫಾರೆಕ್ಸ್ ಟ್ರೆಷರಿ ಅಡೈಸರ್ಸ್ ಮುಖ್ಯಸ್ಥ ಅನಿಲ್ ಕುಮಾರ್ ಬನ್ಸಾಲಿ ತಿಳಿಸಿದರು.

‘ಅಮೆರಿಕದಲ್ಲಿ ಹಣದುಬ್ಬರ ಮತ್ತಷ್ಟು ಏರಿಕೆಯಾಗಿರುವುದು, ರೆಪೊ ದರ ಹೆಚ್ಚಳದಲ್ಲಿ ವಿಳಂಬ ನೀತಿ ಅನುಸರಿಸಿರುವುದು ಡಾಲರ್ ಸೂಚ್ಯಂಕ ಕುಸಿತಕ್ಕೆ ಕಾರಣವಿರಬಹುದು’ ಎಂದು ಬನ್ಸಾಲಿ ಹೇಳಿದ್ದಾರೆ. ಡಾಲರ್ ಸೂಚ್ಯಂಕವು ವಿಶ್ವದ ಇತರ ಪ್ರಮುಖ ಆರು ಕರೆನ್ಸಿಗಳ ವಿರುದ್ಧ ಡಾಲರ್ ಮೌಲ್ಯವನ್ನು ಅಳೆಹಯುವ ಮಾಪನವಾಗಿದೆ. ಸೂಚ್ಯಂಕವು ಸದ್ಯ ಶೇಕಡಾ 0.06 ವೃದ್ಧಿಯಾಗಿ 109.76ರಲ್ಲಿ ವಹಿವಾಟು ನಡೆಸುತ್ತಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್​ಗೆ 90 ಡಾಲರ್ ಇದ್ದುದು ಇದೀಗ 94 ಡಾಲರ್​ಗೆ ಏರಿಕೆಯಾಗಿದೆ. ಇದೂ ಸಹ ಅತಿ ಹೆಚ್ಚು ತೈಲ ಆಮದು ಮಾಡಿಕೊಳ್ಳುವ ಭಾರತದ ರೂಪಾಯಿ ಬಲಗೊಳ್ಳಲು ಕಾರಣವೆನ್ನಲಾಗಿದೆ. ತೈಲ ಕಂಪನಿಗಳು ಮತ್ತು ಆಮದುದಾರರು ಈ ಅವಕಾಶವನ್ನು ಬಳಸಿಕೊಂಡು ಡಾಲರ್ ಅನ್ನು ಕಡಿಮೆ ದರಕ್ಕೆ ಖರೀದಿ ಮಾಡಬಹುದು ಎಂದು ಅವರು ಬನ್ಸಾಲಿ ಹೇಳಿದ್ದಾರೆ.

ಬ್ರೆಂಟ್ ಕಚ್ಚಾ ತೈಲದ ದರ ಕೂಡ ಪ್ರತಿ ಬ್ಯಾರೆಲ್​ಗೆ ಶೇಕಡಾ 0.26ರಷ್ಟು ಹೆಚ್ಚಾಗಿ 95.94 ಡಾಲರ್ ಆಗಿದೆ.

ಕೆಲವು ದಿನಗಳ ಹಿಂದಷ್ಟೇ ಪಾತಾಳದತ್ತ ಕುಸಿಯುತ್ತಿದ್ದ ರೂಪಾಯಿ ಮೌಲ್ಯ ಒಂದು ಹಂತದಲ್ಲಿ 83.06ರ ವರೆಗೂ ಕುಸಿತ ಕಂಡಿತ್ತು. ಸಾರ್ವಕಾಲಿಕ ಗರಿಷ್ಠ ಕುಸಿತ ದಾಖಲಿಸಿದ್ದ ರೂಪಾಯಿ ಮುಂದಿನ ಕೆಲವು ದಿನಗಳಲ್ಲಿ 83.50ರ ವರೆಗೂ ಕುಸಿಯುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ವಿಶ್ಲೇಷಕರು ಅಂದಾಜಿಸಿದ್ದರು. ಆದರೆ, ಇತ್ತೀಚಿನ ಟ್ರೆಂಡ್​​ನಲ್ಲಿ ತುಸು ಬಲವರ್ಧನೆಯಾಗುವ ಮೂಲಕ ರೂಪಾಯಿ ಮೌಲ್ಯವು ಇನ್ನಷ್ಟು ಚೇತರಿಕೆ ಕಾಣುವ ಭರವಸೆ ಮೂಡಿಸಿದೆ.

andolana

Share
Published by
andolana

Recent Posts

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

31 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

3 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

19 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

20 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

21 hours ago