ವಾಣಿಜ್ಯ

ನಾಲ್ಕನೇ ದಿನವೂ ಏರಿಕೆ ಕಂಡ ಷೇರುಪೇಟೆ ಸೂಚ್ಯಂಕ

ಮುಂಬೈ : ಷೇರು ಮಾರುಕಟ್ಟೆಯಲ್ಲಿ ಸತತ ನಾಲ್ಕನೇ ದಿನವೂ ಏರಿಕೆ ಮುಂದುವರೆದಿದ್ದು ಮುಂಬೈ ಷೇರುಪೇಟೆ ಸೂಚ್ಯಂಕ(ಬಿಎಸ್‌ಇ) ಸೆನ್ಸೆಕ್ಸ್ 449 ಅಂಕಗಳೊಂದಿಗೆ ಸಾರ್ವಕಾಲಿಕ ಗರಿಷ್ಠ ಮಟ್ಟ 65,000ಕ್ಕೆ ತಲುಪಿದೆ.

30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 449.46 ಪಾಯಿಂಟ್‌ಗಳ ಏರಿಕೆ ಕಂಡು ಸಾರ್ವಕಾಲಿಕ ಗರಿಷ್ಠ ಮಟ್ಟವಾದ 65,168.02 ತಲುಪಿದೆ. ಎನ್‌ಎಸ್‌ಇ ನಿಫ್ಟಿ 128.95 ಪಾಯಿಂಟ್‌ಗಳ ಏರಿಕೆ ಕಂಡು ತನ್ನ ಜೀವಮಾನದ ಗರಿಷ್ಠ 19,318ಕ್ಕೆ ತಲುಪಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಉತ್ತಮ ವಹಿವಾಟು ಮತ್ತು ವಿದೇಶಿ ಬಂಡವಾಳದ ಒಳಹರಿವಿನ ಪ್ರಭಾವದಿಂದ ಈ ಏರಿಕೆ ಕಂಡುಬಂದಿದೆ.

ಸೆನ್ಸೆಕ್ಸ್ ಪ್ಯಾಕ್‌ನಿಂದ, ಎಚ್‌ಡಿಎಫ್‌ಸಿ, ಎಚ್‌ಡಿಎಫ್‌ಸಿ ಬ್ಯಾಂಕ್, ಮಹೀಂದ್ರಾ ಮತ್ತು ಮಹೀಂದ್ರಾ, ಅಲ್ಟ್ರಾಟೆಕ್ ಸಿಮೆಂಟ್, ಟಾಟಾ ಸ್ಟೀಲ್, ಬಜಾಜ್ ಫೈನಾನ್ಸ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ರಿಲಯನ್ಸ್ ಇಂಡಸ್ಟ್ರೀಸ್, ಬಜಾಜ್ ಫಿನ್‌ಸರ್ವ್ ಮತ್ತು ಐಸಿಐಸಿಐ ಬ್ಯಾಂಕ್ ಪ್ರಮುಖ ಲಾಭ ಗಳಿಸಿದ ಸಂಸ್ಥೆಗಳಾದರೆ,

ಪವರ್ ಗ್ರಿಡ್, ಮಾರುತಿ, ಟೆಕ್ ಮಹೀಂದ್ರಾ, ಇಂಡಸ್‌ಇಂಡ್ ಬ್ಯಾಂಕ್, ಎಚ್‌ಸಿಎಲ್ ಟೆಕ್ನಾಲಜೀಸ್ ಮತ್ತು ಆಕ್ಸಿಸ್ ಬ್ಯಾಂಕ್ ನಷ್ಟ ಅನುಭವಿಸಿದೆ.

lokesh

Share
Published by
lokesh

Recent Posts

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪತ್ನಿ ಚನ್ನಮ್ಮ ವಿಧಿವಶ

ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು…

14 mins ago

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

10 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

23 hours ago