ವಾಣಿಜ್ಯ

ಆ್ಯಪಲ್ ಕಂಪನಿಯಲ್ಲಿ ಕೆಲಸ ಗಿಟ್ಟಿಸಿಕೊಳ್ಳಲು ಇರಬೇಕಾದ ಅರ್ಹತೆ ಏನು ?

ಪ್ರತಿಷ್ಠಿತ ಮೊಬೈಲ್‌ ತಯಾರಕ ಕಂಪನಿ ಆ್ಯಪಲ್ ನಲ್ಲಿ ಕೆಲಸ ಗಿಟ್ಟಿಸಿಕೊಳ್ಳುವುದು ಹಲವರ ಕನಸಾಗಿರುತ್ತೆ. ಅಂತೆಯೇ ಕಂಪನಿಯಲ್ಲಿ ಕೆಲಸಕ್ಕೆ ಸೇರಲು ಯಾವೆಲ್ಲಾ ಅರ್ಹತೆಗಳಿರಬೇಕು. ವಿದ್ಯಾಭ್ಯಾಸ ಏನಿರಬೇಕು ಎಂಬ ಗೊಂದಲಗಳಿರುತ್ತವೆ. ಈ ಎಲ್ಲಾ ಗೊಂದಲಗಳಿಗೆ ಕಂಪನಿಯ ಸಿಇಒ ಟಿಮ್‌ ಕುಕ್‌ ಉತ್ತರ ನೀಡಿದ್ದಾರೆ.

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಪಾಲ್ಗೊಂಡಿದ್ದ ಆಪಲ್‌ ಕಂಪನಿಯ ಸಿಇಒ ಟಿಮ್‌ ಕುಕ್‌ ಅವರಿಗೆ ಸಂದರ್ಶನಕಾರರು ನಿಮ್ಮ ಕಂಪನಿಯಲ್ಲಿ ನೇಮಕಾತಿ ಪ್ರಕ್ರಿಯೆ ಹೇಗಿರುತ್ತದೆ ? ಉದ್ಯೋಗ ಪಡೆದುಕೊಳ್ಳಬೇಕಾದರೆ ಏನು ಮಾಡಬೇಕು ? ಎಂಬ ಪ್ರಶ್ನೆಯನ್ನು ಕೇಳಿದ್ದರು. ಇದಕ್ಕೆ ಉತ್ತರಿಸಿದ ಟಿಮ್‌ ಕುಕ್‌ ನಮ್ಮ ಕಂಪನಿಯ ನೇಮಕಾತಿ ಪ್ರಕ್ರಿಯೆಯು ತಂಡದಲ್ಲಿ ಕೆಲಸ ಮಾಡುವ ಸಾಮರ್ಥ್ಯ, ಸೃಜನಶೀಲತೆ, ಕುತೂಹಲದಂತಹ ಗುಣಲಕ್ಷಣಗಳ ಮೇಲೆ ನಿಗಧಿಯಾಗಿರುತ್ತದೆ. ನಮ್ಮ ಕಂಪನಿಯು ಒನ್ ಪ್ಲಸ್‌ ಥ್ರೀ ಕಲ್ಪನೆಯಲ್ಲಿ ಕೆಲಸ ನಿರ್ವಹಿಸುತ್ತದೆ. ನಿಮ್‌ ಹಾಗೂ ನನ್ನ ಕಲ್ಪನೆ ಒಟ್ಟಿಗೆ ಸೇರಿದಾಗ ವಯಕ್ತಿಕ ಆಲೋಚನೆಗಳಿಗಿಂ ಉತ್ತಮವಾಗಿರುತ್ತದೆ. ಇದನ್ನು ಕಂಪನಿಯು ಬಲವಾಗಿ ನಂಬಿದೆ.

ನಮ್ಮ ಕಂಪನಿಯು ಪದವಿ ಹೊಂದಿರುವ ಹಾಗೂ ಪದವಿ ಹೊಂದಿಲ್ಲದವರನ್ನೂ ಕೂಡ ಕೆಲಸಕ್ಕೆ ನೇಮಿಸಿಕೊಂಡಿದೆ. ಕೋಡಿಂಗ್‌ ಪ್ರತಿಯೊಬ್ಬರಿಗೂ ಮೌಲ್ಯಯುತವಾದ ಪರಿಗಳಿಸಿದ್ದರೂ ಕೂಡ ಆ್ಯಪಲ್ ಕೋಡಿಂಗ್‌ ಪರಿಣತಿ ಹೊಂದಿರುವ ಆಥವಾ ತಮ್ಮ ನಿತ್ಯದ ಕೆಲಸದಲ್ಲಿ ನಿಯಮಿತವಾಗಿ ಕೋಡಿಂಗ್‌ ಬಳಸುವ ವ್ಯಕ್ತಿಗಳನ್ನೂ ಸಹ ನೇಮಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಆ್ಯಪಲ್ ಕಂಪನಿಯು ಇತ್ತಿಚೆಗಷ್ಟೆ ಐ ಫೋನ್‌ 15 ಸರಣಿಯನ್ನು ತಂತ್ರಜ್ಞಾನದೊಂದಿಗೆ ಲಾಚ್‌ ಮಾಡಿತ್ತು. ಇದರಲ್ಲಿ 48 ಎಂಪಿ ಮುಖ್ಯ ಕ್ಯಾಮೆರಾವನ್ನು ಹೊಂದಿತ್ತು. ಇದು ಐ ಫೋನ್‌ 14 ಹಾಗೂ ಐ ಫೋನ್‌ 14 ಪ್ಲಸ್‌ ಗಿಂತ ನವೀಕರಣ ಪಡೆದಿದೆ. ಇದರಲ್ಲಿ ಮೊದಲ ಬಾರಿಗೆ ಯುಎಸ್‌ ಬಿ ಟೈಪ್‌ ಸಿ ಪರಿಚಯಿಸಿರುವುದು ಮತ್ತೊಂದು ದೊಡ್ಡ ಬದಲಾವಣೆಯಾಗಿದೆ.

lokesh

Share
Published by
lokesh
Tags: applei phone

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

2 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

6 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

6 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

6 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

6 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

6 hours ago