ಪ್ರತಿಷ್ಠಿತ ಮೊಬೈಲ್ ತಯಾರಕ ಕಂಪನಿ ಆ್ಯಪಲ್ ನಲ್ಲಿ ಕೆಲಸ ಗಿಟ್ಟಿಸಿಕೊಳ್ಳುವುದು ಹಲವರ ಕನಸಾಗಿರುತ್ತೆ. ಅಂತೆಯೇ ಕಂಪನಿಯಲ್ಲಿ ಕೆಲಸಕ್ಕೆ ಸೇರಲು ಯಾವೆಲ್ಲಾ ಅರ್ಹತೆಗಳಿರಬೇಕು. ವಿದ್ಯಾಭ್ಯಾಸ ಏನಿರಬೇಕು ಎಂಬ ಗೊಂದಲಗಳಿರುತ್ತವೆ. ಈ ಎಲ್ಲಾ ಗೊಂದಲಗಳಿಗೆ ಕಂಪನಿಯ ಸಿಇಒ ಟಿಮ್ ಕುಕ್ ಉತ್ತರ ನೀಡಿದ್ದಾರೆ.
ಇತ್ತೀಚೆಗೆ ಸಂದರ್ಶನವೊಂದರಲ್ಲಿ ಪಾಲ್ಗೊಂಡಿದ್ದ ಆಪಲ್ ಕಂಪನಿಯ ಸಿಇಒ ಟಿಮ್ ಕುಕ್ ಅವರಿಗೆ ಸಂದರ್ಶನಕಾರರು ನಿಮ್ಮ ಕಂಪನಿಯಲ್ಲಿ ನೇಮಕಾತಿ ಪ್ರಕ್ರಿಯೆ ಹೇಗಿರುತ್ತದೆ ? ಉದ್ಯೋಗ ಪಡೆದುಕೊಳ್ಳಬೇಕಾದರೆ ಏನು ಮಾಡಬೇಕು ? ಎಂಬ ಪ್ರಶ್ನೆಯನ್ನು ಕೇಳಿದ್ದರು. ಇದಕ್ಕೆ ಉತ್ತರಿಸಿದ ಟಿಮ್ ಕುಕ್ ನಮ್ಮ ಕಂಪನಿಯ ನೇಮಕಾತಿ ಪ್ರಕ್ರಿಯೆಯು ತಂಡದಲ್ಲಿ ಕೆಲಸ ಮಾಡುವ ಸಾಮರ್ಥ್ಯ, ಸೃಜನಶೀಲತೆ, ಕುತೂಹಲದಂತಹ ಗುಣಲಕ್ಷಣಗಳ ಮೇಲೆ ನಿಗಧಿಯಾಗಿರುತ್ತದೆ. ನಮ್ಮ ಕಂಪನಿಯು ಒನ್ ಪ್ಲಸ್ ಥ್ರೀ ಕಲ್ಪನೆಯಲ್ಲಿ ಕೆಲಸ ನಿರ್ವಹಿಸುತ್ತದೆ. ನಿಮ್ ಹಾಗೂ ನನ್ನ ಕಲ್ಪನೆ ಒಟ್ಟಿಗೆ ಸೇರಿದಾಗ ವಯಕ್ತಿಕ ಆಲೋಚನೆಗಳಿಗಿಂ ಉತ್ತಮವಾಗಿರುತ್ತದೆ. ಇದನ್ನು ಕಂಪನಿಯು ಬಲವಾಗಿ ನಂಬಿದೆ.
ನಮ್ಮ ಕಂಪನಿಯು ಪದವಿ ಹೊಂದಿರುವ ಹಾಗೂ ಪದವಿ ಹೊಂದಿಲ್ಲದವರನ್ನೂ ಕೂಡ ಕೆಲಸಕ್ಕೆ ನೇಮಿಸಿಕೊಂಡಿದೆ. ಕೋಡಿಂಗ್ ಪ್ರತಿಯೊಬ್ಬರಿಗೂ ಮೌಲ್ಯಯುತವಾದ ಪರಿಗಳಿಸಿದ್ದರೂ ಕೂಡ ಆ್ಯಪಲ್ ಕೋಡಿಂಗ್ ಪರಿಣತಿ ಹೊಂದಿರುವ ಆಥವಾ ತಮ್ಮ ನಿತ್ಯದ ಕೆಲಸದಲ್ಲಿ ನಿಯಮಿತವಾಗಿ ಕೋಡಿಂಗ್ ಬಳಸುವ ವ್ಯಕ್ತಿಗಳನ್ನೂ ಸಹ ನೇಮಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಆ್ಯಪಲ್ ಕಂಪನಿಯು ಇತ್ತಿಚೆಗಷ್ಟೆ ಐ ಫೋನ್ 15 ಸರಣಿಯನ್ನು ತಂತ್ರಜ್ಞಾನದೊಂದಿಗೆ ಲಾಚ್ ಮಾಡಿತ್ತು. ಇದರಲ್ಲಿ 48 ಎಂಪಿ ಮುಖ್ಯ ಕ್ಯಾಮೆರಾವನ್ನು ಹೊಂದಿತ್ತು. ಇದು ಐ ಫೋನ್ 14 ಹಾಗೂ ಐ ಫೋನ್ 14 ಪ್ಲಸ್ ಗಿಂತ ನವೀಕರಣ ಪಡೆದಿದೆ. ಇದರಲ್ಲಿ ಮೊದಲ ಬಾರಿಗೆ ಯುಎಸ್ ಬಿ ಟೈಪ್ ಸಿ ಪರಿಚಯಿಸಿರುವುದು ಮತ್ತೊಂದು ದೊಡ್ಡ ಬದಲಾವಣೆಯಾಗಿದೆ.
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…
ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…