ವಾಣಿಜ್ಯ

ಆ್ಯಪಲ್ ಕಂಪನಿಯಲ್ಲಿ ಕೆಲಸ ಗಿಟ್ಟಿಸಿಕೊಳ್ಳಲು ಇರಬೇಕಾದ ಅರ್ಹತೆ ಏನು ?

ಪ್ರತಿಷ್ಠಿತ ಮೊಬೈಲ್‌ ತಯಾರಕ ಕಂಪನಿ ಆ್ಯಪಲ್ ನಲ್ಲಿ ಕೆಲಸ ಗಿಟ್ಟಿಸಿಕೊಳ್ಳುವುದು ಹಲವರ ಕನಸಾಗಿರುತ್ತೆ. ಅಂತೆಯೇ ಕಂಪನಿಯಲ್ಲಿ ಕೆಲಸಕ್ಕೆ ಸೇರಲು ಯಾವೆಲ್ಲಾ ಅರ್ಹತೆಗಳಿರಬೇಕು. ವಿದ್ಯಾಭ್ಯಾಸ ಏನಿರಬೇಕು ಎಂಬ ಗೊಂದಲಗಳಿರುತ್ತವೆ. ಈ ಎಲ್ಲಾ ಗೊಂದಲಗಳಿಗೆ ಕಂಪನಿಯ ಸಿಇಒ ಟಿಮ್‌ ಕುಕ್‌ ಉತ್ತರ ನೀಡಿದ್ದಾರೆ.

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಪಾಲ್ಗೊಂಡಿದ್ದ ಆಪಲ್‌ ಕಂಪನಿಯ ಸಿಇಒ ಟಿಮ್‌ ಕುಕ್‌ ಅವರಿಗೆ ಸಂದರ್ಶನಕಾರರು ನಿಮ್ಮ ಕಂಪನಿಯಲ್ಲಿ ನೇಮಕಾತಿ ಪ್ರಕ್ರಿಯೆ ಹೇಗಿರುತ್ತದೆ ? ಉದ್ಯೋಗ ಪಡೆದುಕೊಳ್ಳಬೇಕಾದರೆ ಏನು ಮಾಡಬೇಕು ? ಎಂಬ ಪ್ರಶ್ನೆಯನ್ನು ಕೇಳಿದ್ದರು. ಇದಕ್ಕೆ ಉತ್ತರಿಸಿದ ಟಿಮ್‌ ಕುಕ್‌ ನಮ್ಮ ಕಂಪನಿಯ ನೇಮಕಾತಿ ಪ್ರಕ್ರಿಯೆಯು ತಂಡದಲ್ಲಿ ಕೆಲಸ ಮಾಡುವ ಸಾಮರ್ಥ್ಯ, ಸೃಜನಶೀಲತೆ, ಕುತೂಹಲದಂತಹ ಗುಣಲಕ್ಷಣಗಳ ಮೇಲೆ ನಿಗಧಿಯಾಗಿರುತ್ತದೆ. ನಮ್ಮ ಕಂಪನಿಯು ಒನ್ ಪ್ಲಸ್‌ ಥ್ರೀ ಕಲ್ಪನೆಯಲ್ಲಿ ಕೆಲಸ ನಿರ್ವಹಿಸುತ್ತದೆ. ನಿಮ್‌ ಹಾಗೂ ನನ್ನ ಕಲ್ಪನೆ ಒಟ್ಟಿಗೆ ಸೇರಿದಾಗ ವಯಕ್ತಿಕ ಆಲೋಚನೆಗಳಿಗಿಂ ಉತ್ತಮವಾಗಿರುತ್ತದೆ. ಇದನ್ನು ಕಂಪನಿಯು ಬಲವಾಗಿ ನಂಬಿದೆ.

ನಮ್ಮ ಕಂಪನಿಯು ಪದವಿ ಹೊಂದಿರುವ ಹಾಗೂ ಪದವಿ ಹೊಂದಿಲ್ಲದವರನ್ನೂ ಕೂಡ ಕೆಲಸಕ್ಕೆ ನೇಮಿಸಿಕೊಂಡಿದೆ. ಕೋಡಿಂಗ್‌ ಪ್ರತಿಯೊಬ್ಬರಿಗೂ ಮೌಲ್ಯಯುತವಾದ ಪರಿಗಳಿಸಿದ್ದರೂ ಕೂಡ ಆ್ಯಪಲ್ ಕೋಡಿಂಗ್‌ ಪರಿಣತಿ ಹೊಂದಿರುವ ಆಥವಾ ತಮ್ಮ ನಿತ್ಯದ ಕೆಲಸದಲ್ಲಿ ನಿಯಮಿತವಾಗಿ ಕೋಡಿಂಗ್‌ ಬಳಸುವ ವ್ಯಕ್ತಿಗಳನ್ನೂ ಸಹ ನೇಮಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಆ್ಯಪಲ್ ಕಂಪನಿಯು ಇತ್ತಿಚೆಗಷ್ಟೆ ಐ ಫೋನ್‌ 15 ಸರಣಿಯನ್ನು ತಂತ್ರಜ್ಞಾನದೊಂದಿಗೆ ಲಾಚ್‌ ಮಾಡಿತ್ತು. ಇದರಲ್ಲಿ 48 ಎಂಪಿ ಮುಖ್ಯ ಕ್ಯಾಮೆರಾವನ್ನು ಹೊಂದಿತ್ತು. ಇದು ಐ ಫೋನ್‌ 14 ಹಾಗೂ ಐ ಫೋನ್‌ 14 ಪ್ಲಸ್‌ ಗಿಂತ ನವೀಕರಣ ಪಡೆದಿದೆ. ಇದರಲ್ಲಿ ಮೊದಲ ಬಾರಿಗೆ ಯುಎಸ್‌ ಬಿ ಟೈಪ್‌ ಸಿ ಪರಿಚಯಿಸಿರುವುದು ಮತ್ತೊಂದು ದೊಡ್ಡ ಬದಲಾವಣೆಯಾಗಿದೆ.

lokesh

Share
Published by
lokesh
Tags: applei phone

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago