ಪ್ರತಿಷ್ಠಿತ ಮೊಬೈಲ್ ತಯಾರಕ ಕಂಪನಿ ಆ್ಯಪಲ್ ನಲ್ಲಿ ಕೆಲಸ ಗಿಟ್ಟಿಸಿಕೊಳ್ಳುವುದು ಹಲವರ ಕನಸಾಗಿರುತ್ತೆ. ಅಂತೆಯೇ ಕಂಪನಿಯಲ್ಲಿ ಕೆಲಸಕ್ಕೆ ಸೇರಲು ಯಾವೆಲ್ಲಾ ಅರ್ಹತೆಗಳಿರಬೇಕು. ವಿದ್ಯಾಭ್ಯಾಸ ಏನಿರಬೇಕು ಎಂಬ ಗೊಂದಲಗಳಿರುತ್ತವೆ. ಈ ಎಲ್ಲಾ ಗೊಂದಲಗಳಿಗೆ ಕಂಪನಿಯ ಸಿಇಒ ಟಿಮ್ ಕುಕ್ ಉತ್ತರ ನೀಡಿದ್ದಾರೆ.
ಇತ್ತೀಚೆಗೆ ಸಂದರ್ಶನವೊಂದರಲ್ಲಿ ಪಾಲ್ಗೊಂಡಿದ್ದ ಆಪಲ್ ಕಂಪನಿಯ ಸಿಇಒ ಟಿಮ್ ಕುಕ್ ಅವರಿಗೆ ಸಂದರ್ಶನಕಾರರು ನಿಮ್ಮ ಕಂಪನಿಯಲ್ಲಿ ನೇಮಕಾತಿ ಪ್ರಕ್ರಿಯೆ ಹೇಗಿರುತ್ತದೆ ? ಉದ್ಯೋಗ ಪಡೆದುಕೊಳ್ಳಬೇಕಾದರೆ ಏನು ಮಾಡಬೇಕು ? ಎಂಬ ಪ್ರಶ್ನೆಯನ್ನು ಕೇಳಿದ್ದರು. ಇದಕ್ಕೆ ಉತ್ತರಿಸಿದ ಟಿಮ್ ಕುಕ್ ನಮ್ಮ ಕಂಪನಿಯ ನೇಮಕಾತಿ ಪ್ರಕ್ರಿಯೆಯು ತಂಡದಲ್ಲಿ ಕೆಲಸ ಮಾಡುವ ಸಾಮರ್ಥ್ಯ, ಸೃಜನಶೀಲತೆ, ಕುತೂಹಲದಂತಹ ಗುಣಲಕ್ಷಣಗಳ ಮೇಲೆ ನಿಗಧಿಯಾಗಿರುತ್ತದೆ. ನಮ್ಮ ಕಂಪನಿಯು ಒನ್ ಪ್ಲಸ್ ಥ್ರೀ ಕಲ್ಪನೆಯಲ್ಲಿ ಕೆಲಸ ನಿರ್ವಹಿಸುತ್ತದೆ. ನಿಮ್ ಹಾಗೂ ನನ್ನ ಕಲ್ಪನೆ ಒಟ್ಟಿಗೆ ಸೇರಿದಾಗ ವಯಕ್ತಿಕ ಆಲೋಚನೆಗಳಿಗಿಂ ಉತ್ತಮವಾಗಿರುತ್ತದೆ. ಇದನ್ನು ಕಂಪನಿಯು ಬಲವಾಗಿ ನಂಬಿದೆ.
ನಮ್ಮ ಕಂಪನಿಯು ಪದವಿ ಹೊಂದಿರುವ ಹಾಗೂ ಪದವಿ ಹೊಂದಿಲ್ಲದವರನ್ನೂ ಕೂಡ ಕೆಲಸಕ್ಕೆ ನೇಮಿಸಿಕೊಂಡಿದೆ. ಕೋಡಿಂಗ್ ಪ್ರತಿಯೊಬ್ಬರಿಗೂ ಮೌಲ್ಯಯುತವಾದ ಪರಿಗಳಿಸಿದ್ದರೂ ಕೂಡ ಆ್ಯಪಲ್ ಕೋಡಿಂಗ್ ಪರಿಣತಿ ಹೊಂದಿರುವ ಆಥವಾ ತಮ್ಮ ನಿತ್ಯದ ಕೆಲಸದಲ್ಲಿ ನಿಯಮಿತವಾಗಿ ಕೋಡಿಂಗ್ ಬಳಸುವ ವ್ಯಕ್ತಿಗಳನ್ನೂ ಸಹ ನೇಮಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಆ್ಯಪಲ್ ಕಂಪನಿಯು ಇತ್ತಿಚೆಗಷ್ಟೆ ಐ ಫೋನ್ 15 ಸರಣಿಯನ್ನು ತಂತ್ರಜ್ಞಾನದೊಂದಿಗೆ ಲಾಚ್ ಮಾಡಿತ್ತು. ಇದರಲ್ಲಿ 48 ಎಂಪಿ ಮುಖ್ಯ ಕ್ಯಾಮೆರಾವನ್ನು ಹೊಂದಿತ್ತು. ಇದು ಐ ಫೋನ್ 14 ಹಾಗೂ ಐ ಫೋನ್ 14 ಪ್ಲಸ್ ಗಿಂತ ನವೀಕರಣ ಪಡೆದಿದೆ. ಇದರಲ್ಲಿ ಮೊದಲ ಬಾರಿಗೆ ಯುಎಸ್ ಬಿ ಟೈಪ್ ಸಿ ಪರಿಚಯಿಸಿರುವುದು ಮತ್ತೊಂದು ದೊಡ್ಡ ಬದಲಾವಣೆಯಾಗಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…