ಪ್ರತಿಷ್ಠಿತ ಮೊಬೈಲ್ ತಯಾರಕ ಕಂಪನಿ ಆ್ಯಪಲ್ ನಲ್ಲಿ ಕೆಲಸ ಗಿಟ್ಟಿಸಿಕೊಳ್ಳುವುದು ಹಲವರ ಕನಸಾಗಿರುತ್ತೆ. ಅಂತೆಯೇ ಕಂಪನಿಯಲ್ಲಿ ಕೆಲಸಕ್ಕೆ ಸೇರಲು ಯಾವೆಲ್ಲಾ ಅರ್ಹತೆಗಳಿರಬೇಕು. ವಿದ್ಯಾಭ್ಯಾಸ ಏನಿರಬೇಕು ಎಂಬ ಗೊಂದಲಗಳಿರುತ್ತವೆ. ಈ ಎಲ್ಲಾ ಗೊಂದಲಗಳಿಗೆ ಕಂಪನಿಯ ಸಿಇಒ ಟಿಮ್ ಕುಕ್ ಉತ್ತರ ನೀಡಿದ್ದಾರೆ.
ಇತ್ತೀಚೆಗೆ ಸಂದರ್ಶನವೊಂದರಲ್ಲಿ ಪಾಲ್ಗೊಂಡಿದ್ದ ಆಪಲ್ ಕಂಪನಿಯ ಸಿಇಒ ಟಿಮ್ ಕುಕ್ ಅವರಿಗೆ ಸಂದರ್ಶನಕಾರರು ನಿಮ್ಮ ಕಂಪನಿಯಲ್ಲಿ ನೇಮಕಾತಿ ಪ್ರಕ್ರಿಯೆ ಹೇಗಿರುತ್ತದೆ ? ಉದ್ಯೋಗ ಪಡೆದುಕೊಳ್ಳಬೇಕಾದರೆ ಏನು ಮಾಡಬೇಕು ? ಎಂಬ ಪ್ರಶ್ನೆಯನ್ನು ಕೇಳಿದ್ದರು. ಇದಕ್ಕೆ ಉತ್ತರಿಸಿದ ಟಿಮ್ ಕುಕ್ ನಮ್ಮ ಕಂಪನಿಯ ನೇಮಕಾತಿ ಪ್ರಕ್ರಿಯೆಯು ತಂಡದಲ್ಲಿ ಕೆಲಸ ಮಾಡುವ ಸಾಮರ್ಥ್ಯ, ಸೃಜನಶೀಲತೆ, ಕುತೂಹಲದಂತಹ ಗುಣಲಕ್ಷಣಗಳ ಮೇಲೆ ನಿಗಧಿಯಾಗಿರುತ್ತದೆ. ನಮ್ಮ ಕಂಪನಿಯು ಒನ್ ಪ್ಲಸ್ ಥ್ರೀ ಕಲ್ಪನೆಯಲ್ಲಿ ಕೆಲಸ ನಿರ್ವಹಿಸುತ್ತದೆ. ನಿಮ್ ಹಾಗೂ ನನ್ನ ಕಲ್ಪನೆ ಒಟ್ಟಿಗೆ ಸೇರಿದಾಗ ವಯಕ್ತಿಕ ಆಲೋಚನೆಗಳಿಗಿಂ ಉತ್ತಮವಾಗಿರುತ್ತದೆ. ಇದನ್ನು ಕಂಪನಿಯು ಬಲವಾಗಿ ನಂಬಿದೆ.
ನಮ್ಮ ಕಂಪನಿಯು ಪದವಿ ಹೊಂದಿರುವ ಹಾಗೂ ಪದವಿ ಹೊಂದಿಲ್ಲದವರನ್ನೂ ಕೂಡ ಕೆಲಸಕ್ಕೆ ನೇಮಿಸಿಕೊಂಡಿದೆ. ಕೋಡಿಂಗ್ ಪ್ರತಿಯೊಬ್ಬರಿಗೂ ಮೌಲ್ಯಯುತವಾದ ಪರಿಗಳಿಸಿದ್ದರೂ ಕೂಡ ಆ್ಯಪಲ್ ಕೋಡಿಂಗ್ ಪರಿಣತಿ ಹೊಂದಿರುವ ಆಥವಾ ತಮ್ಮ ನಿತ್ಯದ ಕೆಲಸದಲ್ಲಿ ನಿಯಮಿತವಾಗಿ ಕೋಡಿಂಗ್ ಬಳಸುವ ವ್ಯಕ್ತಿಗಳನ್ನೂ ಸಹ ನೇಮಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಆ್ಯಪಲ್ ಕಂಪನಿಯು ಇತ್ತಿಚೆಗಷ್ಟೆ ಐ ಫೋನ್ 15 ಸರಣಿಯನ್ನು ತಂತ್ರಜ್ಞಾನದೊಂದಿಗೆ ಲಾಚ್ ಮಾಡಿತ್ತು. ಇದರಲ್ಲಿ 48 ಎಂಪಿ ಮುಖ್ಯ ಕ್ಯಾಮೆರಾವನ್ನು ಹೊಂದಿತ್ತು. ಇದು ಐ ಫೋನ್ 14 ಹಾಗೂ ಐ ಫೋನ್ 14 ಪ್ಲಸ್ ಗಿಂತ ನವೀಕರಣ ಪಡೆದಿದೆ. ಇದರಲ್ಲಿ ಮೊದಲ ಬಾರಿಗೆ ಯುಎಸ್ ಬಿ ಟೈಪ್ ಸಿ ಪರಿಚಯಿಸಿರುವುದು ಮತ್ತೊಂದು ದೊಡ್ಡ ಬದಲಾವಣೆಯಾಗಿದೆ.
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…