ವಾಣಿಜ್ಯ

ಯಾವಾಗ ಬಿಡುಗಡೆಯಾಗಲಿದೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ?

ದಕ್ಷಿಣ ಕೊರಿಯಾ ಮೂಲದ ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪನಿಯ ಸ್ಮಾರ್ಟ್‌ ಫೋನ್‌ ಗಳಿಗೆ ವಿಶ್ವ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಇದೆ. ಹಾಗಾಗಿ ಸ್ಯಾಮ್‌ಸಂಗ್‌ ತನ್ನ ಎಸ್‌ ಸರಣಿಯ ಸ್ಮಾರ್ಟ್‌ ಫೋನ್‌ ಗಳನ್ನು ದೊಡ್ಡ ಮಟ್ಟದಲ್ಲಿಯೇ ಲಾಂಚ್‌ ಮಾಡುತ್ತಾ ಬರುತ್ತಿದೆ.
ಸ್ಯಾಮ್‌ಸಂಗ್‌ ಕಂಪನಿಯು 2023 ರ ಆರಂಭದಲ್ಲಿ S23 ಸರಣಿಯನ್ನು ಲಾಂಚ್‌ ಮಾಡಿತ್ತು. ಈ ಸ್ಮಾರ್ಟ್‌ ಫೋನ್‌ ಈಗಲೂ ಕೂಡ ಟ್ರೆಂಡಿಂಗ್‌ ನಲ್ಲಿದೆ.
ವರ್ಷಕ್ಕೊಂದು S ಸರಣಿಯ ಮೊಬೈಲ್‌ ಲಾಂಚ್‌ ಮಾಡುವ ಸ್ಯಾಮ್‌ಸಂಗ್‌ ಮುಂಬರುವ 2024 ರ ಫೆಬ್ರವರಿಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಸರಣಿಯನ್ನು ಬಿಡುಗಡೆ ಮಾಡಲು ಕಂಪನಿಯು ಸಿದ್ಧತೆ ನಡೆಸಿದೆ.
ಈ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24  ನಲ್ಲಿ 200 ಮೆಗಾ ಪಿಕ್ಸೆಲ್‌ ಕ್ಯಾಮೆರಾ ಇರಲಿದೆ ಎಂದು ಹೇಳಲಾಗುತ್ತಿದೆ.
ಈ ವರ್ಷದ (2023) ಆರಂಭದಲ್ಲಿ ಬಿಡುಗಡೆಯಾದ ಟಾಪ್‌ ಎಂಡ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ ಫೋನ್‌ ನ ಕ್ಯಾಮೆರಾ ಕೂಡ ಅದ್ಭುತವಾದ ಕ್ಲಾರಿಟಿ ಹೊಂದಿತ್ತು. ಇದು 200 ಮೆಗಾಪಕ್ಸೆಲ್‌ ನ ಸ್ಯಾಮ್‌ಸಂಗ್ isocell hp2 ಸೆನ್ಸಾರ್‌ ಒಳಗೊಂಡಿತ್ತು.
ಸ್ಯಾಮ್‌ಸಂಗ್‌ ನಿಂದ ಎಐ ಲ್ಯಾಪ್‌ಟಾಪ್‌ : ಸ್ಯಾಮ್‌ಸಂಗ್‌ ಕಂಪನಿಯು ವಿಶ್ವದಲ್ಲಿಯೇ ಮೊದಲ ಬಾರಿಗೆ ಕೃತಕಬುದ್ದಿಮತ್ತೆ ಲ್ಯಾಪ್‌ಟಾಪ್‌ ಬಿಡುಗಡೆ ಮಾಡಲು ಚಿಂತನೆ ನಡೆಸಿದೆ. ಗ್ಯಾಲಕ್ಸಿ ಬುಕ್‌ 4 ಲ್ಯಾಪ್‌ಟಾಪ್ ಅನ್ನು ಇದೇ ಡಿಸೆಂಬರ್‌ 15 ರಂದು ವಿಶ್ವ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ. ಆದರೆ ಭಾರತೀಯ ಮಾರುಕಟ್ಟೆಯಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದರ ಕುರಿತಾದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಈ ಗ್ಯಾಲಕ್ಸಿ ಬುಕ್‌ 4 ಲ್ಯಾಪ್‌ಟಾಪ್‌ ಇಂಟೆಲ್‌ ಕೋರ್‌ ಅಲ್ಟ್ರಾ 7155H ಚಿಪ್‌ಸೆಟ್ ಪ್ರೊಸೆಸರ್‌ ಹೊಂದಿದೆ. ಇದು ಅತ್ಯಂತ ವೇಗದ ಕಾರ್ಯಕ್ಷಮತೆಯೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಈ ಲ್ಯಾಪ್‌ಟಾಪ್‌ ನಲ್ಲಿ ಇಂಟರ್ನೆಟ್‌ ಸಂಪರ್ಕ ಇಲ್ಲದೇ ಅನೇಕ ಕೆಲಸಗಳನ್ನು ಮಾಡಬಹುದಾಗಿದೆ.
lokesh

Recent Posts

ನಟ ದರ್ಶನ್‌ಗೆ ಬಿಗ್‌ ರಿಲೀಫ್‌: ಗನ್‌ ಲೈಸೆನ್ಸ್‌ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್‌ ಅವರ…

37 mins ago

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ: ರಾಜ್ಯದಲ್ಲೂ ಹೈಅಲರ್ಟ್‌ ಎಂದ ಪರಮೇಶ್ವರ್‌

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್‌ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…

38 mins ago

ಎಚ್.ಸಿ.ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ: ಸಚಿವ ಕೆ.ವೆಂಕಟೇಶ್‌

ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದಲಿತ ಸಿಎಂ ಕೂಗು…

2 hours ago

ವಿಜಯೇಂದ್ರ ಸಿಎಂ ಆದರೆ ರಾಜ್ಯ ಸುಭಿಕ್ಷವಾಗಿ ಇರಲಿದೆ: ವಿಜಯೇಂದ್ರ ಅಭಿಮಾನಿ ಬಳಗದ ಶಶಿಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…

2 hours ago

ಒಳ ಮೀಸಲಾತಿಯಲ್ಲಿರುವ ಗೊಂದಲ ನಿವಾರಣೆ ಮಾಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್‍ಗೆ…

2 hours ago

ಏಪ್ರಿಲ್‌ ಹಾಗೂ ಮೇ ತಿಂಗಳಿನಲ್ಲಿ ವಿಪರೀತ ಬಿಸಿಲಿನ ತೀವ್ರತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…

2 hours ago