ವಾಣಿಜ್ಯ

ಯಾವಾಗ ಬಿಡುಗಡೆಯಾಗಲಿದೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ?

ದಕ್ಷಿಣ ಕೊರಿಯಾ ಮೂಲದ ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪನಿಯ ಸ್ಮಾರ್ಟ್‌ ಫೋನ್‌ ಗಳಿಗೆ ವಿಶ್ವ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಇದೆ. ಹಾಗಾಗಿ ಸ್ಯಾಮ್‌ಸಂಗ್‌ ತನ್ನ ಎಸ್‌ ಸರಣಿಯ ಸ್ಮಾರ್ಟ್‌ ಫೋನ್‌ ಗಳನ್ನು ದೊಡ್ಡ ಮಟ್ಟದಲ್ಲಿಯೇ ಲಾಂಚ್‌ ಮಾಡುತ್ತಾ ಬರುತ್ತಿದೆ.
ಸ್ಯಾಮ್‌ಸಂಗ್‌ ಕಂಪನಿಯು 2023 ರ ಆರಂಭದಲ್ಲಿ S23 ಸರಣಿಯನ್ನು ಲಾಂಚ್‌ ಮಾಡಿತ್ತು. ಈ ಸ್ಮಾರ್ಟ್‌ ಫೋನ್‌ ಈಗಲೂ ಕೂಡ ಟ್ರೆಂಡಿಂಗ್‌ ನಲ್ಲಿದೆ.
ವರ್ಷಕ್ಕೊಂದು S ಸರಣಿಯ ಮೊಬೈಲ್‌ ಲಾಂಚ್‌ ಮಾಡುವ ಸ್ಯಾಮ್‌ಸಂಗ್‌ ಮುಂಬರುವ 2024 ರ ಫೆಬ್ರವರಿಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಸರಣಿಯನ್ನು ಬಿಡುಗಡೆ ಮಾಡಲು ಕಂಪನಿಯು ಸಿದ್ಧತೆ ನಡೆಸಿದೆ.
ಈ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24  ನಲ್ಲಿ 200 ಮೆಗಾ ಪಿಕ್ಸೆಲ್‌ ಕ್ಯಾಮೆರಾ ಇರಲಿದೆ ಎಂದು ಹೇಳಲಾಗುತ್ತಿದೆ.
ಈ ವರ್ಷದ (2023) ಆರಂಭದಲ್ಲಿ ಬಿಡುಗಡೆಯಾದ ಟಾಪ್‌ ಎಂಡ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ ಫೋನ್‌ ನ ಕ್ಯಾಮೆರಾ ಕೂಡ ಅದ್ಭುತವಾದ ಕ್ಲಾರಿಟಿ ಹೊಂದಿತ್ತು. ಇದು 200 ಮೆಗಾಪಕ್ಸೆಲ್‌ ನ ಸ್ಯಾಮ್‌ಸಂಗ್ isocell hp2 ಸೆನ್ಸಾರ್‌ ಒಳಗೊಂಡಿತ್ತು.
ಸ್ಯಾಮ್‌ಸಂಗ್‌ ನಿಂದ ಎಐ ಲ್ಯಾಪ್‌ಟಾಪ್‌ : ಸ್ಯಾಮ್‌ಸಂಗ್‌ ಕಂಪನಿಯು ವಿಶ್ವದಲ್ಲಿಯೇ ಮೊದಲ ಬಾರಿಗೆ ಕೃತಕಬುದ್ದಿಮತ್ತೆ ಲ್ಯಾಪ್‌ಟಾಪ್‌ ಬಿಡುಗಡೆ ಮಾಡಲು ಚಿಂತನೆ ನಡೆಸಿದೆ. ಗ್ಯಾಲಕ್ಸಿ ಬುಕ್‌ 4 ಲ್ಯಾಪ್‌ಟಾಪ್ ಅನ್ನು ಇದೇ ಡಿಸೆಂಬರ್‌ 15 ರಂದು ವಿಶ್ವ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ. ಆದರೆ ಭಾರತೀಯ ಮಾರುಕಟ್ಟೆಯಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದರ ಕುರಿತಾದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಈ ಗ್ಯಾಲಕ್ಸಿ ಬುಕ್‌ 4 ಲ್ಯಾಪ್‌ಟಾಪ್‌ ಇಂಟೆಲ್‌ ಕೋರ್‌ ಅಲ್ಟ್ರಾ 7155H ಚಿಪ್‌ಸೆಟ್ ಪ್ರೊಸೆಸರ್‌ ಹೊಂದಿದೆ. ಇದು ಅತ್ಯಂತ ವೇಗದ ಕಾರ್ಯಕ್ಷಮತೆಯೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಈ ಲ್ಯಾಪ್‌ಟಾಪ್‌ ನಲ್ಲಿ ಇಂಟರ್ನೆಟ್‌ ಸಂಪರ್ಕ ಇಲ್ಲದೇ ಅನೇಕ ಕೆಲಸಗಳನ್ನು ಮಾಡಬಹುದಾಗಿದೆ.
lokesh

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

6 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

6 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

7 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

8 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

8 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

8 hours ago