ವಾಣಿಜ್ಯ

ಯಾವಾಗ ಬಿಡುಗಡೆಯಾಗಲಿದೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ?

ದಕ್ಷಿಣ ಕೊರಿಯಾ ಮೂಲದ ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪನಿಯ ಸ್ಮಾರ್ಟ್‌ ಫೋನ್‌ ಗಳಿಗೆ ವಿಶ್ವ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಇದೆ. ಹಾಗಾಗಿ ಸ್ಯಾಮ್‌ಸಂಗ್‌ ತನ್ನ ಎಸ್‌ ಸರಣಿಯ ಸ್ಮಾರ್ಟ್‌ ಫೋನ್‌ ಗಳನ್ನು ದೊಡ್ಡ ಮಟ್ಟದಲ್ಲಿಯೇ ಲಾಂಚ್‌ ಮಾಡುತ್ತಾ ಬರುತ್ತಿದೆ.
ಸ್ಯಾಮ್‌ಸಂಗ್‌ ಕಂಪನಿಯು 2023 ರ ಆರಂಭದಲ್ಲಿ S23 ಸರಣಿಯನ್ನು ಲಾಂಚ್‌ ಮಾಡಿತ್ತು. ಈ ಸ್ಮಾರ್ಟ್‌ ಫೋನ್‌ ಈಗಲೂ ಕೂಡ ಟ್ರೆಂಡಿಂಗ್‌ ನಲ್ಲಿದೆ.
ವರ್ಷಕ್ಕೊಂದು S ಸರಣಿಯ ಮೊಬೈಲ್‌ ಲಾಂಚ್‌ ಮಾಡುವ ಸ್ಯಾಮ್‌ಸಂಗ್‌ ಮುಂಬರುವ 2024 ರ ಫೆಬ್ರವರಿಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಸರಣಿಯನ್ನು ಬಿಡುಗಡೆ ಮಾಡಲು ಕಂಪನಿಯು ಸಿದ್ಧತೆ ನಡೆಸಿದೆ.
ಈ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24  ನಲ್ಲಿ 200 ಮೆಗಾ ಪಿಕ್ಸೆಲ್‌ ಕ್ಯಾಮೆರಾ ಇರಲಿದೆ ಎಂದು ಹೇಳಲಾಗುತ್ತಿದೆ.
ಈ ವರ್ಷದ (2023) ಆರಂಭದಲ್ಲಿ ಬಿಡುಗಡೆಯಾದ ಟಾಪ್‌ ಎಂಡ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ ಫೋನ್‌ ನ ಕ್ಯಾಮೆರಾ ಕೂಡ ಅದ್ಭುತವಾದ ಕ್ಲಾರಿಟಿ ಹೊಂದಿತ್ತು. ಇದು 200 ಮೆಗಾಪಕ್ಸೆಲ್‌ ನ ಸ್ಯಾಮ್‌ಸಂಗ್ isocell hp2 ಸೆನ್ಸಾರ್‌ ಒಳಗೊಂಡಿತ್ತು.
ಸ್ಯಾಮ್‌ಸಂಗ್‌ ನಿಂದ ಎಐ ಲ್ಯಾಪ್‌ಟಾಪ್‌ : ಸ್ಯಾಮ್‌ಸಂಗ್‌ ಕಂಪನಿಯು ವಿಶ್ವದಲ್ಲಿಯೇ ಮೊದಲ ಬಾರಿಗೆ ಕೃತಕಬುದ್ದಿಮತ್ತೆ ಲ್ಯಾಪ್‌ಟಾಪ್‌ ಬಿಡುಗಡೆ ಮಾಡಲು ಚಿಂತನೆ ನಡೆಸಿದೆ. ಗ್ಯಾಲಕ್ಸಿ ಬುಕ್‌ 4 ಲ್ಯಾಪ್‌ಟಾಪ್ ಅನ್ನು ಇದೇ ಡಿಸೆಂಬರ್‌ 15 ರಂದು ವಿಶ್ವ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ. ಆದರೆ ಭಾರತೀಯ ಮಾರುಕಟ್ಟೆಯಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದರ ಕುರಿತಾದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಈ ಗ್ಯಾಲಕ್ಸಿ ಬುಕ್‌ 4 ಲ್ಯಾಪ್‌ಟಾಪ್‌ ಇಂಟೆಲ್‌ ಕೋರ್‌ ಅಲ್ಟ್ರಾ 7155H ಚಿಪ್‌ಸೆಟ್ ಪ್ರೊಸೆಸರ್‌ ಹೊಂದಿದೆ. ಇದು ಅತ್ಯಂತ ವೇಗದ ಕಾರ್ಯಕ್ಷಮತೆಯೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಈ ಲ್ಯಾಪ್‌ಟಾಪ್‌ ನಲ್ಲಿ ಇಂಟರ್ನೆಟ್‌ ಸಂಪರ್ಕ ಇಲ್ಲದೇ ಅನೇಕ ಕೆಲಸಗಳನ್ನು ಮಾಡಬಹುದಾಗಿದೆ.
lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

14 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

15 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

16 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

16 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

22 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

22 hours ago