ವಾಣಿಜ್ಯ

ಯಾವಾಗ ಬಿಡುಗಡೆಯಾಗಲಿದೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ?

ದಕ್ಷಿಣ ಕೊರಿಯಾ ಮೂಲದ ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪನಿಯ ಸ್ಮಾರ್ಟ್‌ ಫೋನ್‌ ಗಳಿಗೆ ವಿಶ್ವ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಇದೆ. ಹಾಗಾಗಿ ಸ್ಯಾಮ್‌ಸಂಗ್‌ ತನ್ನ ಎಸ್‌ ಸರಣಿಯ ಸ್ಮಾರ್ಟ್‌ ಫೋನ್‌ ಗಳನ್ನು ದೊಡ್ಡ ಮಟ್ಟದಲ್ಲಿಯೇ ಲಾಂಚ್‌ ಮಾಡುತ್ತಾ ಬರುತ್ತಿದೆ.
ಸ್ಯಾಮ್‌ಸಂಗ್‌ ಕಂಪನಿಯು 2023 ರ ಆರಂಭದಲ್ಲಿ S23 ಸರಣಿಯನ್ನು ಲಾಂಚ್‌ ಮಾಡಿತ್ತು. ಈ ಸ್ಮಾರ್ಟ್‌ ಫೋನ್‌ ಈಗಲೂ ಕೂಡ ಟ್ರೆಂಡಿಂಗ್‌ ನಲ್ಲಿದೆ.
ವರ್ಷಕ್ಕೊಂದು S ಸರಣಿಯ ಮೊಬೈಲ್‌ ಲಾಂಚ್‌ ಮಾಡುವ ಸ್ಯಾಮ್‌ಸಂಗ್‌ ಮುಂಬರುವ 2024 ರ ಫೆಬ್ರವರಿಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಸರಣಿಯನ್ನು ಬಿಡುಗಡೆ ಮಾಡಲು ಕಂಪನಿಯು ಸಿದ್ಧತೆ ನಡೆಸಿದೆ.
ಈ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24  ನಲ್ಲಿ 200 ಮೆಗಾ ಪಿಕ್ಸೆಲ್‌ ಕ್ಯಾಮೆರಾ ಇರಲಿದೆ ಎಂದು ಹೇಳಲಾಗುತ್ತಿದೆ.
ಈ ವರ್ಷದ (2023) ಆರಂಭದಲ್ಲಿ ಬಿಡುಗಡೆಯಾದ ಟಾಪ್‌ ಎಂಡ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ ಫೋನ್‌ ನ ಕ್ಯಾಮೆರಾ ಕೂಡ ಅದ್ಭುತವಾದ ಕ್ಲಾರಿಟಿ ಹೊಂದಿತ್ತು. ಇದು 200 ಮೆಗಾಪಕ್ಸೆಲ್‌ ನ ಸ್ಯಾಮ್‌ಸಂಗ್ isocell hp2 ಸೆನ್ಸಾರ್‌ ಒಳಗೊಂಡಿತ್ತು.
ಸ್ಯಾಮ್‌ಸಂಗ್‌ ನಿಂದ ಎಐ ಲ್ಯಾಪ್‌ಟಾಪ್‌ : ಸ್ಯಾಮ್‌ಸಂಗ್‌ ಕಂಪನಿಯು ವಿಶ್ವದಲ್ಲಿಯೇ ಮೊದಲ ಬಾರಿಗೆ ಕೃತಕಬುದ್ದಿಮತ್ತೆ ಲ್ಯಾಪ್‌ಟಾಪ್‌ ಬಿಡುಗಡೆ ಮಾಡಲು ಚಿಂತನೆ ನಡೆಸಿದೆ. ಗ್ಯಾಲಕ್ಸಿ ಬುಕ್‌ 4 ಲ್ಯಾಪ್‌ಟಾಪ್ ಅನ್ನು ಇದೇ ಡಿಸೆಂಬರ್‌ 15 ರಂದು ವಿಶ್ವ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ. ಆದರೆ ಭಾರತೀಯ ಮಾರುಕಟ್ಟೆಯಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದರ ಕುರಿತಾದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಈ ಗ್ಯಾಲಕ್ಸಿ ಬುಕ್‌ 4 ಲ್ಯಾಪ್‌ಟಾಪ್‌ ಇಂಟೆಲ್‌ ಕೋರ್‌ ಅಲ್ಟ್ರಾ 7155H ಚಿಪ್‌ಸೆಟ್ ಪ್ರೊಸೆಸರ್‌ ಹೊಂದಿದೆ. ಇದು ಅತ್ಯಂತ ವೇಗದ ಕಾರ್ಯಕ್ಷಮತೆಯೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಈ ಲ್ಯಾಪ್‌ಟಾಪ್‌ ನಲ್ಲಿ ಇಂಟರ್ನೆಟ್‌ ಸಂಪರ್ಕ ಇಲ್ಲದೇ ಅನೇಕ ಕೆಲಸಗಳನ್ನು ಮಾಡಬಹುದಾಗಿದೆ.
lokesh

Recent Posts

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

20 mins ago

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

3 hours ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

3 hours ago

ಓದುಗರ ಪತ್ರ: ಮಲತಾಯಿ ಧೋರಣೆ ಏಕೆ?

ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

4 hours ago

ಗಾಂಧಿ ಅನುಸಂಧಾನದ ವೈರುಧ್ಯಗಳು

ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…

4 hours ago