ವಾಣಿಜ್ಯ

ಯಾವಾಗ ಬಿಡುಗಡೆಯಾಗಲಿದೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ?

ದಕ್ಷಿಣ ಕೊರಿಯಾ ಮೂಲದ ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪನಿಯ ಸ್ಮಾರ್ಟ್‌ ಫೋನ್‌ ಗಳಿಗೆ ವಿಶ್ವ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಇದೆ. ಹಾಗಾಗಿ ಸ್ಯಾಮ್‌ಸಂಗ್‌ ತನ್ನ ಎಸ್‌ ಸರಣಿಯ ಸ್ಮಾರ್ಟ್‌ ಫೋನ್‌ ಗಳನ್ನು ದೊಡ್ಡ ಮಟ್ಟದಲ್ಲಿಯೇ ಲಾಂಚ್‌ ಮಾಡುತ್ತಾ ಬರುತ್ತಿದೆ.
ಸ್ಯಾಮ್‌ಸಂಗ್‌ ಕಂಪನಿಯು 2023 ರ ಆರಂಭದಲ್ಲಿ S23 ಸರಣಿಯನ್ನು ಲಾಂಚ್‌ ಮಾಡಿತ್ತು. ಈ ಸ್ಮಾರ್ಟ್‌ ಫೋನ್‌ ಈಗಲೂ ಕೂಡ ಟ್ರೆಂಡಿಂಗ್‌ ನಲ್ಲಿದೆ.
ವರ್ಷಕ್ಕೊಂದು S ಸರಣಿಯ ಮೊಬೈಲ್‌ ಲಾಂಚ್‌ ಮಾಡುವ ಸ್ಯಾಮ್‌ಸಂಗ್‌ ಮುಂಬರುವ 2024 ರ ಫೆಬ್ರವರಿಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಸರಣಿಯನ್ನು ಬಿಡುಗಡೆ ಮಾಡಲು ಕಂಪನಿಯು ಸಿದ್ಧತೆ ನಡೆಸಿದೆ.
ಈ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24  ನಲ್ಲಿ 200 ಮೆಗಾ ಪಿಕ್ಸೆಲ್‌ ಕ್ಯಾಮೆರಾ ಇರಲಿದೆ ಎಂದು ಹೇಳಲಾಗುತ್ತಿದೆ.
ಈ ವರ್ಷದ (2023) ಆರಂಭದಲ್ಲಿ ಬಿಡುಗಡೆಯಾದ ಟಾಪ್‌ ಎಂಡ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ ಫೋನ್‌ ನ ಕ್ಯಾಮೆರಾ ಕೂಡ ಅದ್ಭುತವಾದ ಕ್ಲಾರಿಟಿ ಹೊಂದಿತ್ತು. ಇದು 200 ಮೆಗಾಪಕ್ಸೆಲ್‌ ನ ಸ್ಯಾಮ್‌ಸಂಗ್ isocell hp2 ಸೆನ್ಸಾರ್‌ ಒಳಗೊಂಡಿತ್ತು.
ಸ್ಯಾಮ್‌ಸಂಗ್‌ ನಿಂದ ಎಐ ಲ್ಯಾಪ್‌ಟಾಪ್‌ : ಸ್ಯಾಮ್‌ಸಂಗ್‌ ಕಂಪನಿಯು ವಿಶ್ವದಲ್ಲಿಯೇ ಮೊದಲ ಬಾರಿಗೆ ಕೃತಕಬುದ್ದಿಮತ್ತೆ ಲ್ಯಾಪ್‌ಟಾಪ್‌ ಬಿಡುಗಡೆ ಮಾಡಲು ಚಿಂತನೆ ನಡೆಸಿದೆ. ಗ್ಯಾಲಕ್ಸಿ ಬುಕ್‌ 4 ಲ್ಯಾಪ್‌ಟಾಪ್ ಅನ್ನು ಇದೇ ಡಿಸೆಂಬರ್‌ 15 ರಂದು ವಿಶ್ವ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ. ಆದರೆ ಭಾರತೀಯ ಮಾರುಕಟ್ಟೆಯಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದರ ಕುರಿತಾದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಈ ಗ್ಯಾಲಕ್ಸಿ ಬುಕ್‌ 4 ಲ್ಯಾಪ್‌ಟಾಪ್‌ ಇಂಟೆಲ್‌ ಕೋರ್‌ ಅಲ್ಟ್ರಾ 7155H ಚಿಪ್‌ಸೆಟ್ ಪ್ರೊಸೆಸರ್‌ ಹೊಂದಿದೆ. ಇದು ಅತ್ಯಂತ ವೇಗದ ಕಾರ್ಯಕ್ಷಮತೆಯೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಈ ಲ್ಯಾಪ್‌ಟಾಪ್‌ ನಲ್ಲಿ ಇಂಟರ್ನೆಟ್‌ ಸಂಪರ್ಕ ಇಲ್ಲದೇ ಅನೇಕ ಕೆಲಸಗಳನ್ನು ಮಾಡಬಹುದಾಗಿದೆ.
lokesh

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

4 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

4 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

5 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

14 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

14 hours ago