ವಾಣಿಜ್ಯ

ವಾರಕ್ಕೆ ಮೂರು ದಿನ ಕಚೇರಿಯಿಂದ ಕೆಲಸ ಮಾಡುವುದು ಕಡ್ಡಾಯ : ನಾರಾಯಣ ಮೂರ್ತಿ

ನವದೆಹಲಿ : ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ತಮ್ಮ ಕಂಪನಿಯ ಉದ್ಯೋಗಿಗಳು ವಾರದಲ್ಲಿ ಮೂರು ದಿನ ಕಡ್ಡಾಯವಾಗಿ ಕಚೇರಿಯಲ್ಲಿಯೇ ಬಂದು ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ.
ಸಾಮಾನ್ಯ ಕಚೇರಿ ದಿನಚರಿಯನ್ನು ಪುನರಾರಂಭಿಸಲು ಆಡಳಿತ ಮಂಡಳಿಯ ವಿನಂತಿಗಳು ಫಲಿತಾಂಶಗಳನ್ನು ನೀಡಲು ವಿಫಲವಾದ ಬಳಿಕ ಕಚೇರಿಯ ದಿನಚರಿಯನ್ನು ಪುನರಾರಂಭವನ್ನು ಕಡ್ಡಾಯಗೊಳಿಸಲು ಕಂಪನಿಯು ಚಿಂತನೆ ನಡೆಸಿದೆ ಎಂದು ಎಕನಾಮಿಕ್‌ ಟೈಮ್ಸ್‌ ವರದಿ ಮಾಡಿದೆ.
ಈ ಬಗ್ಗೆ ಉದ್ಯೋಗಿಗಳಿಗೆ ಮೇಲ್‌ ಮಾಡಿರುವ ಕಂಪನಿಯು, ದಯವಿಟ್ಟು ವಾರದಲ್ಲಿ ಕನಿಷ್ಠ ಮೂರು ದಿನ ಕಚೇರಿಗೆ ಬರಲು ಪ್ರಾರಂಭಿಸಿ. ಈ ನಿಯಮ ಶೀಘ್ರವೇ ಕಡ್ಡಾಯವಾಗಲಿದೆ. ಕೋವಿಡ್‌ 19 ಸಾಂಕ್ರಾಮಿಕ ರೋಗದ ಬಳಿಕ ಮೂರು ವರ್ಷಗಳ ಕಾಲ ಮನೆಯಿಂದಲೇ ಕೆಲಸ ನಿರ್ವಹಿಲು ಅವಕಾಶ ನೀಡಿದ್ದೇವೆ. ಇದು ಸಾಕಷ್ಟು ಧೀರ್ಘಾವಧಿಯಾಗಿದೆ. ವೈದ್ಯಕೀಯ ಕಾರಣಗಳಿಂದಾಗಿ ವಿನಾಯಿತಿಗಳನ್ನು ಹೊರತುಪಡಿಸಿ, ಇನ್ನುಳಿದ ನೌಕರರು ಕಚೇರಿಗೆ ಬಂದು ಕೆಲಸ ಮಾಡಲು ಪ್ರಾರಂಭಿಸಬೇಕು ಎಂದು ಕಂಪನಿಯು ಹೇಳಿದೆ.
ಯುವಕರು ವಾರದಲ್ಲಿ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ಹೇಳುವ ಮೂಲಕ ಹಲವರ ಟೀಕೆಗೆ ಕಾರಣವಾಗಿದ್ದ ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.
ಇತ್ತೀಚೆಗಷ್ಟೇ ಮಾಧ್ಯಮವೊಂದರ ಜೊತೆ ಮಾತನಾಡಿದ್ದ ನಾರಾಯಣ ಮೂರ್ತಿ ಅವರು, ತಾವು ಕಂಪನಿ ಸ್ಥಾಪನೆ ಮಾಡುವ ಸಂಧರ್ಭಲ್ಲಿ ತಾನು ಬೆಳಗ್ಗೆ 6 20 ಕ್ಕೆ ಕಚೇರಿಗೆ ಹೋದರೆ ರಾತ್ರಿ 8 30 ಕ್ಕೆ ಮನೆಗೆ ಹೋಗುತ್ತಿದ್ದೆ. 40 ವರ್ಷಗಳ ಕಾಲ ವಾರದ ಆರು ದಿನಗಳು 85 ರಿಂದ 90 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದೆ ಎಂದು ಹೇಳುವ ಮೂಲಕ ತಾವು ನೀಡಿದ್ದ 70 ಗಂಟೆಗಳ ಕೆಲಸದ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದರು.
lokesh

Share
Published by
lokesh

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

45 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

1 hour ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago