ವಾಣಿಜ್ಯ

ವಾರಕ್ಕೆ ಮೂರು ದಿನ ಕಚೇರಿಯಿಂದ ಕೆಲಸ ಮಾಡುವುದು ಕಡ್ಡಾಯ : ನಾರಾಯಣ ಮೂರ್ತಿ

ನವದೆಹಲಿ : ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ತಮ್ಮ ಕಂಪನಿಯ ಉದ್ಯೋಗಿಗಳು ವಾರದಲ್ಲಿ ಮೂರು ದಿನ ಕಡ್ಡಾಯವಾಗಿ ಕಚೇರಿಯಲ್ಲಿಯೇ ಬಂದು ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ.
ಸಾಮಾನ್ಯ ಕಚೇರಿ ದಿನಚರಿಯನ್ನು ಪುನರಾರಂಭಿಸಲು ಆಡಳಿತ ಮಂಡಳಿಯ ವಿನಂತಿಗಳು ಫಲಿತಾಂಶಗಳನ್ನು ನೀಡಲು ವಿಫಲವಾದ ಬಳಿಕ ಕಚೇರಿಯ ದಿನಚರಿಯನ್ನು ಪುನರಾರಂಭವನ್ನು ಕಡ್ಡಾಯಗೊಳಿಸಲು ಕಂಪನಿಯು ಚಿಂತನೆ ನಡೆಸಿದೆ ಎಂದು ಎಕನಾಮಿಕ್‌ ಟೈಮ್ಸ್‌ ವರದಿ ಮಾಡಿದೆ.
ಈ ಬಗ್ಗೆ ಉದ್ಯೋಗಿಗಳಿಗೆ ಮೇಲ್‌ ಮಾಡಿರುವ ಕಂಪನಿಯು, ದಯವಿಟ್ಟು ವಾರದಲ್ಲಿ ಕನಿಷ್ಠ ಮೂರು ದಿನ ಕಚೇರಿಗೆ ಬರಲು ಪ್ರಾರಂಭಿಸಿ. ಈ ನಿಯಮ ಶೀಘ್ರವೇ ಕಡ್ಡಾಯವಾಗಲಿದೆ. ಕೋವಿಡ್‌ 19 ಸಾಂಕ್ರಾಮಿಕ ರೋಗದ ಬಳಿಕ ಮೂರು ವರ್ಷಗಳ ಕಾಲ ಮನೆಯಿಂದಲೇ ಕೆಲಸ ನಿರ್ವಹಿಲು ಅವಕಾಶ ನೀಡಿದ್ದೇವೆ. ಇದು ಸಾಕಷ್ಟು ಧೀರ್ಘಾವಧಿಯಾಗಿದೆ. ವೈದ್ಯಕೀಯ ಕಾರಣಗಳಿಂದಾಗಿ ವಿನಾಯಿತಿಗಳನ್ನು ಹೊರತುಪಡಿಸಿ, ಇನ್ನುಳಿದ ನೌಕರರು ಕಚೇರಿಗೆ ಬಂದು ಕೆಲಸ ಮಾಡಲು ಪ್ರಾರಂಭಿಸಬೇಕು ಎಂದು ಕಂಪನಿಯು ಹೇಳಿದೆ.
ಯುವಕರು ವಾರದಲ್ಲಿ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ಹೇಳುವ ಮೂಲಕ ಹಲವರ ಟೀಕೆಗೆ ಕಾರಣವಾಗಿದ್ದ ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.
ಇತ್ತೀಚೆಗಷ್ಟೇ ಮಾಧ್ಯಮವೊಂದರ ಜೊತೆ ಮಾತನಾಡಿದ್ದ ನಾರಾಯಣ ಮೂರ್ತಿ ಅವರು, ತಾವು ಕಂಪನಿ ಸ್ಥಾಪನೆ ಮಾಡುವ ಸಂಧರ್ಭಲ್ಲಿ ತಾನು ಬೆಳಗ್ಗೆ 6 20 ಕ್ಕೆ ಕಚೇರಿಗೆ ಹೋದರೆ ರಾತ್ರಿ 8 30 ಕ್ಕೆ ಮನೆಗೆ ಹೋಗುತ್ತಿದ್ದೆ. 40 ವರ್ಷಗಳ ಕಾಲ ವಾರದ ಆರು ದಿನಗಳು 85 ರಿಂದ 90 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದೆ ಎಂದು ಹೇಳುವ ಮೂಲಕ ತಾವು ನೀಡಿದ್ದ 70 ಗಂಟೆಗಳ ಕೆಲಸದ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದರು.
lokesh

Share
Published by
lokesh

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

1 hour ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

1 hour ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

2 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

2 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

3 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

3 hours ago