ವಾಣಿಜ್ಯ

ವಾರಕ್ಕೆ ಮೂರು ದಿನ ಕಚೇರಿಯಿಂದ ಕೆಲಸ ಮಾಡುವುದು ಕಡ್ಡಾಯ : ನಾರಾಯಣ ಮೂರ್ತಿ

ನವದೆಹಲಿ : ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ತಮ್ಮ ಕಂಪನಿಯ ಉದ್ಯೋಗಿಗಳು ವಾರದಲ್ಲಿ ಮೂರು ದಿನ ಕಡ್ಡಾಯವಾಗಿ ಕಚೇರಿಯಲ್ಲಿಯೇ ಬಂದು ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ.
ಸಾಮಾನ್ಯ ಕಚೇರಿ ದಿನಚರಿಯನ್ನು ಪುನರಾರಂಭಿಸಲು ಆಡಳಿತ ಮಂಡಳಿಯ ವಿನಂತಿಗಳು ಫಲಿತಾಂಶಗಳನ್ನು ನೀಡಲು ವಿಫಲವಾದ ಬಳಿಕ ಕಚೇರಿಯ ದಿನಚರಿಯನ್ನು ಪುನರಾರಂಭವನ್ನು ಕಡ್ಡಾಯಗೊಳಿಸಲು ಕಂಪನಿಯು ಚಿಂತನೆ ನಡೆಸಿದೆ ಎಂದು ಎಕನಾಮಿಕ್‌ ಟೈಮ್ಸ್‌ ವರದಿ ಮಾಡಿದೆ.
ಈ ಬಗ್ಗೆ ಉದ್ಯೋಗಿಗಳಿಗೆ ಮೇಲ್‌ ಮಾಡಿರುವ ಕಂಪನಿಯು, ದಯವಿಟ್ಟು ವಾರದಲ್ಲಿ ಕನಿಷ್ಠ ಮೂರು ದಿನ ಕಚೇರಿಗೆ ಬರಲು ಪ್ರಾರಂಭಿಸಿ. ಈ ನಿಯಮ ಶೀಘ್ರವೇ ಕಡ್ಡಾಯವಾಗಲಿದೆ. ಕೋವಿಡ್‌ 19 ಸಾಂಕ್ರಾಮಿಕ ರೋಗದ ಬಳಿಕ ಮೂರು ವರ್ಷಗಳ ಕಾಲ ಮನೆಯಿಂದಲೇ ಕೆಲಸ ನಿರ್ವಹಿಲು ಅವಕಾಶ ನೀಡಿದ್ದೇವೆ. ಇದು ಸಾಕಷ್ಟು ಧೀರ್ಘಾವಧಿಯಾಗಿದೆ. ವೈದ್ಯಕೀಯ ಕಾರಣಗಳಿಂದಾಗಿ ವಿನಾಯಿತಿಗಳನ್ನು ಹೊರತುಪಡಿಸಿ, ಇನ್ನುಳಿದ ನೌಕರರು ಕಚೇರಿಗೆ ಬಂದು ಕೆಲಸ ಮಾಡಲು ಪ್ರಾರಂಭಿಸಬೇಕು ಎಂದು ಕಂಪನಿಯು ಹೇಳಿದೆ.
ಯುವಕರು ವಾರದಲ್ಲಿ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ಹೇಳುವ ಮೂಲಕ ಹಲವರ ಟೀಕೆಗೆ ಕಾರಣವಾಗಿದ್ದ ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.
ಇತ್ತೀಚೆಗಷ್ಟೇ ಮಾಧ್ಯಮವೊಂದರ ಜೊತೆ ಮಾತನಾಡಿದ್ದ ನಾರಾಯಣ ಮೂರ್ತಿ ಅವರು, ತಾವು ಕಂಪನಿ ಸ್ಥಾಪನೆ ಮಾಡುವ ಸಂಧರ್ಭಲ್ಲಿ ತಾನು ಬೆಳಗ್ಗೆ 6 20 ಕ್ಕೆ ಕಚೇರಿಗೆ ಹೋದರೆ ರಾತ್ರಿ 8 30 ಕ್ಕೆ ಮನೆಗೆ ಹೋಗುತ್ತಿದ್ದೆ. 40 ವರ್ಷಗಳ ಕಾಲ ವಾರದ ಆರು ದಿನಗಳು 85 ರಿಂದ 90 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದೆ ಎಂದು ಹೇಳುವ ಮೂಲಕ ತಾವು ನೀಡಿದ್ದ 70 ಗಂಟೆಗಳ ಕೆಲಸದ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದರು.
lokesh

Share
Published by
lokesh

Recent Posts

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

32 mins ago

ಬೇಸತ್ತ ಮನಸ್ಸುಗಳು ಸಿನೆಮಾ ನಾಯಕರಿಗೆ ಯಾಕೆ ಮಾರುಹೋಗುತ್ತವೆ?

ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…

36 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.18 ಭಾನುವಾರ

1 hour ago

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

15 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

15 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

16 hours ago