ವಾಣಿಜ್ಯ

ವಾರಕ್ಕೆ ಮೂರು ದಿನ ಕಚೇರಿಯಿಂದ ಕೆಲಸ ಮಾಡುವುದು ಕಡ್ಡಾಯ : ನಾರಾಯಣ ಮೂರ್ತಿ

ನವದೆಹಲಿ : ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ತಮ್ಮ ಕಂಪನಿಯ ಉದ್ಯೋಗಿಗಳು ವಾರದಲ್ಲಿ ಮೂರು ದಿನ ಕಡ್ಡಾಯವಾಗಿ ಕಚೇರಿಯಲ್ಲಿಯೇ ಬಂದು ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ.
ಸಾಮಾನ್ಯ ಕಚೇರಿ ದಿನಚರಿಯನ್ನು ಪುನರಾರಂಭಿಸಲು ಆಡಳಿತ ಮಂಡಳಿಯ ವಿನಂತಿಗಳು ಫಲಿತಾಂಶಗಳನ್ನು ನೀಡಲು ವಿಫಲವಾದ ಬಳಿಕ ಕಚೇರಿಯ ದಿನಚರಿಯನ್ನು ಪುನರಾರಂಭವನ್ನು ಕಡ್ಡಾಯಗೊಳಿಸಲು ಕಂಪನಿಯು ಚಿಂತನೆ ನಡೆಸಿದೆ ಎಂದು ಎಕನಾಮಿಕ್‌ ಟೈಮ್ಸ್‌ ವರದಿ ಮಾಡಿದೆ.
ಈ ಬಗ್ಗೆ ಉದ್ಯೋಗಿಗಳಿಗೆ ಮೇಲ್‌ ಮಾಡಿರುವ ಕಂಪನಿಯು, ದಯವಿಟ್ಟು ವಾರದಲ್ಲಿ ಕನಿಷ್ಠ ಮೂರು ದಿನ ಕಚೇರಿಗೆ ಬರಲು ಪ್ರಾರಂಭಿಸಿ. ಈ ನಿಯಮ ಶೀಘ್ರವೇ ಕಡ್ಡಾಯವಾಗಲಿದೆ. ಕೋವಿಡ್‌ 19 ಸಾಂಕ್ರಾಮಿಕ ರೋಗದ ಬಳಿಕ ಮೂರು ವರ್ಷಗಳ ಕಾಲ ಮನೆಯಿಂದಲೇ ಕೆಲಸ ನಿರ್ವಹಿಲು ಅವಕಾಶ ನೀಡಿದ್ದೇವೆ. ಇದು ಸಾಕಷ್ಟು ಧೀರ್ಘಾವಧಿಯಾಗಿದೆ. ವೈದ್ಯಕೀಯ ಕಾರಣಗಳಿಂದಾಗಿ ವಿನಾಯಿತಿಗಳನ್ನು ಹೊರತುಪಡಿಸಿ, ಇನ್ನುಳಿದ ನೌಕರರು ಕಚೇರಿಗೆ ಬಂದು ಕೆಲಸ ಮಾಡಲು ಪ್ರಾರಂಭಿಸಬೇಕು ಎಂದು ಕಂಪನಿಯು ಹೇಳಿದೆ.
ಯುವಕರು ವಾರದಲ್ಲಿ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ಹೇಳುವ ಮೂಲಕ ಹಲವರ ಟೀಕೆಗೆ ಕಾರಣವಾಗಿದ್ದ ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.
ಇತ್ತೀಚೆಗಷ್ಟೇ ಮಾಧ್ಯಮವೊಂದರ ಜೊತೆ ಮಾತನಾಡಿದ್ದ ನಾರಾಯಣ ಮೂರ್ತಿ ಅವರು, ತಾವು ಕಂಪನಿ ಸ್ಥಾಪನೆ ಮಾಡುವ ಸಂಧರ್ಭಲ್ಲಿ ತಾನು ಬೆಳಗ್ಗೆ 6 20 ಕ್ಕೆ ಕಚೇರಿಗೆ ಹೋದರೆ ರಾತ್ರಿ 8 30 ಕ್ಕೆ ಮನೆಗೆ ಹೋಗುತ್ತಿದ್ದೆ. 40 ವರ್ಷಗಳ ಕಾಲ ವಾರದ ಆರು ದಿನಗಳು 85 ರಿಂದ 90 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದೆ ಎಂದು ಹೇಳುವ ಮೂಲಕ ತಾವು ನೀಡಿದ್ದ 70 ಗಂಟೆಗಳ ಕೆಲಸದ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದರು.
lokesh

Share
Published by
lokesh

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

3 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

5 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

5 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

6 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

9 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

9 hours ago