ಹಾಸನ: ಕಾರಿನೊಳಗೆ ನಡೆದ ಗುಂಡಿನ ದಾಳಿಗೆ ಇಬ್ಬರು ಬಲಿಯಾಗಿರುವ ಘಟನೆ ಹಾಸನದ ಕೆ.ಆರ್.ಪುರಂನಲ್ಲಿ ನಡೆದಿದೆ.
ಕಾರಿನಲ್ಲಿ ಕುಳಿತು ಮಾತನಾಡುತ್ತಿದ್ದ ಇಬ್ಬರು ಯುವಕರ ನಡುವೆ ಜಗಳ ಆರಂಭವಾಗಿ, ಒಬ್ಬ ಹಾರಿಸಿದ ಗುಂಡಿಗೆ ಇನ್ನೊಬ್ಬ ಕಾರಿನಿಂದ ಹೊರಗೆ ಹಾರಿ ಬಿದ್ದಿದ್ದಾನೆ. ನಂತರದಲ್ಲಿ ಕಾರಿನಲ್ಲಿದ್ದ ಮತ್ತೊಬ್ಬ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಬಂದೂಕನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಪ್ರಕರಣದ ಬಗ್ಗೆ ಹಾಸನ ಎಸ್ಪಿ ಸುಜೀತಾ ಮಾಹಿತಿ ನೀಡಿದ್ದು, ಇಬ್ಬರು ಕಾರಿನೊಳಗೆ ಮಾತನಾಡುತ್ತಾ ಒಬ್ಬರಿಗೊಬ್ಬರು ಶೂಟ್ ಮಾಡಿಕೊಂಡಿದ್ದಾರೆ. ಘಟನೆ ನಡೆಯಲು ವ್ಯವಹಾರಿಕ ಸಂಬಂಧ ಇತ್ತು ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ತನಿಖೆ ಬಳಿಕವೇ ಎಲ್ಲಾ ಸತ್ಯಾಂಶ ಹೊರಬರುತ್ತೆ ಎಂದು ಮಾಹಿತಿ ನೀಡಿದ್ದಾರೆ.
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…