ಅಪರಾಧ

ಹಾಸನ: ಗೆಳೆಯನನ್ನು ಕೊಂದು ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು

ಹಾಸನ: ಕಾರಿನೊಳಗೆ ನಡೆದ ಗುಂಡಿನ ದಾಳಿಗೆ ಇಬ್ಬರು ಬಲಿಯಾಗಿರುವ ಘಟನೆ ಹಾಸನದ ಕೆ.ಆರ್.ಪುರಂನಲ್ಲಿ ನಡೆದಿದೆ.

ಕಾರಿನಲ್ಲಿ ಕುಳಿತು ಮಾತನಾಡುತ್ತಿದ್ದ ಇಬ್ಬರು ಯುವಕರ ನಡುವೆ ಜಗಳ ಆರಂಭವಾಗಿ, ಒಬ್ಬ ಹಾರಿಸಿದ ಗುಂಡಿಗೆ ಇನ್ನೊಬ್ಬ ಕಾರಿನಿಂದ ಹೊರಗೆ ಹಾರಿ ಬಿದ್ದಿದ್ದಾನೆ. ನಂತರದಲ್ಲಿ ಕಾರಿನಲ್ಲಿದ್ದ ಮತ್ತೊಬ್ಬ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಬಂದೂಕನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಪ್ರಕರಣದ ಬಗ್ಗೆ ಹಾಸನ ಎಸ್‌ಪಿ ಸುಜೀತಾ ಮಾಹಿತಿ ನೀಡಿದ್ದು, ಇಬ್ಬರು ಕಾರಿನೊಳಗೆ ಮಾತನಾಡುತ್ತಾ ಒಬ್ಬರಿಗೊಬ್ಬರು ಶೂಟ್ ಮಾಡಿಕೊಂಡಿದ್ದಾರೆ. ಘಟನೆ ನಡೆಯಲು ವ್ಯವಹಾರಿಕ ಸಂಬಂಧ ಇತ್ತು ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ತನಿಖೆ ಬಳಿಕವೇ ಎಲ್ಲಾ ಸತ್ಯಾಂಶ ಹೊರಬರುತ್ತೆ ಎಂದು ಮಾಹಿತಿ ನೀಡಿದ್ದಾರೆ.

andolana

Recent Posts

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

4 mins ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

9 mins ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

11 mins ago

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…

12 mins ago

ಝೆನ್‌ ಕತೆಗಳು: ಸೀಜೋಳ ನಿಜವಾದ ಆತ್ಮ ಯಾವುದು?

ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ  ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…

15 mins ago

ಎಸ್‌ಐಆರ್: ಶೇ.64.09ರಷ್ಟು ನಮೂನೆಗಳ ವಿತರಣೆ

ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…

21 mins ago