ಮೈಸೂರು : ವೈದ್ಯೆಯನ್ನ ವರಿಸಿ ಹಸೆಮಣೆ ಏರಬೇಕಿದ್ದ ವರನ ವರದಕ್ಷಿಣೆ ದುರಾಸೆಗೆ ಮದುವೆ ಮುರಿದುಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ. ನಿಶ್ಚಿತಾರ್ಥದ ಸಮಯದಲ್ಲಿ ಸಾಕಷ್ಟು ವರದಕ್ಷಿಣೆ ಪಡೆದರೂ ಮತ್ತಷ್ಟು ವರದಕ್ಷಿಣೆಗೆ ಬೇಡಿಕೆ ಇಟ್ಟ ಹಿನ್ನಲೆ ಮದುವೆ ಮುರಿದುಬಿದ್ದಿದೆ.
ಈ ಬೆಳವಣಿಗೆಯಿಂದ ಮೈಸೂರಿನ ಗಂಗೋತ್ರಿ ಬಡಾವಣೆಯ ವಧು ಕುಟುಂಬ ಆತಂಕಕ್ಕೆ ಸಿಲುಕಿದೆ. ವರನಾಗಬೇಕಿದ್ದ ತೇಜಸ್,ಈತನ ತಾಯಿ ನಾಗರತ್ನ,ತಂದೆ ಮಹದೇವ,ಶಶಿಕುಮಾರ್ ಹಾಗೂ ಸುಮ ಎಂಬುವರ ವಿರುದ್ದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:-ಟ್ರ್ಯಾಕ್ಟರ್-ಬೈಕ್ ಡಿಕ್ಕಿ : ಯುವಕ ಸಾವು
ಗಂಗೋತ್ರಿ ಬಡಾವಣೆಯ ಮಮತಾದೇವಿ ಎಂಬುವರ ಮಗಳು ಡಾ.ನೀತು ಜೊತೆ ಕೂರ್ಗಳ್ಳಿ ಗ್ರಾಮದ ತೇಜಸ್ ಜೊತೆ ಆಗಸ್ಟ್ 31 ರಂದು ನಿಶ್ಚಿತಾರ್ಥ ನೆರವೇರಿತ್ತು. ನಿಶ್ಚಿತಾರ್ಥ ವೇಳೆ ವರನಿಗೆ 150 ಗ್ರಾಂ ಚಿನ್ನ,ಒಂದು ವಜ್ರದ ಉಂಗುರ, 10 ಲಕ್ಷ ಕ್ಯಾಶ್ ವರದಕ್ಷಿಣೆಯಾಗಿ ನೀಡಲಾಗಿತ್ತು. ಹುಡುಗನ ಮನೆಯವರ ಬೇಡಿಕೆಯಂತೆ ಕೋಟೆ ಹುಂಡಿ ಗ್ರಾಮದಲ್ಲಿರುವ ವಿಹಂಗಮ ಹೋಂಸ್ಟೇ ನಲ್ಲಿ ನಿಶ್ಚಿತಾರ್ಥ ಮಾಡಿಕೊಡಲಾಗಿತ್ತು. ಜೊತೆಗೆ ಸಾ.ರಾ ಕನ್ವೆನ್ಷನ್ ಹಾಲ್ ನಲ್ಲೇ ಮದುವೆ ಮಾಡಬೇಕೆಂಬ ಷರತ್ತು ಹಾಕಲಾಗಿತ್ತು. ಮಗಳ ಉಜ್ವಲ ಭವಿಷ್ಯಕ್ಕಾಗಿ ತಂದೆ 1.5 ಲಕ್ಷ ಮುಂಗಡ ನೀಡಿ ಸಾ.ರಾ.ಕನ್ವೆನ್ಷನ್ ಹಾಲ್ ಬುಕ್ ಮಾಡಿದ್ರು. ಇನ್ನೇನು ಹಸೆಮಣೆ ಏರಲು ವಧು ಸಿದ್ದತೆ ನಡೆಸುತ್ತಿರುವಾಗಲೇ ತೇಜಸ್ ಮನೆಯವರು ಬಂದು ಶಾಕ್ ಕೊಟ್ಟಿದ್ದಾರೆ. 25 ಲಕ್ಷ ಹೆಚ್ಚಿನ ವರದಕ್ಷಿಣೆ ಹಾಗೂ 20 ಲಕ್ಷ ಮೌಲ್ಯದ ಹೈಯುಂಡಾಯ್ ಕಾರ್ ಗೆ ಬೇಡಿಕೆ ಇಟ್ಟಿದ್ದಾರೆ.
ಸಾಕಷ್ಟು ವರದಕ್ಷಿಣೆ ಕೊಟ್ಟಿದ್ದೇವೆ ಮತ್ತೆ ಕೊಡಲು ಸಾಧ್ಯವಿಲ್ಲ ಎಂದು ನಿರಾಕರಿಸಿದಾಗ ಮದುವೆ ಕ್ಯಾನ್ಸಲ್ ಮಾಡಿದ್ದಾರೆ. ಕಾರು ಕೊಡಿಸಲು ಸಾಧ್ಯವಾಗದಿದ್ರೆ ಮದುವೆ ಯಾಕೆ ಮಾಡ್ತೀರಾ ಎಂದು ವೆಂಗ್ಯ ಮಾಡಿದ್ದಾರೆ. ಸಾಕಷ್ಟು ಮನವಿ ಮಾಡಿದ್ರೂ ಹೆಚ್ಚಿನ ವರದಕ್ಷಿಣೆ ಬೇಡಿಕೆಯ ಪಟ್ಟು ಸಡಲಿಸದೆ ಮದುವೆ ಕ್ಯಾನ್ಸಲ್ ಮಾಡಿದ್ದಾರೆ. ಈ ಬೆಳವಣಿಗೆಯಿಂದ ಬೇಸತ್ತ ಮಮತಾ ದೇವಿ ಹಾಗೂ ಡಾ.ನೀತು ರವರು ಕೈ ಹಿಡಿಯಬೇಕಿದ್ದ ತೇಜಸ್ ಹಾಗೂ ಮನೆಯವರ ವಿರುದ್ದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್ಸಿಬಿ ಮೊದಲ ಪಂದ್ಯವನ್ನು ಸನ್ರೈಸರ್ಸ್…
ಟೆಹ್ರಾನ್ : ಇಷ್ಟು ದಿನ ತನ್ನ ನೆರೆಹೊರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಇದೀಗ…
ಬೆಂಗಳೂರು : ಭರ್ಜರಿ ಪ್ರದರ್ಶನ ಕಾಣುತ್ತಿರು ಧುರಂಧರ್ 2 ಸಿನಿಮಾ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗಿ ನಿಮ್ಮ ಸಮಯ ಮತ್ತು…
ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…