ಅಪರಾಧ

ತಾಳಿ ಕಟ್ಟಲು 25 ಲಕ್ಷ ಡಿಮ್ಯಾಂಡ್ : ಮದುವೆ ಗಂಡು ಸೇರಿದಂತೆ 5 ಮಂದಿ ವಿರುದ್ದ FIR ದಾಖಲು

ಮೈಸೂರು : ವೈದ್ಯೆಯನ್ನ ವರಿಸಿ ಹಸೆಮಣೆ ಏರಬೇಕಿದ್ದ ವರನ ವರದಕ್ಷಿಣೆ ದುರಾಸೆಗೆ ಮದುವೆ ಮುರಿದುಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ. ನಿಶ್ಚಿತಾರ್ಥದ ಸಮಯದಲ್ಲಿ ಸಾಕಷ್ಟು ವರದಕ್ಷಿಣೆ ಪಡೆದರೂ ಮತ್ತಷ್ಟು ವರದಕ್ಷಿಣೆಗೆ ಬೇಡಿಕೆ ಇಟ್ಟ ಹಿನ್ನಲೆ ಮದುವೆ ಮುರಿದುಬಿದ್ದಿದೆ.

ಈ ಬೆಳವಣಿಗೆಯಿಂದ ಮೈಸೂರಿನ ಗಂಗೋತ್ರಿ ಬಡಾವಣೆಯ ವಧು ಕುಟುಂಬ ಆತಂಕಕ್ಕೆ ಸಿಲುಕಿದೆ. ವರನಾಗಬೇಕಿದ್ದ ತೇಜಸ್,ಈತನ ತಾಯಿ ನಾಗರತ್ನ,ತಂದೆ ಮಹದೇವ,ಶಶಿಕುಮಾರ್ ಹಾಗೂ ಸುಮ ಎಂಬುವರ ವಿರುದ್ದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:-ಟ್ರ್ಯಾಕ್ಟರ್-ಬೈಕ್ ಡಿಕ್ಕಿ : ಯುವಕ ಸಾವು

ಗಂಗೋತ್ರಿ ಬಡಾವಣೆಯ ಮಮತಾದೇವಿ ಎಂಬುವರ ಮಗಳು ಡಾ.ನೀತು ಜೊತೆ ಕೂರ್ಗಳ್ಳಿ ಗ್ರಾಮದ ತೇಜಸ್ ಜೊತೆ ಆಗಸ್ಟ್ 31 ರಂದು ನಿಶ್ಚಿತಾರ್ಥ ನೆರವೇರಿತ್ತು. ನಿಶ್ಚಿತಾರ್ಥ ವೇಳೆ ವರನಿಗೆ 150 ಗ್ರಾಂ ಚಿನ್ನ,ಒಂದು ವಜ್ರದ ಉಂಗುರ, 10 ಲಕ್ಷ ಕ್ಯಾಶ್ ವರದಕ್ಷಿಣೆಯಾಗಿ ನೀಡಲಾಗಿತ್ತು. ಹುಡುಗನ ಮನೆಯವರ ಬೇಡಿಕೆಯಂತೆ ಕೋಟೆ ಹುಂಡಿ ಗ್ರಾಮದಲ್ಲಿರುವ ವಿಹಂಗಮ ಹೋಂಸ್ಟೇ ನಲ್ಲಿ ನಿಶ್ಚಿತಾರ್ಥ ಮಾಡಿಕೊಡಲಾಗಿತ್ತು. ಜೊತೆಗೆ ಸಾ.ರಾ ಕನ್ವೆನ್ಷನ್ ಹಾಲ್ ನಲ್ಲೇ ಮದುವೆ ಮಾಡಬೇಕೆಂಬ ಷರತ್ತು ಹಾಕಲಾಗಿತ್ತು. ಮಗಳ ಉಜ್ವಲ ಭವಿಷ್ಯಕ್ಕಾಗಿ ತಂದೆ 1.5 ಲಕ್ಷ ಮುಂಗಡ ನೀಡಿ ಸಾ.ರಾ.ಕನ್ವೆನ್ಷನ್ ಹಾಲ್ ಬುಕ್ ಮಾಡಿದ್ರು. ಇನ್ನೇನು ಹಸೆಮಣೆ ಏರಲು ವಧು ಸಿದ್ದತೆ ನಡೆಸುತ್ತಿರುವಾಗಲೇ ತೇಜಸ್ ಮನೆಯವರು ಬಂದು ಶಾಕ್ ಕೊಟ್ಟಿದ್ದಾರೆ. 25 ಲಕ್ಷ ಹೆಚ್ಚಿನ ವರದಕ್ಷಿಣೆ ಹಾಗೂ 20 ಲಕ್ಷ ಮೌಲ್ಯದ ಹೈಯುಂಡಾಯ್ ಕಾರ್ ಗೆ ಬೇಡಿಕೆ ಇಟ್ಟಿದ್ದಾರೆ.

ಸಾಕಷ್ಟು ವರದಕ್ಷಿಣೆ ಕೊಟ್ಟಿದ್ದೇವೆ ಮತ್ತೆ ಕೊಡಲು ಸಾಧ್ಯವಿಲ್ಲ ಎಂದು ನಿರಾಕರಿಸಿದಾಗ ಮದುವೆ ಕ್ಯಾನ್ಸಲ್ ಮಾಡಿದ್ದಾರೆ. ಕಾರು ಕೊಡಿಸಲು ಸಾಧ್ಯವಾಗದಿದ್ರೆ ಮದುವೆ ಯಾಕೆ ಮಾಡ್ತೀರಾ ಎಂದು ವೆಂಗ್ಯ ಮಾಡಿದ್ದಾರೆ. ಸಾಕಷ್ಟು ಮನವಿ ಮಾಡಿದ್ರೂ ಹೆಚ್ಚಿನ ವರದಕ್ಷಿಣೆ ಬೇಡಿಕೆಯ ಪಟ್ಟು ಸಡಲಿಸದೆ ಮದುವೆ ಕ್ಯಾನ್ಸಲ್ ಮಾಡಿದ್ದಾರೆ. ಈ ಬೆಳವಣಿಗೆಯಿಂದ ಬೇಸತ್ತ ಮಮತಾ ದೇವಿ ಹಾಗೂ ಡಾ.ನೀತು ರವರು ಕೈ ಹಿಡಿಯಬೇಕಿದ್ದ ತೇಜಸ್ ಹಾಗೂ ಮನೆಯವರ ವಿರುದ್ದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಪ್ರಕರಣ ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

6 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

8 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

9 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

9 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

12 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

12 hours ago