ಅಪರಾಧ

ತಾಳಿ ಕಟ್ಟಲು 25 ಲಕ್ಷ ಡಿಮ್ಯಾಂಡ್ : ಮದುವೆ ಗಂಡು ಸೇರಿದಂತೆ 5 ಮಂದಿ ವಿರುದ್ದ FIR ದಾಖಲು

ಮೈಸೂರು : ವೈದ್ಯೆಯನ್ನ ವರಿಸಿ ಹಸೆಮಣೆ ಏರಬೇಕಿದ್ದ ವರನ ವರದಕ್ಷಿಣೆ ದುರಾಸೆಗೆ ಮದುವೆ ಮುರಿದುಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ. ನಿಶ್ಚಿತಾರ್ಥದ ಸಮಯದಲ್ಲಿ ಸಾಕಷ್ಟು ವರದಕ್ಷಿಣೆ ಪಡೆದರೂ ಮತ್ತಷ್ಟು ವರದಕ್ಷಿಣೆಗೆ ಬೇಡಿಕೆ ಇಟ್ಟ ಹಿನ್ನಲೆ ಮದುವೆ ಮುರಿದುಬಿದ್ದಿದೆ.

ಈ ಬೆಳವಣಿಗೆಯಿಂದ ಮೈಸೂರಿನ ಗಂಗೋತ್ರಿ ಬಡಾವಣೆಯ ವಧು ಕುಟುಂಬ ಆತಂಕಕ್ಕೆ ಸಿಲುಕಿದೆ. ವರನಾಗಬೇಕಿದ್ದ ತೇಜಸ್,ಈತನ ತಾಯಿ ನಾಗರತ್ನ,ತಂದೆ ಮಹದೇವ,ಶಶಿಕುಮಾರ್ ಹಾಗೂ ಸುಮ ಎಂಬುವರ ವಿರುದ್ದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:-ಟ್ರ್ಯಾಕ್ಟರ್-ಬೈಕ್ ಡಿಕ್ಕಿ : ಯುವಕ ಸಾವು

ಗಂಗೋತ್ರಿ ಬಡಾವಣೆಯ ಮಮತಾದೇವಿ ಎಂಬುವರ ಮಗಳು ಡಾ.ನೀತು ಜೊತೆ ಕೂರ್ಗಳ್ಳಿ ಗ್ರಾಮದ ತೇಜಸ್ ಜೊತೆ ಆಗಸ್ಟ್ 31 ರಂದು ನಿಶ್ಚಿತಾರ್ಥ ನೆರವೇರಿತ್ತು. ನಿಶ್ಚಿತಾರ್ಥ ವೇಳೆ ವರನಿಗೆ 150 ಗ್ರಾಂ ಚಿನ್ನ,ಒಂದು ವಜ್ರದ ಉಂಗುರ, 10 ಲಕ್ಷ ಕ್ಯಾಶ್ ವರದಕ್ಷಿಣೆಯಾಗಿ ನೀಡಲಾಗಿತ್ತು. ಹುಡುಗನ ಮನೆಯವರ ಬೇಡಿಕೆಯಂತೆ ಕೋಟೆ ಹುಂಡಿ ಗ್ರಾಮದಲ್ಲಿರುವ ವಿಹಂಗಮ ಹೋಂಸ್ಟೇ ನಲ್ಲಿ ನಿಶ್ಚಿತಾರ್ಥ ಮಾಡಿಕೊಡಲಾಗಿತ್ತು. ಜೊತೆಗೆ ಸಾ.ರಾ ಕನ್ವೆನ್ಷನ್ ಹಾಲ್ ನಲ್ಲೇ ಮದುವೆ ಮಾಡಬೇಕೆಂಬ ಷರತ್ತು ಹಾಕಲಾಗಿತ್ತು. ಮಗಳ ಉಜ್ವಲ ಭವಿಷ್ಯಕ್ಕಾಗಿ ತಂದೆ 1.5 ಲಕ್ಷ ಮುಂಗಡ ನೀಡಿ ಸಾ.ರಾ.ಕನ್ವೆನ್ಷನ್ ಹಾಲ್ ಬುಕ್ ಮಾಡಿದ್ರು. ಇನ್ನೇನು ಹಸೆಮಣೆ ಏರಲು ವಧು ಸಿದ್ದತೆ ನಡೆಸುತ್ತಿರುವಾಗಲೇ ತೇಜಸ್ ಮನೆಯವರು ಬಂದು ಶಾಕ್ ಕೊಟ್ಟಿದ್ದಾರೆ. 25 ಲಕ್ಷ ಹೆಚ್ಚಿನ ವರದಕ್ಷಿಣೆ ಹಾಗೂ 20 ಲಕ್ಷ ಮೌಲ್ಯದ ಹೈಯುಂಡಾಯ್ ಕಾರ್ ಗೆ ಬೇಡಿಕೆ ಇಟ್ಟಿದ್ದಾರೆ.

ಸಾಕಷ್ಟು ವರದಕ್ಷಿಣೆ ಕೊಟ್ಟಿದ್ದೇವೆ ಮತ್ತೆ ಕೊಡಲು ಸಾಧ್ಯವಿಲ್ಲ ಎಂದು ನಿರಾಕರಿಸಿದಾಗ ಮದುವೆ ಕ್ಯಾನ್ಸಲ್ ಮಾಡಿದ್ದಾರೆ. ಕಾರು ಕೊಡಿಸಲು ಸಾಧ್ಯವಾಗದಿದ್ರೆ ಮದುವೆ ಯಾಕೆ ಮಾಡ್ತೀರಾ ಎಂದು ವೆಂಗ್ಯ ಮಾಡಿದ್ದಾರೆ. ಸಾಕಷ್ಟು ಮನವಿ ಮಾಡಿದ್ರೂ ಹೆಚ್ಚಿನ ವರದಕ್ಷಿಣೆ ಬೇಡಿಕೆಯ ಪಟ್ಟು ಸಡಲಿಸದೆ ಮದುವೆ ಕ್ಯಾನ್ಸಲ್ ಮಾಡಿದ್ದಾರೆ. ಈ ಬೆಳವಣಿಗೆಯಿಂದ ಬೇಸತ್ತ ಮಮತಾ ದೇವಿ ಹಾಗೂ ಡಾ.ನೀತು ರವರು ಕೈ ಹಿಡಿಯಬೇಕಿದ್ದ ತೇಜಸ್ ಹಾಗೂ ಮನೆಯವರ ವಿರುದ್ದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಪ್ರಕರಣ ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

1 hour ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

2 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

3 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

4 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

4 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

8 hours ago