ಅಪರಾಧ

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಯುವಕ ; ಮನನೊಂದ 22 ವರ್ಷದ ಯವತಿ ಆತ್ಮಹತ್ಯೆ

ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿದ್ದ ಯುವಕ, ಯುವತಿಗೆ ಮಾನಸಿಕ-ದೈಹಿಕ ಹಲ್ಲೆ ನಡೆಸಿದ್ದು, ಆತನ ಲೈಂಗಿಕ ಕಿರುಕುಳಕ್ಕೆ ಬೇಸತ್ತ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಇಂಜಿನಿಯರಿಂಗ್ ಪದವೀಧರೆ ಹಾಸನ ಮೂಲದ 22 ವರ್ಷದ ಅಚಲ ಬೆಂಗಳೂರಿನ ಪಾಂಡುರಂಗ ನಗರದ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ಯುವತಿ ಅಚಲ ನಟಿ ಆಶಿಕಾ ರಂಗನಾಥ್ ಅವರ ಮಾವನ ಮಗಳಾಗಿದ್ದು, ಯುವತಿಯ ಸಾವಿನ ಕುರಿತಂತೆ ನಟಿ ಆಶಿಕಾ ರಂಗನಾಥ್ ‘Gone Too Soon’ ಎಂದು ಪೋಸ್ಟ್ ಮಾಡಿದ್ದಾರೆ.

ತಾನು ಅಚಲಳನ್ನು ಮದುವೆಯಾಗುತ್ತೇನೆಂದು ಆಕೆಯ ಪೋಷಕರನ್ನು ಒಪ್ಪಿಸಿದ್ದ ಮಾಯಾಂಕ್ ಅದೇ ಸಲುಗೆಯಲ್ಲಿ ಆಕೆಯೊಂದಿಗೆ ಲೈಂಗಿಕ ಸಂಪರ್ಕಕ್ಕೆ ಪೀಡಿಸುತ್ತಿದ್ದಾನೆ. ಇದಕ್ಕೆ ಒಪ್ಪದ್ದಕ್ಕೆ ಆಕೆಯ ಮೇಲೆ ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ನೀಡುತ್ತಿದ್ದರಿಂದ ಮನನೊಂದು ಅಚಲ ನೇಣಿಗೆ ಶರಣಾಗಿದ್ದಾಳೆ ಎಂದು ಪೋಷಕರು ಪುಟ್ಟೇನಹಳ್ಳಿ ಠಾಣೆಯಲ್ಲಿ ಮಯಾಂಕ್ ಹಾಗೂ ಆತನ ತಾಯಿ ವಿರುದ್ಧ ದೂರು ನೀಡಿದ್ದಾರೆ.

ಇದನ್ನು ಓದಿ: ಜಾತಿ ಕಾರಣಕ್ಕೆ ಪ್ರಿಯಕರನನ್ನು ಕೊಂದ ಯುವತಿ ಕುಟುಂಬಸ್ಥರು : ಮೃತದೇಹವನ್ನೇ ಮದುವೆಯಾದ ಪ್ರಿಯತಮೆ..!

ಈ ದೂರು ಆಧರಿಸಿ ಇಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಡ್ರಗ್ ಅಡಿಕ್ಟ್ ಆಗಿರುವ ಮಯಾಂಕ್‌ ಹಲವು ಯುವತಿಯೊಂದಿಗೆ ಸಂಬಂಧ ಹೊಂದಿದ್ದ ಎಂಬ ವಿಚಾರ ಅಚಲಗೆ ಗೊತ್ತಾಗಿ ಮನೆಯಲ್ಲಿ ವಿಷಯ ಹೇಳಿದ್ದಳು. ಇದರಿಂದ ಕೋಪಗೊಂಡ ಮಾಯಾಂಕ್ ಪದೇ ಪದೇ ಕಿರುಕುಳ ಹಿಂಸೆ ನೀಡುತ್ತಿದ್ದನು. ಅಲ್ಲದೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸುತ್ತಿದ್ದನು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಮಾಯಾಂಕ್ ತನಗೆ ವಂಚಿಸಿರುವ ವಿಷಯ ತಿಳಿದರೂ ಅಚಲಾಗೆ ಆತನ ಮೇಲಿನ ಪ್ರೀತಿ ಕಡಿಮೆಯಾಗಿರಲಿಲ್ಲ. ಹೀಗಾಗಿ ಅಚಲ ಆತನಿಗೆ ಮೆಸೇಜ್ ಮಾಡಿ, ಜೀವನದಲ್ಲಿ ನಿನ್ನ ಬಿಟ್ಟು ನನಗೆ ಬದುಕಲು ಸಾಧ್ಯವಿಲ್ಲ. ನೀನು ನನಗೆ ಮೋಸ ಮಾಡಿದರೂ ನಿನ್ನನ್ನು ಮರೆಯಲು ಆಗುತ್ತಿಲ್ಲ. ನನ್ನ ಕನಸುಗಳನ್ನು ನೀನು ನುಚ್ಚು ನೂರು ಮಾಡಿದ್ದೀಯ. ನನಗೆ ನೀನು ಮೋಸ ಮಾಡಿಲ್ಲವಾದರೆ ರಾಘವೇಂದ್ರ ಸ್ವಾಮಿ ಮೇಲೆ ಆಣೆ ಮಾಡು. ನೀನು ಮಾಡಿದ ಮೋಸಕ್ಕೆ ತಕ್ಕ ಬೆಲೆ ಕಟ್ಟಲೇಬೇಕು ಎಂದು ಕೊನೆಯ ಬಾರಿಗೆ ಮೆಸೇಜ್ ಮಾಡಿ, ಆನಂತರದಲ್ಲಿ ನೇಣಿಗೆ ಶರಣಾಗಿದ್ದಾಳೆ.

ಘಟನೆ ನಡೆದು 10 ದಿನ ಕಳೆದರೂ ಆರೋಪಿಗಳ ಬಂಧನವಾಗಿಲ್ಲ. ಆರೋಪಿಗಳ ಬಂಧನಕ್ಕೆ ಮೃತ ಅಚಲ ಪೋಷಕರ ಒತ್ತಾಯಿಸಿದ್ದು, ಪೊಲೀಸರ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಟಿವಿಕೆ ವಿಜಯ್ ಪಕ್ಷಕ್ಕೆ ಸೀಟಿ ಗುರುತು ನೀಡಿದ ಆಯೋಗ

ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…

18 mins ago

ಮ.ಬೆಟ್ಟ | ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ ದೃಶ್ಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

29 mins ago

MGNREGA ಕಾಯ್ದೆಯನ್ನು ಮರುಸ್ಥಾಪಿಸುವವರೆಗೆ ನಮ್ಮ ಹೋರಾಟ ಇರಲಿದೆ : ಸಿಎಂ

ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…

39 mins ago

ಒಂದು ಎಕರೆಯಲ್ಲಿ 102 ವಿವಿಧ ಬೆಳೆ : ರೋಗರಹಿತ ಬೆಳೆಗಳ ತಳಿ ಪ್ರದರ್ಶನ

ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…

51 mins ago

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ 2 ತಿಂಗಳಲ್ಲಿ ದಾಖಲೆಯ ಆದಾಯ

ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್‌ ಹಾಗೂ…

3 hours ago

ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…

3 hours ago