ಅಪರಾಧ

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಯುವಕ ; ಮನನೊಂದ 22 ವರ್ಷದ ಯವತಿ ಆತ್ಮಹತ್ಯೆ

ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿದ್ದ ಯುವಕ, ಯುವತಿಗೆ ಮಾನಸಿಕ-ದೈಹಿಕ ಹಲ್ಲೆ ನಡೆಸಿದ್ದು, ಆತನ ಲೈಂಗಿಕ ಕಿರುಕುಳಕ್ಕೆ ಬೇಸತ್ತ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಇಂಜಿನಿಯರಿಂಗ್ ಪದವೀಧರೆ ಹಾಸನ ಮೂಲದ 22 ವರ್ಷದ ಅಚಲ ಬೆಂಗಳೂರಿನ ಪಾಂಡುರಂಗ ನಗರದ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ಯುವತಿ ಅಚಲ ನಟಿ ಆಶಿಕಾ ರಂಗನಾಥ್ ಅವರ ಮಾವನ ಮಗಳಾಗಿದ್ದು, ಯುವತಿಯ ಸಾವಿನ ಕುರಿತಂತೆ ನಟಿ ಆಶಿಕಾ ರಂಗನಾಥ್ ‘Gone Too Soon’ ಎಂದು ಪೋಸ್ಟ್ ಮಾಡಿದ್ದಾರೆ.

ತಾನು ಅಚಲಳನ್ನು ಮದುವೆಯಾಗುತ್ತೇನೆಂದು ಆಕೆಯ ಪೋಷಕರನ್ನು ಒಪ್ಪಿಸಿದ್ದ ಮಾಯಾಂಕ್ ಅದೇ ಸಲುಗೆಯಲ್ಲಿ ಆಕೆಯೊಂದಿಗೆ ಲೈಂಗಿಕ ಸಂಪರ್ಕಕ್ಕೆ ಪೀಡಿಸುತ್ತಿದ್ದಾನೆ. ಇದಕ್ಕೆ ಒಪ್ಪದ್ದಕ್ಕೆ ಆಕೆಯ ಮೇಲೆ ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ನೀಡುತ್ತಿದ್ದರಿಂದ ಮನನೊಂದು ಅಚಲ ನೇಣಿಗೆ ಶರಣಾಗಿದ್ದಾಳೆ ಎಂದು ಪೋಷಕರು ಪುಟ್ಟೇನಹಳ್ಳಿ ಠಾಣೆಯಲ್ಲಿ ಮಯಾಂಕ್ ಹಾಗೂ ಆತನ ತಾಯಿ ವಿರುದ್ಧ ದೂರು ನೀಡಿದ್ದಾರೆ.

ಇದನ್ನು ಓದಿ: ಜಾತಿ ಕಾರಣಕ್ಕೆ ಪ್ರಿಯಕರನನ್ನು ಕೊಂದ ಯುವತಿ ಕುಟುಂಬಸ್ಥರು : ಮೃತದೇಹವನ್ನೇ ಮದುವೆಯಾದ ಪ್ರಿಯತಮೆ..!

ಈ ದೂರು ಆಧರಿಸಿ ಇಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಡ್ರಗ್ ಅಡಿಕ್ಟ್ ಆಗಿರುವ ಮಯಾಂಕ್‌ ಹಲವು ಯುವತಿಯೊಂದಿಗೆ ಸಂಬಂಧ ಹೊಂದಿದ್ದ ಎಂಬ ವಿಚಾರ ಅಚಲಗೆ ಗೊತ್ತಾಗಿ ಮನೆಯಲ್ಲಿ ವಿಷಯ ಹೇಳಿದ್ದಳು. ಇದರಿಂದ ಕೋಪಗೊಂಡ ಮಾಯಾಂಕ್ ಪದೇ ಪದೇ ಕಿರುಕುಳ ಹಿಂಸೆ ನೀಡುತ್ತಿದ್ದನು. ಅಲ್ಲದೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸುತ್ತಿದ್ದನು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಮಾಯಾಂಕ್ ತನಗೆ ವಂಚಿಸಿರುವ ವಿಷಯ ತಿಳಿದರೂ ಅಚಲಾಗೆ ಆತನ ಮೇಲಿನ ಪ್ರೀತಿ ಕಡಿಮೆಯಾಗಿರಲಿಲ್ಲ. ಹೀಗಾಗಿ ಅಚಲ ಆತನಿಗೆ ಮೆಸೇಜ್ ಮಾಡಿ, ಜೀವನದಲ್ಲಿ ನಿನ್ನ ಬಿಟ್ಟು ನನಗೆ ಬದುಕಲು ಸಾಧ್ಯವಿಲ್ಲ. ನೀನು ನನಗೆ ಮೋಸ ಮಾಡಿದರೂ ನಿನ್ನನ್ನು ಮರೆಯಲು ಆಗುತ್ತಿಲ್ಲ. ನನ್ನ ಕನಸುಗಳನ್ನು ನೀನು ನುಚ್ಚು ನೂರು ಮಾಡಿದ್ದೀಯ. ನನಗೆ ನೀನು ಮೋಸ ಮಾಡಿಲ್ಲವಾದರೆ ರಾಘವೇಂದ್ರ ಸ್ವಾಮಿ ಮೇಲೆ ಆಣೆ ಮಾಡು. ನೀನು ಮಾಡಿದ ಮೋಸಕ್ಕೆ ತಕ್ಕ ಬೆಲೆ ಕಟ್ಟಲೇಬೇಕು ಎಂದು ಕೊನೆಯ ಬಾರಿಗೆ ಮೆಸೇಜ್ ಮಾಡಿ, ಆನಂತರದಲ್ಲಿ ನೇಣಿಗೆ ಶರಣಾಗಿದ್ದಾಳೆ.

ಘಟನೆ ನಡೆದು 10 ದಿನ ಕಳೆದರೂ ಆರೋಪಿಗಳ ಬಂಧನವಾಗಿಲ್ಲ. ಆರೋಪಿಗಳ ಬಂಧನಕ್ಕೆ ಮೃತ ಅಚಲ ಪೋಷಕರ ಒತ್ತಾಯಿಸಿದ್ದು, ಪೊಲೀಸರ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

8 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

8 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

8 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

8 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

8 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

8 hours ago