ಮೈಸೂರು: ನನ್ನನ್ನು ಗುರಾಯಿಸಿ ನೋಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯೊಬ್ಬನನ್ನು ನಾಲ್ವರು ಸೇರಿ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ನಗರದ ಶಾಂತಿನಗರದಲ್ಲಿ ಗುರುವಾರ ರಾತ್ರಿ ನಡೆದಿದೆ.
ಶಾಂತಿನಗರದ ನಿವಾಸಿ ಜಾವಿದ್ ಪಾಷಾ ಎಂಬವರ ಮಗ ಹಾಗೂ ಪ್ರಥಮ ಪಿಯುಸಿ ತೇರ್ಗಡೆಯಾಗಿರುವ ಅರ್ಬಾದ್ ಖಾನ್(೧೮) ಎಂಬಾತನೇ ಹತ್ಯೆಗೀಡಾದವನು. ಕೂಲಿ ಕೆಲಸ ವಾಡುತ್ತಿದ್ದ ಶಾಬಾದ್ ಎಂಬಾತನೇ ಕೊಲೆಗೈದ ಆರೋಪಿ.
ಗುರುವಾರ ರಾತ್ರಿ ೯.೩೦ರ ವೇಳೆಯಲ್ಲಿ ಶಾಂತಿನಗರದ ಬಳಿ ಅರ್ಬಾದ್ ಖಾನ್ ಹಾಗೂ ಸ್ನೇಹಿತರು ಮಾತನಾಡುತ್ತಾ ನಿಂತಿದ್ದರು ಎನ್ನಲಾಗಿದೆ. ಈ ವೇಳೆ ಅಲ್ಲಿಗೆ ಬಂದ ಶಾಬಾದ್ನನ್ನು ಅರ್ಬಾದ್ ಗುರಾಯಿಸಿ ನೋಡಿದ್ದಾನೆ. ಇದನ್ನು ಶಾಬಾದ್ ಪ್ರಶ್ನಿಸಿದ್ದಾನೆ.
ಇದರಿಂದ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ನಂತರ ಅಲ್ಲಿದ್ದವರು ಜಗಳ ಬಿಡಿಸಿ ಕಳುಹಿಸಿದ್ದಾರೆ. ಅಷ್ಟಕ್ಕೇ ಸುಮ್ಮನಾಗದ ಶಾಬಾದ್ ಸುಲ್ತಾನ್ ರಸ್ತೆಯಲ್ಲಿರುವ ತನ್ನ ಮನೆಗೆ ತೆರಳಿ ತಂದೆ ಶಾದಿಲ್ಗೆ ವಿಚಾರ ತಿಳಿಸಿದ್ದಾನೆ. ನಂತರ ಸಹೋದರ ಶೋಯೆಬ್ ಹಾಗೂ ಸ್ನೇಹಿತ ಸಾಹಿಲ್ನೊಡನೆ ಅರ್ಬಾದ್ ಖಾನ್ನನ್ನು ಹುಡಿಕಿಕೊಂಡು ಎರಡು ಬೈಕ್ನಲ್ಲಿ ಬಂದಿದ್ದಾರೆ.
ಈ ವೇಳೆ ಶಾಂತಿನಗರದ ಲಾಲ್ ಬೇಕರಿ ಬಳಿ ಅರ್ಬಾದ್ ಹಾಗೂ ಸ್ನೇಹಿತರು ಕುಳಿತಿದ್ದರು. ಅಲ್ಲಿಗೆ ಬಂದ ನಾಲ್ವರು ಅರ್ಬಾದ್ ಹಾಗೂ ಸ್ನೇಹಿತರ ಮೇಲೆ ದಾಳಿ ನಡೆಸಿದ್ದಾರೆ. ಈ ನಡುವೆ ಎರಡೂ ಗುಂಪುಗಳ ನಡುವೆ ಜಗಳವಾಗಿದೆ.
ನಂತರ ಶಾಬಾದ್ ತನ್ನೊಡನೆ ತಂದಿದ್ದ ಚಾಕುವಿನಿಂದ ಅರ್ಬಾದ್ಗೆ ಇರಿದಿದ್ದಾನೆ. ಈ ನಡುವೆ ಶಾಬಾದ್ ಮೇಲೂ ಹಲ್ಲೆಯಾಗಿದೆ. ಚಾಕು ಇರಿತದಿಂದ ತೀವ್ರ ರಕ್ತಸ್ರಾವವಾಗಿ ಅರ್ಬಾದ್ ಖಾನ್ ಮೃತಪಟ್ಟಿದ್ದಾನೆ. ಗಾಯಗೊಂಡಿರುವ ಶಾಬಾದ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣಕ್ಕೆ ಸಂಬಂದಿಸಿದಂತೆ ಶಾಬಾದ್, ತಂದೆ ಶಾದಿಲ್, ಸಹೋದರ ಶೋಯೆಬ್ ಹಾಗೂ ಸ್ನೇಹಿತ ಸಾಹಿಲ್ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…