ಮೈಸೂರು: ನನ್ನನ್ನು ಗುರಾಯಿಸಿ ನೋಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯೊಬ್ಬನನ್ನು ನಾಲ್ವರು ಸೇರಿ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ನಗರದ ಶಾಂತಿನಗರದಲ್ಲಿ ಗುರುವಾರ ರಾತ್ರಿ ನಡೆದಿದೆ.
ಶಾಂತಿನಗರದ ನಿವಾಸಿ ಜಾವಿದ್ ಪಾಷಾ ಎಂಬವರ ಮಗ ಹಾಗೂ ಪ್ರಥಮ ಪಿಯುಸಿ ತೇರ್ಗಡೆಯಾಗಿರುವ ಅರ್ಬಾದ್ ಖಾನ್(೧೮) ಎಂಬಾತನೇ ಹತ್ಯೆಗೀಡಾದವನು. ಕೂಲಿ ಕೆಲಸ ವಾಡುತ್ತಿದ್ದ ಶಾಬಾದ್ ಎಂಬಾತನೇ ಕೊಲೆಗೈದ ಆರೋಪಿ.
ಗುರುವಾರ ರಾತ್ರಿ ೯.೩೦ರ ವೇಳೆಯಲ್ಲಿ ಶಾಂತಿನಗರದ ಬಳಿ ಅರ್ಬಾದ್ ಖಾನ್ ಹಾಗೂ ಸ್ನೇಹಿತರು ಮಾತನಾಡುತ್ತಾ ನಿಂತಿದ್ದರು ಎನ್ನಲಾಗಿದೆ. ಈ ವೇಳೆ ಅಲ್ಲಿಗೆ ಬಂದ ಶಾಬಾದ್ನನ್ನು ಅರ್ಬಾದ್ ಗುರಾಯಿಸಿ ನೋಡಿದ್ದಾನೆ. ಇದನ್ನು ಶಾಬಾದ್ ಪ್ರಶ್ನಿಸಿದ್ದಾನೆ.
ಇದರಿಂದ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ನಂತರ ಅಲ್ಲಿದ್ದವರು ಜಗಳ ಬಿಡಿಸಿ ಕಳುಹಿಸಿದ್ದಾರೆ. ಅಷ್ಟಕ್ಕೇ ಸುಮ್ಮನಾಗದ ಶಾಬಾದ್ ಸುಲ್ತಾನ್ ರಸ್ತೆಯಲ್ಲಿರುವ ತನ್ನ ಮನೆಗೆ ತೆರಳಿ ತಂದೆ ಶಾದಿಲ್ಗೆ ವಿಚಾರ ತಿಳಿಸಿದ್ದಾನೆ. ನಂತರ ಸಹೋದರ ಶೋಯೆಬ್ ಹಾಗೂ ಸ್ನೇಹಿತ ಸಾಹಿಲ್ನೊಡನೆ ಅರ್ಬಾದ್ ಖಾನ್ನನ್ನು ಹುಡಿಕಿಕೊಂಡು ಎರಡು ಬೈಕ್ನಲ್ಲಿ ಬಂದಿದ್ದಾರೆ.
ಈ ವೇಳೆ ಶಾಂತಿನಗರದ ಲಾಲ್ ಬೇಕರಿ ಬಳಿ ಅರ್ಬಾದ್ ಹಾಗೂ ಸ್ನೇಹಿತರು ಕುಳಿತಿದ್ದರು. ಅಲ್ಲಿಗೆ ಬಂದ ನಾಲ್ವರು ಅರ್ಬಾದ್ ಹಾಗೂ ಸ್ನೇಹಿತರ ಮೇಲೆ ದಾಳಿ ನಡೆಸಿದ್ದಾರೆ. ಈ ನಡುವೆ ಎರಡೂ ಗುಂಪುಗಳ ನಡುವೆ ಜಗಳವಾಗಿದೆ.
ನಂತರ ಶಾಬಾದ್ ತನ್ನೊಡನೆ ತಂದಿದ್ದ ಚಾಕುವಿನಿಂದ ಅರ್ಬಾದ್ಗೆ ಇರಿದಿದ್ದಾನೆ. ಈ ನಡುವೆ ಶಾಬಾದ್ ಮೇಲೂ ಹಲ್ಲೆಯಾಗಿದೆ. ಚಾಕು ಇರಿತದಿಂದ ತೀವ್ರ ರಕ್ತಸ್ರಾವವಾಗಿ ಅರ್ಬಾದ್ ಖಾನ್ ಮೃತಪಟ್ಟಿದ್ದಾನೆ. ಗಾಯಗೊಂಡಿರುವ ಶಾಬಾದ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣಕ್ಕೆ ಸಂಬಂದಿಸಿದಂತೆ ಶಾಬಾದ್, ತಂದೆ ಶಾದಿಲ್, ಸಹೋದರ ಶೋಯೆಬ್ ಹಾಗೂ ಸ್ನೇಹಿತ ಸಾಹಿಲ್ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ…
ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ…
ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್…
ಮೈಸೂರು ಮಹಾ ನಗರ ಪಾಲಿಕೆ ಚುನಾಯಿತ ಸದಸ್ಯರ ಅವಧಿ ಮುಗಿದು ಎರಡು ವರ್ಷಗಳೆ ಕಳೆದಿದೆ. ಆದರೆ ಸರ್ಕಾರ ಚುನಾವಣೆ ನಡೆಸಲು ಮುಂದಾಗುತ್ತಿಲ್ಲ.…
ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ…
ಪಂಜುಗಂಗೊಳ್ಳಿ ಊಟವಿಲ್ಲದೆ ಪರದಾಡಿದ ಘಟನೆಯೇ ನಿರಂತರ ದಾಸೋಹಕ್ಕೆ ಪ್ರೇರಣೆ ಇತ್ತೀಚಿನ ದಿನಗಳಲ್ಲಿ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತ…