ಅಪರಾಧ

ಮೈಸೂರು: ಗುರಾಯಿಸಿದ ಕಾರಣಕ್ಕೆ ಯುವಕನ ಹತ್ಯೆ

ಮೈಸೂರು: ನನ್ನನ್ನು ಗುರಾಯಿಸಿ ನೋಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯೊಬ್ಬನನ್ನು ನಾಲ್ವರು ಸೇರಿ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ನಗರದ ಶಾಂತಿನಗರದಲ್ಲಿ ಗುರುವಾರ ರಾತ್ರಿ ನಡೆದಿದೆ.

ಶಾಂತಿನಗರದ ನಿವಾಸಿ ಜಾವಿದ್ ಪಾಷಾ ಎಂಬವರ ಮಗ ಹಾಗೂ ಪ್ರಥಮ ಪಿಯುಸಿ ತೇರ್ಗಡೆಯಾಗಿರುವ ಅರ್ಬಾದ್ ಖಾನ್(೧೮) ಎಂಬಾತನೇ ಹತ್ಯೆಗೀಡಾದವನು. ಕೂಲಿ ಕೆಲಸ ವಾಡುತ್ತಿದ್ದ ಶಾಬಾದ್ ಎಂಬಾತನೇ ಕೊಲೆಗೈದ ಆರೋಪಿ.

ಗುರುವಾರ ರಾತ್ರಿ ೯.೩೦ರ ವೇಳೆಯಲ್ಲಿ ಶಾಂತಿನಗರದ ಬಳಿ ಅರ್ಬಾದ್ ಖಾನ್ ಹಾಗೂ ಸ್ನೇಹಿತರು ಮಾತನಾಡುತ್ತಾ ನಿಂತಿದ್ದರು ಎನ್ನಲಾಗಿದೆ. ಈ ವೇಳೆ ಅಲ್ಲಿಗೆ ಬಂದ ಶಾಬಾದ್‌ನನ್ನು ಅರ್ಬಾದ್ ಗುರಾಯಿಸಿ ನೋಡಿದ್ದಾನೆ. ಇದನ್ನು ಶಾಬಾದ್ ಪ್ರಶ್ನಿಸಿದ್ದಾನೆ.

ಇದರಿಂದ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ನಂತರ ಅಲ್ಲಿದ್ದವರು ಜಗಳ ಬಿಡಿಸಿ ಕಳುಹಿಸಿದ್ದಾರೆ. ಅಷ್ಟಕ್ಕೇ ಸುಮ್ಮನಾಗದ ಶಾಬಾದ್ ಸುಲ್ತಾನ್ ರಸ್ತೆಯಲ್ಲಿರುವ ತನ್ನ ಮನೆಗೆ ತೆರಳಿ ತಂದೆ ಶಾದಿಲ್‌ಗೆ ವಿಚಾರ ತಿಳಿಸಿದ್ದಾನೆ. ನಂತರ ಸಹೋದರ ಶೋಯೆಬ್ ಹಾಗೂ ಸ್ನೇಹಿತ ಸಾಹಿಲ್‌ನೊಡನೆ ಅರ್ಬಾದ್ ಖಾನ್‌ನನ್ನು ಹುಡಿಕಿಕೊಂಡು ಎರಡು ಬೈಕ್‌ನಲ್ಲಿ ಬಂದಿದ್ದಾರೆ.

ಈ ವೇಳೆ ಶಾಂತಿನಗರದ ಲಾಲ್ ಬೇಕರಿ ಬಳಿ ಅರ್ಬಾದ್ ಹಾಗೂ ಸ್ನೇಹಿತರು ಕುಳಿತಿದ್ದರು. ಅಲ್ಲಿಗೆ ಬಂದ ನಾಲ್ವರು ಅರ್ಬಾದ್ ಹಾಗೂ ಸ್ನೇಹಿತರ ಮೇಲೆ ದಾಳಿ ನಡೆಸಿದ್ದಾರೆ. ಈ ನಡುವೆ ಎರಡೂ ಗುಂಪುಗಳ ನಡುವೆ ಜಗಳವಾಗಿದೆ.

ನಂತರ ಶಾಬಾದ್ ತನ್ನೊಡನೆ ತಂದಿದ್ದ ಚಾಕುವಿನಿಂದ ಅರ್ಬಾದ್‌ಗೆ ಇರಿದಿದ್ದಾನೆ. ಈ ನಡುವೆ ಶಾಬಾದ್ ಮೇಲೂ ಹಲ್ಲೆಯಾಗಿದೆ. ಚಾಕು ಇರಿತದಿಂದ ತೀವ್ರ ರಕ್ತಸ್ರಾವವಾಗಿ ಅರ್ಬಾದ್ ಖಾನ್ ಮೃತಪಟ್ಟಿದ್ದಾನೆ. ಗಾಯಗೊಂಡಿರುವ ಶಾಬಾದ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣಕ್ಕೆ ಸಂಬಂದಿಸಿದಂತೆ ಶಾಬಾದ್, ತಂದೆ ಶಾದಿಲ್, ಸಹೋದರ ಶೋಯೆಬ್ ಹಾಗೂ ಸ್ನೇಹಿತ ಸಾಹಿಲ್ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್. ಎಸ್.‌ ದಿನೇಶ್‌ ಕುಮಾರ್

ಮೈಸೂರಿನವನಾದ ನಾನು, 1994ರಲ್ಲಿ ಮೈಸೂರಿನ ಬನುಮಯ್ಯ ಕಾಲೇಜಿನಲ್ಲಿ ಬಿಕಾಂ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 22 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಸಂಕ್ರಾಂತಿʼಯಿಂದ ಪ್ರಾರಂಭಿಸಿ, ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರ, ಮುಖ್ಯ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆಯಲ್ಲಿ ಕಳೆದ 15 ವರ್ಷಗಳಿಂದ ಅಪರಾಧ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸ.

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

12 mins ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

2 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

10 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

10 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

11 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

11 hours ago