ಅಪರಾಧ

ಬೆಂಗಳೂರು | ರಾಬರಿ ಗ್ಯಾಂಗ್ ಬಂಧನ

ಬೆಂಗಳೂರು : ಇಲ್ಲಿನ ಹೊರವಲಯದಲ್ಲಿ ರಾಬರಿ ನಡೆಸುತ್ತಿದ್ದ ಅಪ್ರಾಪ್ತರ ತಂಡದ ಹೆಡೆಮುರಿಕಟ್ಟುವಲ್ಲಿ ಬೆಂಗಳೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರು ಜನ ಅಪ್ರಾಪ್ತರು ಸೇರಿ ಅಪರಾಧ ಹಿನ್ನೆಲೆ ಇರೋ ಓರ್ವನನ್ನು ಒಳಗೊಂಡಿದ್ದ ತಂಡವನ್ನು ಬಂಧಿಸಲಾಗಿದೆ. ಕೇವಲ ಮೂರು ದಿನಗಳಲ್ಲಿ ೩೭ ಕಡೆ ಈ ತಂಡ ದರೋಡೆ ನಡೆಸಿತ್ತು. ಮಾದನಾಯಕನಹಳ್ಳಿ, ದೊಡ್ಡಬಳ್ಳಾಪುರ, ಸೂರ್ಯನಗರ, ನೆಲಮಂಗಲ ಹಾಗೂ ಬ್ಯಾಡರಹಳ್ಳಿ ಭಾಗದಲ್ಲಿ ತಂಡ ಕೈ ಚಳಕ ತೋರಿಸಿ, ಭಾರಿ ಪ್ರಮಾಣದಲ್ಲಿ ಕಳ್ಳತನ ನಡೆಸಿತ್ತು.

ಇದನ್ನೂ ಓದಿ:-ಬೆಂಗಳೂರು | 7.80 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ ; ವಿದೇಶಿ ಪ್ರಜೆಗಳ ಬಂಧನ

ರಾತ್ರಿ ವೇಳೆ ಮೂರು ಬೈಕ್‌ಗಳಲ್ಲಿ ಸುತ್ತುತ್ತಿದ್ದ ಈ ಖತರ್ನಾಕ್ ತಂಡ, ಕಾರುಗಳನ್ನು ಹಾಗೂ ಲಾರಿಗಳನ್ನು ಅಡ್ಡಹಾಕಿ ಸುಲಿಗೆ ಮಾಡುತ್ತಿತ್ತು. ಚಾಕು ತೋರಿಸಿ ಮೊಬೈಲ್, ಹಣ ಕಸಿದುಕೊಂಡು ಆರೋಪಿಗಳು ಪರಾರಿ ಆಗುತ್ತಿದ್ದರು. ಹಣ ಕೊಡಲು ನಿರಾಕರಿಸಿದರೆ ಚಾಕು ಹಾಕಿ ಓಡಿ ಹೋಗುತ್ತಿದ್ದರು. ಘಟನೆ ಬಳಿಕ ಎಚ್ಚೆತ್ತುಕೊಂಡ ಪೊಲೀಸರು ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಪ್ರಕರಣಗಳ ಹಿಂದೆ ಒಂದು ದೊಡ್ಡ ಗ್ಯಾಂಗ್ ಇರುವುದು ಗೊತ್ತಾಗಿತ್ತು. ಆರೋಪಿಗಳ ಸೆರೆಗೆ ವಿಶೇಷ ತಂಡ ರಚಿಸಿದ್ದ ಪೊಲೀಸರು ತಂಡದ ಸದಸ್ಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ೯ ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಆಂದೋಲನ ಡೆಸ್ಕ್

Recent Posts

ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…

1 hour ago

ನಾಲ್ಕೈದು ದಿನಗಳ ನಂತರ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…

1 hour ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿಗೆ ಮೊಜ್ತಾಬಾ

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…

3 hours ago

ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಔತಣಕೂಟ: ಯಾವ ದಿನ ಗೊತ್ತಾ.?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕೆಲ ದಿನಗಳ ಹಿಂದೆ ಡಿನ್ನರ್‌ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…

3 hours ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…

3 hours ago

ಹಳೆ ಕೆಸರೆಯ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಕಸದ ರಾಶಿ

ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…

4 hours ago