ಅಪರಾಧ

ಬೆಂಗಳೂರು | ರಾಬರಿ ಗ್ಯಾಂಗ್ ಬಂಧನ

ಬೆಂಗಳೂರು : ಇಲ್ಲಿನ ಹೊರವಲಯದಲ್ಲಿ ರಾಬರಿ ನಡೆಸುತ್ತಿದ್ದ ಅಪ್ರಾಪ್ತರ ತಂಡದ ಹೆಡೆಮುರಿಕಟ್ಟುವಲ್ಲಿ ಬೆಂಗಳೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರು ಜನ ಅಪ್ರಾಪ್ತರು ಸೇರಿ ಅಪರಾಧ ಹಿನ್ನೆಲೆ ಇರೋ ಓರ್ವನನ್ನು ಒಳಗೊಂಡಿದ್ದ ತಂಡವನ್ನು ಬಂಧಿಸಲಾಗಿದೆ. ಕೇವಲ ಮೂರು ದಿನಗಳಲ್ಲಿ ೩೭ ಕಡೆ ಈ ತಂಡ ದರೋಡೆ ನಡೆಸಿತ್ತು. ಮಾದನಾಯಕನಹಳ್ಳಿ, ದೊಡ್ಡಬಳ್ಳಾಪುರ, ಸೂರ್ಯನಗರ, ನೆಲಮಂಗಲ ಹಾಗೂ ಬ್ಯಾಡರಹಳ್ಳಿ ಭಾಗದಲ್ಲಿ ತಂಡ ಕೈ ಚಳಕ ತೋರಿಸಿ, ಭಾರಿ ಪ್ರಮಾಣದಲ್ಲಿ ಕಳ್ಳತನ ನಡೆಸಿತ್ತು.

ಇದನ್ನೂ ಓದಿ:-ಬೆಂಗಳೂರು | 7.80 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ ; ವಿದೇಶಿ ಪ್ರಜೆಗಳ ಬಂಧನ

ರಾತ್ರಿ ವೇಳೆ ಮೂರು ಬೈಕ್‌ಗಳಲ್ಲಿ ಸುತ್ತುತ್ತಿದ್ದ ಈ ಖತರ್ನಾಕ್ ತಂಡ, ಕಾರುಗಳನ್ನು ಹಾಗೂ ಲಾರಿಗಳನ್ನು ಅಡ್ಡಹಾಕಿ ಸುಲಿಗೆ ಮಾಡುತ್ತಿತ್ತು. ಚಾಕು ತೋರಿಸಿ ಮೊಬೈಲ್, ಹಣ ಕಸಿದುಕೊಂಡು ಆರೋಪಿಗಳು ಪರಾರಿ ಆಗುತ್ತಿದ್ದರು. ಹಣ ಕೊಡಲು ನಿರಾಕರಿಸಿದರೆ ಚಾಕು ಹಾಕಿ ಓಡಿ ಹೋಗುತ್ತಿದ್ದರು. ಘಟನೆ ಬಳಿಕ ಎಚ್ಚೆತ್ತುಕೊಂಡ ಪೊಲೀಸರು ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಪ್ರಕರಣಗಳ ಹಿಂದೆ ಒಂದು ದೊಡ್ಡ ಗ್ಯಾಂಗ್ ಇರುವುದು ಗೊತ್ತಾಗಿತ್ತು. ಆರೋಪಿಗಳ ಸೆರೆಗೆ ವಿಶೇಷ ತಂಡ ರಚಿಸಿದ್ದ ಪೊಲೀಸರು ತಂಡದ ಸದಸ್ಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ೯ ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

2 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

2 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

4 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

4 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

5 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

5 hours ago